ಬ್ರೇಕಿಂಗ್ ನ್ಯೂಸ್
06-09-21 02:36 pm Headline Karnataka News Network ದೇಶ - ವಿದೇಶ
ಲಕ್ನೋ, ಸೆ.6: ಯೋಗಿ ಆದಿತ್ಯನಾಥ್ ಸರಕಾರದ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಉತ್ತರ ಪ್ರದೇಶದ ಮಾಜಿ ರಾಜ್ಯಪಾಲ ಅಜೀಜ್ ಖುರೇಷಿ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ.
ಬಿಜೆಪಿ ನಾಯಕ ಆಕಾಶ್ ಕುಮಾರ್ ಸಕ್ಸೇನಾ ನೀಡಿರುವ ದೂರಿನ ಪ್ರಕಾರ ರಾಮಪುರ ಜಿಲ್ಲೆಯ ಸಿವಿಲ್ ಲೈನ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯೋಗಿ ಆದಿತ್ಯನಾಥ್ ಸರ್ಕಾರ ಜನರ ರಕ್ತ ಹೀರುವ ಸರಕಾರ ಎಂದು ಅಜೀಜ್ ಖುರೇಷಿ ಹೇಳಿಕೆ ನೀಡಿದ್ದಾರೆ ಎಂದು ಸಕ್ಸೇನಾ ದೂರಿನಲ್ಲಿ ತಿಳಿಸಿದ್ದಾರೆ.
ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಮನೆಗೆ ಭೇಟಿ ನೀಡಿದ ವೇಳೆ ಅಜೀಜ್ ಖುರೇಷಿ ಈ ಹೇಳಿಕೆ ನೀಡಿದ್ದಾರೆಂದು ಸಕ್ಸೇನಾ ತಿಳಿಸಿದ್ದಾರೆ. ಖುರೇಷಿ ಹೇಳಿಕೆಯಿಂದ ಎರಡು ಸಮುದಾಯಗಳ ನಡುವೆ ಸಂಘರ್ಷ ಸೃಷ್ಟಿಯಾಗಲಿದೆ. ಅಶಾಂತಿಗೆ ಕಾರಣವಾಗಲಿದೆ ಎಂದು ಸಕ್ಸೇನಾ ತಿಳಿಸಿದ್ದು, ಇದರ ಸಾಕ್ಷ್ಯಕ್ಕಾಗಿ ಪೊಲೀಸರಿಗೆ ಹೇಳಿಕೆಯುಳ್ಳ ದಾಖಲೆಯನ್ನು ನೀಡಿದ್ದಾರೆ.

ಖುರೇಷಿ ಅವರ ವಿರುದ್ಧ 153 ಎ( ಧರ್ಮಗಳ ನಡುವೆ ವಿಷಬೀಜ ಬಿತ್ತುವುದು), 153 ಬಿ (ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ತರುವುದು), 124 ಎ (ದೇಶದ್ರೋಹ), 505(1) ಬಿ (ಸಮಾಜದಲ್ಲಿ ಭಯ ಸೃಷ್ಟಿಸುವುದು) ಸೆಕ್ಷನ್ ಪ್ರಕಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿರುವ ಅಜೀಜ್ ಖುರೇಷಿ 2014ರಿಂದ 2015ರ ವರೆಗೆ ಮಿಜೋರಾಂ ರಾಜ್ಯಪಾಲರಾಗಿದ್ದರು. ಕೆಲ ಕಾಲ ಉತ್ತರ ಪ್ರದೇಶದ ರಾಜ್ಯಪಾಲರಾಗಿಯೂ ಕರ್ತವ್ಯ ನಿರ್ವಹಿಸಿದ್ದರು.
Former Uttar Pradesh Governor Aziz Qureshi has been booked for sedition over his alleged derogatory remarks against the Yogi Adityanath government in the state, police said on Monday.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 07:33 pm
Mangalore Correspondent
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm