ಬ್ರೇಕಿಂಗ್ ನ್ಯೂಸ್
08-09-20 12:14 pm Headline Karnataka News Network ದೇಶ - ವಿದೇಶ
ಲಡಾಖ್, ಸೆಪ್ಟೆಂಬರ್ 7: ಪೂರ್ವ ಲಡಾಖ್ನಲ್ಲಿ ಭಾರತ ಮತ್ತು ಚೀನಾ ಗಡಿಯಲ್ಲಿ ನಿನ್ನೆ ಮಧ್ಯರಾತ್ರಿಯಿಂದ ಗುಂಡಿನ ಚಕಮಕಿ ಶುರುವಾಗಿದ್ದು, ಆತಂಕ ಸೃಷ್ಟಿಯಾಗಿದೆ. ಇದರ ಬೆನ್ನಲ್ಲೇ ಕದನದ ಮುನ್ಸೂಚನೆಯೂ ಸಿಗುತ್ತಿದೆ.
ಪ್ಯಾನ್ಗಾಂಗ್ ಸರೋವರ ಪ್ರದೇಶದಲ್ಲಿ ಉಭಯ ದೇಶಗಳ ನಡುವೆ ಗುಂಡಿನ ಸದ್ದು ಕೇಳಿಬಂದಿದೆ. ಪೂರ್ವ ಲಡಾಖ್ನ ವಾಸ್ತವ ನಿಯಂತ್ರಣ ರೇಖೆಯಲ್ಲಿ (ಎಲ್ಎಸಿ) ಭಾರತೀಯ ಸೇನೆ ಮತ್ತು ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ(ಪಿಎಲ್ಎ) ನಡುವೆ ಚಕಮಕಿ ಶುರುವಾಗಿರುವುದಾಗಿ ವರದಿಯಾಗಿದೆ.
1975ರ ಬಳಿಕ ಮೊದಲ ವಾರ್ನಿಂಗ್ ಶಾಟ್ ಅಥವಾ ಗುಂಡಿನ ಚಕಮಕಿ ಇದು ಎಂದು ಹೇಳಲಾಗುತ್ತಿದೆ.
ಎರಡೂ ದೇಶಗಳು ಇದೀಗ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿವೆ. ಪ್ಯಾಂಗಾಂಗ್ ಸರೋವರದ ದಕ್ಷಿಣ ದಂಡೆಯಲ್ಲಿರುವ ಎಲ್ಎಸಿ ದಾಟಿ ತಮ್ಮ ಮೇಲೆ ಭಾರತೀಯರ ಯೋಧರು ಗುಂಡಿನ ದಾಳಿ ನಡೆಸಿದ್ದ ಹಿನ್ನೆಲೆಯಲ್ಲಿ ಪ್ರತಿಯಾಗಿ ನಾವು ಗುಂಡಿನ ದಾಳಿ ನಡೆಸಿರುವುದಾಗಿ ಚೀನಾ ಆರೋಪಿಸುತ್ತಿದೆ.
ಇದಕ್ಕೆ ವ್ಯತಿರಿಕ್ತವಾಗಿ ಭಾರತದ ಮೇಲೆಯೇ ಚೀನಾ ಗಂಭೀರ ಆರೋಪ ಮಾಡಿದೆ. ಭಾರತದ ಸೇನೆ ಶೆನ್ ಪಾವೊ ಪರ್ವತಗಳ ಬಳಿ LOC ಉಲ್ಲಂಘನೆ ಮಾಡಿದೆ. ಪಾಂಗೊಂಗ್ ಸರೋವರದಲ್ಲಿ ಭಾರತೀಯ ಸೇನೆಯಿಂದ ಗುಂಡಿನ ದಾಳಿ ನಡೆದಿದೆ. ಭಾರತದ ಈ 2 ಕ್ರಮಗಳು ಗಡಿಯಲ್ಲಿ ಪ್ರಚೋದನಕಾರಿ ಹೆಜ್ಜೆಗಳಾಗಿವೆ. ಗಡಿ ದಾಟಿ ಬಂದು ಚೀನಾದ ಪ್ರದೇಶವಾದ ಬಾಂಗೋಂಗ್ ಹುನಾನ್ಗೆ ಬಂದಿದ್ದರು ಎಂಬ ಗಂಭೀರ ಆರೋಪ ಹೊರಿಸಿದೆ. ಆದರೆ, ಚೀನಾ ಆರೋಪಗಳನ್ನು ಭಾರತ ಸಾರಾಸಗಟಾಗಿ ತಳ್ಳಿಹಾಕಿದೆ.
ಇನ್ನೊಂದೆಡೆ ಭಾರತ ಮತ್ತು ಚೀನಾ ಗಡಿಯಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿರುವುದರ ನಡುವೆಯೇ ಮತ್ತೊಂದು ಮಹತ್ವದ ಬೆಳವಣಿಗೆ ನಡೆಯುತ್ತಿದೆ. ಇಂದು ಭಾರತ-ಚೀನಾ ವಿದೇಶಾಂಗ ಸಚಿವರ ಭೇಟಿಯಾಗುವ ಸಂಭವ ಇದೆ. ಎರಡೂ ದೇಶಗಳ ವಿದೇಶಾಂಗ ಸಚಿವರು ಮಾಸ್ಕೋದಲ್ಲಿ ಭೇಟಿ ಸಾಧ್ಯತೆಯಿದ್ದು ಈಗಾಗಲೇ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮಾಸ್ಕೋ ತಲುಪಿದ್ದಾರೆ. ಅವರು ಎಸ್ಸಿಒ ಸಭೆಯಲ್ಲಿ ಭಾಗವಹಿಸಲು ಮಾಸ್ಕೋಗೆ ಭೇಟಿ ನೀಡಿದ್ದಾರೆ.
15-04-26 03:15 pm
HK News Staffer
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm