ಬ್ರೇಕಿಂಗ್ ನ್ಯೂಸ್
01-09-21 09:17 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 01: ದೆಹಲಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ. ರಾಜಧಾನಿ ದೆಹಲಿ ಅಕ್ಷರಶಃ ಮಳೆ ನೀರಲ್ಲಿ ತೊಯ್ದು ತೊಪ್ಪೆಯಾಗಿದೆ. ಬುಧವಾರ ಸುರಿದ ವಿಪರೀತ ಮಳೆಯಿಂದ ಬೆಳಗಿನ ಜನ ಓಡಾಟದ ಅವಧಿಯಲ್ಲಿ ಪ್ರಮುಖ ರಸ್ತೆಗಳಲ್ಲಿ ನೀರು ನುಗ್ಗಿದ ಪರಿಣಾಮ ಭಾರಿ ಸಂಚಾರ ದಟ್ಟಣೆ ಉಂಟಾಗಿದೆ.
ರಾಜಧಾನಿ ಹಾಗೂ ನೆರೆಯ ಗುರ್ಗಾಂವ್ ಹಾಗೂ ನೋಯ್ಡಾಗಳಲ್ಲಿನ ಅನೇಕ ಭಾಗಗಳಲ್ಲಿ ಪಾದಚಾರಿಗಳು ಹಾಗೂ ವಾಹನ ಸವಾರರು ಪರದಾಡುವಂತಾಗಿದೆ.

ಫ್ಲೈ ಓವರ್ಗಳು ನದಿಯಂತಾಗಿ ರಭಸದಿಂದ ನೀರು ಸಾಗಿಸುತ್ತಿದ್ದರೆ, ಅನೇಕ ರಸ್ತೆಗಳು, ವಸತಿ ಪ್ರದೇಶಗಳು ಕೆರೆಯಂತಾಗಿದ್ದವು. ಮನೆಗಳ ಒಳಗೆ ನೀರು ನುಗ್ಗಿದ ಪರಿಣಾಮ ಜನರು ಏನು ಮಾಡುವುದೆಂದು ತೋಚದೆ ದಿಕ್ಕೆಟ್ಟರು. ಮನೆ, ಅಂಗಡಿಗಳಿಂದ ಬೆಲೆ ಬಾಳುವ ವಸ್ತುಗಳು ನೀರು ಪಾಲಾಗಿವೆ. ಪೀಠೋಪಕರಣ, ಎಲೆಕ್ಟ್ರಾನಿಕ್ಸ್ ವಸ್ತುಗಳು ಮುಂತಾದವು ನೀರು ನುಗ್ಗಿ ಹಾಳಾಗಿವೆ. ಕಟ್ಟಡದೊಳಗೆ ತುಂಬಿದ ಕೆಸರು ನೀರನ್ನು ಹೊರಹಾಕಲು ಹರಸಾಹಸ ಮಾಡುವಂತಾಗಿದೆ.






ರಾಜ್ಘಾಟ್ಗೆ ತೆರಳುವ ಯಮುನಾ ಸೇತುವೆ ಪ್ರದೇಶದಲ್ಲಿ ನೀರು ತುಂಬಿದ ಪರಿಣಾಮ ಕಿಲೋಮೀಟರ್ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಗಿದ್ದು, ಬಹಳ ನಿಧಾನಗತಿಯ ಸಂಚಾರ ಕಂಡುಬಂದಿದೆ.
1963ರ ಸೆಪ್ಟೆಂಬರ್ 16ರಂದು ಸುರಿದ 172.6 ಮಿಮೀ ಮಳೆ ಸಾರ್ವಕಾಲಿಕ ದಾಖಲೆಯಾಗಿದೆ. ಬುಧವಾರ ಬೆಳಿಗ್ಗೆ 8.30ರ ಬಳಿಕ ಕೇವಲ ಮೂರು ಗಂಟೆಯಲ್ಲಿ 75.6 ಮಿಮೀ ಮಳೆಯಾಗಿದೆ. ಇಡೀ ತಿಂಗಳ ವಾಡಿಕೆ ಮಳೆ ಮೊದಲ ಎರಡು ದಿನಗಳಲ್ಲಿಯೇ ಸುರಿದಿದೆ ಎಂದು ಐಎಂಡಿ ತಿಳಿಸಿದೆ.
ಗುರ್ಗಾಂವ್ನಲ್ಲಿ ಕೂಡ ಇದೇ ರೀತಿಯ ಸನ್ನಿವೇಶ ಉಂಟಾಗಿದೆ. ಇಲ್ಲಿ ಕಳೆದ 24 ಗಂಟೆಗಳಲ್ಲಿ 64.2 ಮಿಮೀ ಮಳೆ ಸುರಿದಿದೆ. ರಸ್ತೆಗಳು, ಮಾರುಕಟ್ಟೆಗಳು ಜಲಾವೃತವಾಗಿವೆ. ರಾಜಧಾನಿಯಲ್ಲಿ 2002ರ ಸೆಪ್ಟೆಂಬರ್ 13ರಂದು 126.8 ಮಿಮೀ ಮಳೆ ಸುರಿದಿತ್ತು.
Delhi on Wednesday received the highest single-day rain in September in 19 years. Visuals of inundated streets, huge traffic jams, and even boats on the streets, flooded social media.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm