ಬ್ರೇಕಿಂಗ್ ನ್ಯೂಸ್
08-09-20 12:14 pm Headline Karnataka News Network ದೇಶ - ವಿದೇಶ
ಲಡಾಖ್, ಸೆಪ್ಟೆಂಬರ್ 7: ಪೂರ್ವ ಲಡಾಖ್ನಲ್ಲಿ ಭಾರತ ಮತ್ತು ಚೀನಾ ಗಡಿಯಲ್ಲಿ ನಿನ್ನೆ ಮಧ್ಯರಾತ್ರಿಯಿಂದ ಗುಂಡಿನ ಚಕಮಕಿ ಶುರುವಾಗಿದ್ದು, ಆತಂಕ ಸೃಷ್ಟಿಯಾಗಿದೆ. ಇದರ ಬೆನ್ನಲ್ಲೇ ಕದನದ ಮುನ್ಸೂಚನೆಯೂ ಸಿಗುತ್ತಿದೆ.
ಪ್ಯಾನ್ಗಾಂಗ್ ಸರೋವರ ಪ್ರದೇಶದಲ್ಲಿ ಉಭಯ ದೇಶಗಳ ನಡುವೆ ಗುಂಡಿನ ಸದ್ದು ಕೇಳಿಬಂದಿದೆ. ಪೂರ್ವ ಲಡಾಖ್ನ ವಾಸ್ತವ ನಿಯಂತ್ರಣ ರೇಖೆಯಲ್ಲಿ (ಎಲ್ಎಸಿ) ಭಾರತೀಯ ಸೇನೆ ಮತ್ತು ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ(ಪಿಎಲ್ಎ) ನಡುವೆ ಚಕಮಕಿ ಶುರುವಾಗಿರುವುದಾಗಿ ವರದಿಯಾಗಿದೆ.
1975ರ ಬಳಿಕ ಮೊದಲ ವಾರ್ನಿಂಗ್ ಶಾಟ್ ಅಥವಾ ಗುಂಡಿನ ಚಕಮಕಿ ಇದು ಎಂದು ಹೇಳಲಾಗುತ್ತಿದೆ.
ಎರಡೂ ದೇಶಗಳು ಇದೀಗ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿವೆ. ಪ್ಯಾಂಗಾಂಗ್ ಸರೋವರದ ದಕ್ಷಿಣ ದಂಡೆಯಲ್ಲಿರುವ ಎಲ್ಎಸಿ ದಾಟಿ ತಮ್ಮ ಮೇಲೆ ಭಾರತೀಯರ ಯೋಧರು ಗುಂಡಿನ ದಾಳಿ ನಡೆಸಿದ್ದ ಹಿನ್ನೆಲೆಯಲ್ಲಿ ಪ್ರತಿಯಾಗಿ ನಾವು ಗುಂಡಿನ ದಾಳಿ ನಡೆಸಿರುವುದಾಗಿ ಚೀನಾ ಆರೋಪಿಸುತ್ತಿದೆ.
ಇದಕ್ಕೆ ವ್ಯತಿರಿಕ್ತವಾಗಿ ಭಾರತದ ಮೇಲೆಯೇ ಚೀನಾ ಗಂಭೀರ ಆರೋಪ ಮಾಡಿದೆ. ಭಾರತದ ಸೇನೆ ಶೆನ್ ಪಾವೊ ಪರ್ವತಗಳ ಬಳಿ LOC ಉಲ್ಲಂಘನೆ ಮಾಡಿದೆ. ಪಾಂಗೊಂಗ್ ಸರೋವರದಲ್ಲಿ ಭಾರತೀಯ ಸೇನೆಯಿಂದ ಗುಂಡಿನ ದಾಳಿ ನಡೆದಿದೆ. ಭಾರತದ ಈ 2 ಕ್ರಮಗಳು ಗಡಿಯಲ್ಲಿ ಪ್ರಚೋದನಕಾರಿ ಹೆಜ್ಜೆಗಳಾಗಿವೆ. ಗಡಿ ದಾಟಿ ಬಂದು ಚೀನಾದ ಪ್ರದೇಶವಾದ ಬಾಂಗೋಂಗ್ ಹುನಾನ್ಗೆ ಬಂದಿದ್ದರು ಎಂಬ ಗಂಭೀರ ಆರೋಪ ಹೊರಿಸಿದೆ. ಆದರೆ, ಚೀನಾ ಆರೋಪಗಳನ್ನು ಭಾರತ ಸಾರಾಸಗಟಾಗಿ ತಳ್ಳಿಹಾಕಿದೆ.
ಇನ್ನೊಂದೆಡೆ ಭಾರತ ಮತ್ತು ಚೀನಾ ಗಡಿಯಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿರುವುದರ ನಡುವೆಯೇ ಮತ್ತೊಂದು ಮಹತ್ವದ ಬೆಳವಣಿಗೆ ನಡೆಯುತ್ತಿದೆ. ಇಂದು ಭಾರತ-ಚೀನಾ ವಿದೇಶಾಂಗ ಸಚಿವರ ಭೇಟಿಯಾಗುವ ಸಂಭವ ಇದೆ. ಎರಡೂ ದೇಶಗಳ ವಿದೇಶಾಂಗ ಸಚಿವರು ಮಾಸ್ಕೋದಲ್ಲಿ ಭೇಟಿ ಸಾಧ್ಯತೆಯಿದ್ದು ಈಗಾಗಲೇ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮಾಸ್ಕೋ ತಲುಪಿದ್ದಾರೆ. ಅವರು ಎಸ್ಸಿಒ ಸಭೆಯಲ್ಲಿ ಭಾಗವಹಿಸಲು ಮಾಸ್ಕೋಗೆ ಭೇಟಿ ನೀಡಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm