ಬ್ರೇಕಿಂಗ್ ನ್ಯೂಸ್
27-08-21 01:13 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 27: ತಾಲಿಬಾನಿ ಐಡಿಯಾಲಜಿ ಭಾರತಕ್ಕೆ ದೊಡ್ದ ಬೆದರಿಕೆಯಾಗಿದ್ದು ಅಫ್ಘಾನಿಸ್ತಾನದ ಯಾವುದೇ ಮುಸ್ಲಿಮರಿಗೆ ಭಾರತದಲ್ಲಿ ಆಶ್ರಯ ನೀಡಬಾರದು ಎಂದು ಅಂತರಾಷ್ಟ್ರೀಯ ಹಿಂದು ಪರಿಷದ್ ಮುಖ್ಯಸ್ಥ ಪ್ರವೀಣ್ ತೊಗಡಿಯಾ ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ.


ತಾಲಿಬಾನಿ ಸಿದ್ಧಾಂತದ ಕೇಂದ್ರ ಸ್ಥಾನ ಭಾರತದಲ್ಲಿದೆ. ಇದೇ ಐಡಿಯಾಲಜಿ ದೇಶದ ಭವಿಷ್ಯಕ್ಕೆ ಮಾರಕವಾಗಲಿದೆ. ದೇಶದಲ್ಲಿ ತಾಲಿಬಾನೀಕರಣ ಆಗುವುದನ್ನು ತಪ್ಪಿಸಲು ಭಾರತದ ಮೂರು ಮುಖ್ಯ ಇಸ್ಲಾಮಿಕ್ ಸಂಘಟನೆಗಳ ಮೇಲೆ ನಿಯಂತ್ರಣ ಹೇರಬೇಕಾಗಿದೆ ಎಂದು ಪ್ರವೀಣ್ ತೊಗಡಿಯಾ ಹೇಳಿದ್ದಾರೆ.
ಹೀಗಾಗಿ ಅಫ್ಘಾನಿಸ್ತಾನದ ಯಾವುದೇ ಮುಸ್ಲಿಮರಿಗೆ ದೇಶದಲ್ಲಿ ಆಶ್ರಯ ನೀಡಬಾರದು. ಇದೇ ವೇಳೆ, ಅಲ್ಲಿರುವ ಹಿಂದು ಮತ್ತು ಸಿಖ್ ಸಮುದಾಯದ ನಿವಾಸಿಗಳಿಗೆ ಭಾರತ ಅಗತ್ಯವಾಗಿ ಆಶ್ರಯ ನೀಡಬೇಕಾಗಿದೆ ಎಂದು ತೊಗಡಿಯಾ ಹೇಳಿದರು.




ತಾಲಿಬಾನ್ ಒಂದು ಸಿದ್ಧಾಂತ. ಈ ಮಾದರಿಯ ವಿಕೃತ ಸಿದ್ಧಾಂತದ ಕೇಂದ್ರ ಸ್ಥಾನ ಭಾರತದಲ್ಲೇ ಇದೆ. ಇದರ ನಿಯಂತ್ರಣಕ್ಕಾಗಿ ದೇಶದಲ್ಲಿ ದಾರುಲ್ ಉಲೂಮ್ ದೇವಬಂದಿ, ತಬ್ಲಿಘಿ ಜಮಾತ್ ಮತ್ತು ಜಮೀಯತ್ ಉಲೇಮಾ ಹಿಂದ್ ಮಾದರಿಯ ಸಂಘಟನೆಗಳ ಮೇಲೆ ನಿಷೇಧ ಹೇರಬೇಕು. ಈ ಮೂರು ಸಂಘಟನೆಗಳು ತಾಲಿಬಾನಿ ಐಡಿಯಾಲಜಿಯ ಪ್ರಮುಖ ಕೇಂದ್ರಗಳು. ಭಾರತ ಉಗ್ರವಾದದ ಬಹುದೊಡ್ಡ ಅಪಾಯವನ್ನು ಎದುರಿಸುತ್ತಿದ್ದು ದೇಶದ ಎಲ್ಲ ಶಕ್ತಿಗಳು ಸೇರಿ ಈ ಅಪಾಯವನ್ನು ಎದುರಿಸಬೇಕು. ದೇಶದ ಭವಿಷ್ಯದ ದೃಷ್ಟಿಯಿಂದ ಸರಕಾರ ಈ ಮೂರು ಸಂಘಟನೆಗಳ ಮೇಲೆ ನಿಯಂತ್ರಣ ಹೇರಬೇಕು ಎಂದು ಆಗ್ರಹಿಸಿದರು.
ಅಯೋಧ್ಯೆಯ ರಾಮ ಮಂದಿರದ ಕುರಿತ ಪ್ರಶ್ನೆಗೆ, ವಿಶ್ವ ಹಿಂದು ಪರಿಷತ್ ಅಧ್ಯಕ್ಷರಾಗಿದ್ದ ಅಶೋಕ್ ಸಿಂಘಲ್, ಶಿವಸೇನಾ ಮುಖ್ಯಸ್ಥರಾಗಿದ್ದ ಬಾಳ ಠಾಕ್ರೆ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ ಸಿಂಗ್ ಸ್ವಾತಂತ್ರ್ಯೋತ್ತರ ಭಾರತದ ಮೂವರು ಹೀರೋಗಳು ಎಂದು ಹೇಳಿದರು.
Afghan Muslims Should not Seek Refuge in India Says Pravin Togadia.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm