ಬ್ರೇಕಿಂಗ್ ನ್ಯೂಸ್
26-08-21 02:42 pm Headline Karnataka News Network ದೇಶ - ವಿದೇಶ
Photo credits : Representational
ಪಾಟ್ನಾ, ಆಗಸ್ಟ್ 26: ಪಶ್ಚಿಮ ಚಂಪಾರಣ್ ಜಿಲ್ಲೆಯ ಬಘಾದಲ್ಲಿ ದೋಣಿ ಮುಳುಗಡೆಯಾಗಿದ್ದು, ಅವಘಡದಲ್ಲಿ 20 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್ಡಿಆರ್ಎಫ್) ಅಧಿಕಾರಿಯ ಮಾಹಿತಿ ಪ್ರಕಾರ, ದಿಯಾರಾ ಪ್ರದೇಶದಲ್ಲಿರುವ ವಿವಿಧ ಗ್ರಾಮಗಳಿಂದ ಬಾಘಾ ನಗರದ ದೀನ್ ದಯಾಳ್ ಘಾಟ್ಗೆ ದೋಣಿಯಲ್ಲಿ 25 ಮಂದಿ ಪ್ರಯಾಣಿಸುತ್ತಿದ್ದರು.
ದೋಣಿ ಗಂಡಕ್ ನದಿಯ ಮಧ್ಯಕ್ಕೆ ತಲುಪಿದಾಗ ತೀವ್ರವಾಗಿ ಗಾಳಿ ಬೀಸಿರುವ ಪರಿಣಾಮ ಅಲೆಗಳು ಉಂಟಾಗಿ ದೋಣಿ ಮಗುಚಿದೆ. ಈ ಸಂದರ್ಭದಲ್ಲಿ 5 ಮಂದಿ ಈಜಿ ದಡ ಸೇರಿದ್ದು, ಉಳಿದ 20 ಮಂದಿ ನಾಪತ್ತೆಯಾಗಿದ್ದಾರೆ ಎಂದು ಎಸ್ಡಿಆರ್ಎಫ್ ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ನಾಪತ್ತೆಯಾಗಿರುವ ಜನರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದು, ಡೈವರ್ಗಳ ಸಹಾಯ ಪಡೆದಿದ್ದೇವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಿಹಾರ ಮತ್ತು ನೇಪಾಳದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಕಳೆದ ಒಂದು ತಿಂಗಳಿನಿಂದ ಉತ್ತರ ಬಿಹಾರದ ಹಲವು ಜಿಲ್ಲೆಗಳಲ್ಲಿ ಹರಿಯುವ ಗಂಡಕ್ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರವಾಹದಿಂದಾಗಿ ರೈಲು ಮತ್ತು ರಸ್ತೆ ಸೇರಿದಂತೆ ಹೆಚ್ಚಿನ ಸಾರಿಗೆ ವ್ಯವಸ್ಥೆಗಳನ್ನು ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಇಲ್ಲಿನ ಜನ ದೋಣಿ ಮೂಲಕ ಸಾಗಲು ಮುಂದಾಗಿದ್ದು, ಈ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.
At least 20 persons were reported missing in a boat mishap in Bihar's Bagha in West Champaran district on Thursday. According to an official of the state disaster response force (SDRF), 25 persons were in the boat at the time of the mishap. They were travelling from various villages located in the Diyara region to Deen Dayal Ghat in Bagha city.
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 05:34 pm
Mangalore Correspondent
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm