ಬ್ರೇಕಿಂಗ್ ನ್ಯೂಸ್
08-09-20 12:14 pm Headline Karnataka News Network ದೇಶ - ವಿದೇಶ
ಲಡಾಖ್, ಸೆಪ್ಟೆಂಬರ್ 7: ಪೂರ್ವ ಲಡಾಖ್ನಲ್ಲಿ ಭಾರತ ಮತ್ತು ಚೀನಾ ಗಡಿಯಲ್ಲಿ ನಿನ್ನೆ ಮಧ್ಯರಾತ್ರಿಯಿಂದ ಗುಂಡಿನ ಚಕಮಕಿ ಶುರುವಾಗಿದ್ದು, ಆತಂಕ ಸೃಷ್ಟಿಯಾಗಿದೆ. ಇದರ ಬೆನ್ನಲ್ಲೇ ಕದನದ ಮುನ್ಸೂಚನೆಯೂ ಸಿಗುತ್ತಿದೆ.
ಪ್ಯಾನ್ಗಾಂಗ್ ಸರೋವರ ಪ್ರದೇಶದಲ್ಲಿ ಉಭಯ ದೇಶಗಳ ನಡುವೆ ಗುಂಡಿನ ಸದ್ದು ಕೇಳಿಬಂದಿದೆ. ಪೂರ್ವ ಲಡಾಖ್ನ ವಾಸ್ತವ ನಿಯಂತ್ರಣ ರೇಖೆಯಲ್ಲಿ (ಎಲ್ಎಸಿ) ಭಾರತೀಯ ಸೇನೆ ಮತ್ತು ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ(ಪಿಎಲ್ಎ) ನಡುವೆ ಚಕಮಕಿ ಶುರುವಾಗಿರುವುದಾಗಿ ವರದಿಯಾಗಿದೆ.
1975ರ ಬಳಿಕ ಮೊದಲ ವಾರ್ನಿಂಗ್ ಶಾಟ್ ಅಥವಾ ಗುಂಡಿನ ಚಕಮಕಿ ಇದು ಎಂದು ಹೇಳಲಾಗುತ್ತಿದೆ.
ಎರಡೂ ದೇಶಗಳು ಇದೀಗ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿವೆ. ಪ್ಯಾಂಗಾಂಗ್ ಸರೋವರದ ದಕ್ಷಿಣ ದಂಡೆಯಲ್ಲಿರುವ ಎಲ್ಎಸಿ ದಾಟಿ ತಮ್ಮ ಮೇಲೆ ಭಾರತೀಯರ ಯೋಧರು ಗುಂಡಿನ ದಾಳಿ ನಡೆಸಿದ್ದ ಹಿನ್ನೆಲೆಯಲ್ಲಿ ಪ್ರತಿಯಾಗಿ ನಾವು ಗುಂಡಿನ ದಾಳಿ ನಡೆಸಿರುವುದಾಗಿ ಚೀನಾ ಆರೋಪಿಸುತ್ತಿದೆ.
ಇದಕ್ಕೆ ವ್ಯತಿರಿಕ್ತವಾಗಿ ಭಾರತದ ಮೇಲೆಯೇ ಚೀನಾ ಗಂಭೀರ ಆರೋಪ ಮಾಡಿದೆ. ಭಾರತದ ಸೇನೆ ಶೆನ್ ಪಾವೊ ಪರ್ವತಗಳ ಬಳಿ LOC ಉಲ್ಲಂಘನೆ ಮಾಡಿದೆ. ಪಾಂಗೊಂಗ್ ಸರೋವರದಲ್ಲಿ ಭಾರತೀಯ ಸೇನೆಯಿಂದ ಗುಂಡಿನ ದಾಳಿ ನಡೆದಿದೆ. ಭಾರತದ ಈ 2 ಕ್ರಮಗಳು ಗಡಿಯಲ್ಲಿ ಪ್ರಚೋದನಕಾರಿ ಹೆಜ್ಜೆಗಳಾಗಿವೆ. ಗಡಿ ದಾಟಿ ಬಂದು ಚೀನಾದ ಪ್ರದೇಶವಾದ ಬಾಂಗೋಂಗ್ ಹುನಾನ್ಗೆ ಬಂದಿದ್ದರು ಎಂಬ ಗಂಭೀರ ಆರೋಪ ಹೊರಿಸಿದೆ. ಆದರೆ, ಚೀನಾ ಆರೋಪಗಳನ್ನು ಭಾರತ ಸಾರಾಸಗಟಾಗಿ ತಳ್ಳಿಹಾಕಿದೆ.
ಇನ್ನೊಂದೆಡೆ ಭಾರತ ಮತ್ತು ಚೀನಾ ಗಡಿಯಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿರುವುದರ ನಡುವೆಯೇ ಮತ್ತೊಂದು ಮಹತ್ವದ ಬೆಳವಣಿಗೆ ನಡೆಯುತ್ತಿದೆ. ಇಂದು ಭಾರತ-ಚೀನಾ ವಿದೇಶಾಂಗ ಸಚಿವರ ಭೇಟಿಯಾಗುವ ಸಂಭವ ಇದೆ. ಎರಡೂ ದೇಶಗಳ ವಿದೇಶಾಂಗ ಸಚಿವರು ಮಾಸ್ಕೋದಲ್ಲಿ ಭೇಟಿ ಸಾಧ್ಯತೆಯಿದ್ದು ಈಗಾಗಲೇ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮಾಸ್ಕೋ ತಲುಪಿದ್ದಾರೆ. ಅವರು ಎಸ್ಸಿಒ ಸಭೆಯಲ್ಲಿ ಭಾಗವಹಿಸಲು ಮಾಸ್ಕೋಗೆ ಭೇಟಿ ನೀಡಿದ್ದಾರೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am