ಬ್ರೇಕಿಂಗ್ ನ್ಯೂಸ್
26-08-21 01:24 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 26: ಸುಪ್ರೀಂ ಕೋರ್ಟ್ ಕೊಲಿಜಿಯಂ ಪ್ಯಾನೆಲ್ ಶಿಫಾರಸು ಮಾಡಿರುವ ಒಂಬತ್ತು ಮಂದಿ ನ್ಯಾಯಾಧೀಶರ ಪಟ್ಟಿಗೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ. ಈ ಪೈಕಿ ಮೂವರು ಮಹಿಳಾ ನ್ಯಾಯಾಧೀಶರಿದ್ದಾರೆ. ಎಲ್ಲವೂ ಅಂದ್ಕೊಂಡಂತೇ ಆದರೆ, 2027ರಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಮಹಿಳೆಯೊಬ್ಬರು ಆಯ್ಕೆಯಾಗಲಿದ್ದಾರೆ. ಆ ಹೆಗ್ಗಳಿಕೆ ಕರ್ನಾಟಕದ ಕನ್ನಡಿಗ ಮಹಿಳೆಯೊಬ್ಬರಿಗೆ ಸಿಗಲಿದೆ ಎನ್ನುವುದು ಮಹತ್ವದ ಅಂಶ.

ಕರ್ನಾಟಕ ಹೈಕೋರ್ಟಿನ ಮುಖ್ಯ ನ್ಯಾಯಾಧೀಶ ಎ.ಎಸ್.ಓಕಾ, ನ್ಯಾಯಾಧೀಶೆ ಬಿ.ವಿ.ನಾಗರತ್ನ, ತೆಲಂಗಾಣ ಹೈಕೋರ್ಟ್ ಮುಖ್ಯ ನ್ಯಾಯಾಧೀಶೆ ಹಿಮಾ ಕೊಹ್ಲಿ, ಗುಜರಾತ್ ಹೈಕೋರ್ಟಿನ ವಿಕ್ರಮ್ ನಾಥ್, ಸಿಕ್ಕಿಂ ಹೈಕೋರ್ಟಿನ ಮುಖ್ಯ ನ್ಯಾಯಾಧೀಶೆ ಜೆ.ಕೆ.ಮಹೇಶ್ವರಿ, ಕೇರಳ ಹೈಕೋರ್ಟಿನ ಸಿ.ಟಿ.ರವಿಕುಮಾರ್, ಮದ್ರಾಸ್ ಹೈಕೋರ್ಟಿನ ಎಂ.ಎಂ.ಸುಂದರೇಶ್, ಗುಜರಾತ್ ಹೈಕೋರ್ಟ್ ನ್ಯಾಯಾಧೀಶ ಬೇಳ ಎಂ. ತ್ರಿವೇದಿ ಮತ್ತು ಹಿರಿಯ ವಕೀಲರಾಗಿರುವ ಪಿ.ಎಸ್. ನರಸಿಂಹ ಅವರನ್ನು ಕೊಲಿಜಿಯಂ ಸುಪ್ರೀಕೋರ್ಟಿಗೆ ಶಿಫಾರಸು ಮಾಡಿತ್ತು.
ಪ್ರಸಕ್ತ ಸುಪ್ರೀಂ ಕೋರ್ಟ್ ನಲ್ಲಿ 24 ಮಂದಿ ನ್ಯಾಯಾಧೀಶರಿದ್ದಾರೆ. ಈಗ ಒಂಬತ್ತು ಮಂದಿಯ ಸೇರ್ಪಡೆಯಾಗಿದ್ದು, ಇನ್ನೊಂದು ಸ್ಥಾನ ಖಾಲಿಯಿದೆ. ಈಗ ಶಿಫಾರಸು ಆಗಿರುವ ಮೂವರು ಮಹಿಳಾ ನ್ಯಾಯಾಧೀಶರಲ್ಲಿ ಬಿ.ವಿ.ನಾಗರತ್ನ ಹಿರಿಯರಾಗಿದ್ದು, 2027ರಲ್ಲಿ ಭಾರತದ ಮುಖ್ಯ ನ್ಯಾಯಾಧೀಶ ಹುದ್ದೆಗೇರಲಿದ್ದಾರೆ. ಅದಲ್ಲದೆ, ಮೊಟ್ಟಮೊದಲ ಬಾರಿಗೆ ಮಹಿಳೆಯೊಬ್ಬರು ನ್ಯಾಯಾಂಗದ ಅತ್ಯುನ್ನತ ಸ್ಥಾನ ಅಲಂಕರಿಸಲಿದ್ದಾರೆ.

1950, ಜನವರಿ 26ರಂದು ಸುಪ್ರೀಂ ಕೋರ್ಟ್ ಅಸ್ತಿತ್ವಕ್ಕೆ ಬಂದ 70 ವರ್ಷಗಳಲ್ಲಿ ಕೇವಲ ಎಂಟು ಮಂದಿ ಮಹಿಳೆಯರಷ್ಟೇ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ. 1989ರಲ್ಲಿ ಫಾತಿಮಾ ಬೀವಿ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ಪೀಠದಲ್ಲಿ ನ್ಯಾಯಾಧೀಶ ಹುದ್ದೆಗೇರಿದ್ದರು.
1962, ಅಕ್ಟೋಬರ್ 30ರಂದು ಜನಿಸಿದ್ದ ಬಿ.ವಿ.ನಾಗರತ್ನ, ಸುಪ್ರೀಂ ಕೋರ್ಟಿನಲ್ಲಿ ಮುಖ್ಯ ನ್ಯಾಯಾಧೀಶರಾಗಿ ನಿವೃತ್ತರಾಗಿರುವ ಇ.ಎಸ್.ವೆಂಕಟ್ರಾಮಯ್ಯ ಅವರ ಪುತ್ರಿ. 1987ರ ಅಕ್ಟೋಬರ್ 28ರಂದು ಬೆಂಗಳೂರು ಹೈಕೋರ್ಟಿನಲ್ಲಿ ವಕೀಲರಾಗಿ ಸೇವೆ ಆರಂಭಿಸಿದ್ದರು.
The Centre has approved all nine names recommended by the Supreme Court Collegium for appointment to the top court. Among the approved names is Justice Nagarathna, who can go on to become the country’s first woman CJI in 2027
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm