ಬ್ರೇಕಿಂಗ್ ನ್ಯೂಸ್
01-09-21 09:17 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 01: ದೆಹಲಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ. ರಾಜಧಾನಿ ದೆಹಲಿ ಅಕ್ಷರಶಃ ಮಳೆ ನೀರಲ್ಲಿ ತೊಯ್ದು ತೊಪ್ಪೆಯಾಗಿದೆ. ಬುಧವಾರ ಸುರಿದ ವಿಪರೀತ ಮಳೆಯಿಂದ ಬೆಳಗಿನ ಜನ ಓಡಾಟದ ಅವಧಿಯಲ್ಲಿ ಪ್ರಮುಖ ರಸ್ತೆಗಳಲ್ಲಿ ನೀರು ನುಗ್ಗಿದ ಪರಿಣಾಮ ಭಾರಿ ಸಂಚಾರ ದಟ್ಟಣೆ ಉಂಟಾಗಿದೆ.
ರಾಜಧಾನಿ ಹಾಗೂ ನೆರೆಯ ಗುರ್ಗಾಂವ್ ಹಾಗೂ ನೋಯ್ಡಾಗಳಲ್ಲಿನ ಅನೇಕ ಭಾಗಗಳಲ್ಲಿ ಪಾದಚಾರಿಗಳು ಹಾಗೂ ವಾಹನ ಸವಾರರು ಪರದಾಡುವಂತಾಗಿದೆ.
ಫ್ಲೈ ಓವರ್ಗಳು ನದಿಯಂತಾಗಿ ರಭಸದಿಂದ ನೀರು ಸಾಗಿಸುತ್ತಿದ್ದರೆ, ಅನೇಕ ರಸ್ತೆಗಳು, ವಸತಿ ಪ್ರದೇಶಗಳು ಕೆರೆಯಂತಾಗಿದ್ದವು. ಮನೆಗಳ ಒಳಗೆ ನೀರು ನುಗ್ಗಿದ ಪರಿಣಾಮ ಜನರು ಏನು ಮಾಡುವುದೆಂದು ತೋಚದೆ ದಿಕ್ಕೆಟ್ಟರು. ಮನೆ, ಅಂಗಡಿಗಳಿಂದ ಬೆಲೆ ಬಾಳುವ ವಸ್ತುಗಳು ನೀರು ಪಾಲಾಗಿವೆ. ಪೀಠೋಪಕರಣ, ಎಲೆಕ್ಟ್ರಾನಿಕ್ಸ್ ವಸ್ತುಗಳು ಮುಂತಾದವು ನೀರು ನುಗ್ಗಿ ಹಾಳಾಗಿವೆ. ಕಟ್ಟಡದೊಳಗೆ ತುಂಬಿದ ಕೆಸರು ನೀರನ್ನು ಹೊರಹಾಕಲು ಹರಸಾಹಸ ಮಾಡುವಂತಾಗಿದೆ.
ರಾಜ್ಘಾಟ್ಗೆ ತೆರಳುವ ಯಮುನಾ ಸೇತುವೆ ಪ್ರದೇಶದಲ್ಲಿ ನೀರು ತುಂಬಿದ ಪರಿಣಾಮ ಕಿಲೋಮೀಟರ್ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಗಿದ್ದು, ಬಹಳ ನಿಧಾನಗತಿಯ ಸಂಚಾರ ಕಂಡುಬಂದಿದೆ.
1963ರ ಸೆಪ್ಟೆಂಬರ್ 16ರಂದು ಸುರಿದ 172.6 ಮಿಮೀ ಮಳೆ ಸಾರ್ವಕಾಲಿಕ ದಾಖಲೆಯಾಗಿದೆ. ಬುಧವಾರ ಬೆಳಿಗ್ಗೆ 8.30ರ ಬಳಿಕ ಕೇವಲ ಮೂರು ಗಂಟೆಯಲ್ಲಿ 75.6 ಮಿಮೀ ಮಳೆಯಾಗಿದೆ. ಇಡೀ ತಿಂಗಳ ವಾಡಿಕೆ ಮಳೆ ಮೊದಲ ಎರಡು ದಿನಗಳಲ್ಲಿಯೇ ಸುರಿದಿದೆ ಎಂದು ಐಎಂಡಿ ತಿಳಿಸಿದೆ.
ಗುರ್ಗಾಂವ್ನಲ್ಲಿ ಕೂಡ ಇದೇ ರೀತಿಯ ಸನ್ನಿವೇಶ ಉಂಟಾಗಿದೆ. ಇಲ್ಲಿ ಕಳೆದ 24 ಗಂಟೆಗಳಲ್ಲಿ 64.2 ಮಿಮೀ ಮಳೆ ಸುರಿದಿದೆ. ರಸ್ತೆಗಳು, ಮಾರುಕಟ್ಟೆಗಳು ಜಲಾವೃತವಾಗಿವೆ. ರಾಜಧಾನಿಯಲ್ಲಿ 2002ರ ಸೆಪ್ಟೆಂಬರ್ 13ರಂದು 126.8 ಮಿಮೀ ಮಳೆ ಸುರಿದಿತ್ತು.
Delhi on Wednesday received the highest single-day rain in September in 19 years. Visuals of inundated streets, huge traffic jams, and even boats on the streets, flooded social media.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 09:22 pm
Mangalore Correspondent
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm