ಬ್ರೇಕಿಂಗ್ ನ್ಯೂಸ್
30-08-21 05:22 pm Headline Karnataka News Network ದೇಶ - ವಿದೇಶ
ಕಾಬೂಲ್, ಆಗಸ್ಟ್ 30: ಯುವಕ ಮತ್ತು ಯುವತಿಯರು ಜೊತೆಯಾಗಿ ಸಹ ಶಿಕ್ಷಣ ಪಡೆಯುವುದನ್ನು ನಿಷೇಧಿಸಿರುವ ತಾಲಿಬಾನ್, ಈಗ ಪುರುಷರು ಹೆಣ್ಮಕ್ಕಳಿಗೆ ಶಿಕ್ಷಣ ನೀಡುವಂತಿಲ್ಲ ಎಂದು ಹೇಳಿದೆ.
ತಾಲಿಬಾನ್ ಆಡಳಿತ ಪಡೆದುಕೊಂಡ ನಂತರ ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಅಲ್ಲಿನ ನಾಯಕರು, ಈಗ ಮತ್ತೊಂದು ರೀತಿಯ ಹೇಳಿಕೆ ನೀಡಿದ್ದಾರೆ. ಆರಂಭದಲ್ಲಿ ಹೆಣ್ಮಕ್ಕಳು ಶಿಕ್ಷಣವನ್ನೇ ಪಡೆಯುವಂತಿಲ್ಲ ಎಂದಿದ್ದರು. ಆನಂತರ, ಅಲ್ಲಿನ ಜನರು ಯುವತಿಯರಿಗೆ ನಿರ್ಬಂಧ ವಿಧಿಸುವ ನೀತಿ ಬಗ್ಗೆ ಆಕ್ರೋಶ ಮತ್ತು ವಿರೋಧ ವ್ಯಕ್ತವಾಗುತ್ತಿದ್ದಂತೆ ಎಲ್ಲ ರೀತಿಯ ಶಿಕ್ಷಣಕ್ಕೆ ಅವಕಾಶ ನೀಡುವುದಾಗಿ ಹೇಳಿದ್ದು, ಪುರುಷರು ಕಲಿಸುವಂತಿಲ್ಲ ಎಂದು ಮತ್ತೊಂದು ವಾದ ಮುಂದಿಟ್ಟಿದ್ದಾರೆ.
ಈ ಹಿಂದೆ ಶಿಕ್ಷಣ ಸಚಿವನಾಗಿದ್ದ ಶೇಖ್ ಅಬ್ದುಲ್ ಹಕ್ಕಾನಿಯನ್ನೇ ತಾಲಿಬಾನಿಗಳು ಉನ್ನತ ಶಿಕ್ಷಣ ಸಚಿವನಾಗಿ ಘೋಷಣೆ ಮಾಡಿದ್ದು, ಅಧಿಕಾರ ಸಿಕ್ಕ ಮರುಕ್ಷಣವೇ ಈ ಹೇಳಿಕೆ ನೀಡಿದ್ದಾನೆ. ಅಲ್ಲದೆ, ಇಡೀ ಶಿಕ್ಷಣ ಪದ್ಧತಿ ಷರೀಯತ್ ಕಾನೂನು ಪ್ರಕಾರವೇ ನಡೆಯಲಿದೆ ಎಂದಿದ್ದಾನೆ. ಅಲ್ಲದೆ, ಇಸ್ಲಾಂ ವಿರುದ್ಧ ಇರುವ ಎಲ್ಲ ನೀತಿಗಳನ್ನು ತೆಗೆದು ಹಾಕುವುದಾಗಿ ಹೇಳಿದ್ದಾನೆ.
ಯೂನಿವರ್ಸಿಟಿಗಳಲ್ಲಿ ಸಹ ಶಿಕ್ಷಣ ಪಡೆಯಬಹುದೇ ಎನ್ನುವ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ. ಆದರೆ, ಹೆಣ್ಮಕ್ಕಳ ಶಿಕ್ಷಣಕ್ಕೆ ಅವಕಾಶ ನೀಡಲು ತಾಲಿಬಾನಿಗಳು ಮುಂದಾಗಿದ್ದಾರೆ.
The Taliban have formally announced a ban on coeducation in Afghanistan, saying men would not be allowed to teach girl students in the country. The announcement comes a day after the group allowed Afghan women to study at university but have said that there would be a ban on mixed classes under their rule.
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 05:34 pm
Mangalore Correspondent
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm