ಬ್ರೇಕಿಂಗ್ ನ್ಯೂಸ್
03-09-21 02:56 pm Headline Karnataka News Network ದೇಶ - ವಿದೇಶ
ತಿರುವನಂತಪುರ, ಸೆ.3: ಕೇರಳದ ಪಾಲಕ್ಕಾಡ್ ಜಿಲ್ಲೆಯ ಮಾಥೂರ್ ಗ್ರಾಮ ಪಂಚಾಯ್ತಿಗೆ ಹೋಗುವ ಗ್ರಾಮಸ್ತರು ಅಥವಾ ಫಲಾನುಭವಿಗಳು ಪಂಚಾಯ್ತಿಯ ಅಧಿಕಾರಿಗಳು , ಜನಪ್ರತಿನಿಧಿಗಳನ್ನು ಸರ್, ಮೇಡಂ ಎಂದು ಕರೆಯುವುದನ್ನು ನಿಷೇಧಿಸಲಾಗಿದೆ. ಇನ್ನು ಮುಂದೆ ಹೆಸರು ಅಥವಾ ಪದನಾಮದಿಂದ(ಹುದ್ದೆ) ಕರೆಯಬೇಕೆಂಬ ನಿಯಮವನ್ನು ಜಾರಿಗೆ ತರುವ ನಿರ್ಣಯವನ್ನು ಕೈಗೊಳ್ಳಲಾಗಿದೆ.
ವಸಾಹತುಶಾಹಿ ಕಾಲದಲ್ಲಿ ಗೌರವವದ ಹೆಸರಲ್ಲಿ ಬಳಸುತ್ತಿದ್ದ ಈ ಪದಗಳ ಬಳಕೆಯನ್ನು ನಿಷೇಧಿಸಿ ಜನಸಾಮಾನ್ಯರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಡುವೆ ಪರಸ್ಪರ ಪ್ರೀತಿ,ವಿಶ್ವಾಸದ ಬಾಂಧವ್ಯ ವೃದ್ಧಿಸುವುದಕ್ಕಾಗಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಈ ಮೂಲಕ ಇಂಥ ಪದಗಳ ಬಳಕೆ ನಿಷೇಧಿಸಿದ ದೇಶದ ಮೊದಲ ಗ್ರಾಮ ಪಂಚಾಯ್ತಿ ಎಂದು ಮಾಥೂರ್ ಗ್ರಾಮ ಪಂಚಾಯ್ತಿ ಇತಿಹಾಸದ ಪುಟ ಸೇರಿದೆ. ಕಾಂಗ್ರೆಸ್ ನೇತೃತ್ವದ ಈ ಗ್ರಾಮ ಪಂಚಾಯ್ತಿಯಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲ ಸದಸ್ಯರು ಒಕ್ಕೊರಲಿನಿಂದ ಈ ಐತಿಹಾಸಿಕ ನಿರ್ಣಯಕ್ಕೆ ಒಪ್ಪಿಗೆ ಸೂಚಿಸಿದ್ದಾರೆ .

ಸರ್, ಮೇಡಂ ಎಂಬ ಪದಗಳ ಬಳಕೆಯಿಂದಾಗಿ ಪಂಚಾಯ್ತಿಗೆ ಸಮಸ್ಯೆಗಳನ್ನು ಹೊತ್ತು ತರುವ ಜನರು ಮತ್ತು ಜನಪ್ರತಿನಿಧಿಗಳು,ಅಧಿಕಾರಿಗಳ ನಡುವೆ ಸಣ್ಣದೊಂದು ಅಂತರ ಸೃಷ್ಟಿಯಾಗುತ್ತಿತ್ತು. ಹಾಗಾಗಿ ಇಂಥದ್ದೊಂದು ನಿಯಮ ಕೈಗೊಂಡಿದ್ದೇವೆ ‘ ಎಂದು ಮಾಥೂರ್ ಪಂಚಾಯತ್ ಉಪಾಧ್ಯಕ್ಷ ಪಿ ಆರ್ ಪ್ರಸಾದ್ ತಿಳಿಸಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಪ್ರಜೆಯೇ ಶ್ರೇಷ್ಠ ಎಂಬುದನ್ನು ತಿಳಿಸುವುದಕ್ಕಾಗಿ ಈಗಿರುವ ಅಪೇಕ್ಷಾ ನಮೂನೆ (ಅರ್ಜಿ ನಮೂನೆ) ಎಂಬ ಪದವನ್ನು ಪದಲಿಸಿ ಆ ಜಾಗದಲ್ಲಿ ಅವತಕ್ಷ ಪತ್ರ(ಹಕ್ಕುಗಳ ಪ್ರಮಾಣಪತ್ರ) ಎಂದು ಬದಲಾಯಿಸಲು ಮಾಥೂರ್ ಪಂಚಾಯ್ತಿ ಅಧಿಕಾರಿಗಳು ನಿರ್ಧರಿಸಿದ್ದಾರೆ. ‘ಅಪೇಕ್ಷಾ’ ಎಂದರೆ ಮಲಯಾಳಂ ಭಾಷೆಯಲ್ಲಿ ವಿನಂತಿ ಎಂದರ್ಥ.
No Sir and Madam Usage in This Village Gram Panchayat Office in Kerala.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm