ಬ್ರೇಕಿಂಗ್ ನ್ಯೂಸ್
08-09-20 12:14 pm Headline Karnataka News Network ದೇಶ - ವಿದೇಶ
ಲಡಾಖ್, ಸೆಪ್ಟೆಂಬರ್ 7: ಪೂರ್ವ ಲಡಾಖ್ನಲ್ಲಿ ಭಾರತ ಮತ್ತು ಚೀನಾ ಗಡಿಯಲ್ಲಿ ನಿನ್ನೆ ಮಧ್ಯರಾತ್ರಿಯಿಂದ ಗುಂಡಿನ ಚಕಮಕಿ ಶುರುವಾಗಿದ್ದು, ಆತಂಕ ಸೃಷ್ಟಿಯಾಗಿದೆ. ಇದರ ಬೆನ್ನಲ್ಲೇ ಕದನದ ಮುನ್ಸೂಚನೆಯೂ ಸಿಗುತ್ತಿದೆ.
ಪ್ಯಾನ್ಗಾಂಗ್ ಸರೋವರ ಪ್ರದೇಶದಲ್ಲಿ ಉಭಯ ದೇಶಗಳ ನಡುವೆ ಗುಂಡಿನ ಸದ್ದು ಕೇಳಿಬಂದಿದೆ. ಪೂರ್ವ ಲಡಾಖ್ನ ವಾಸ್ತವ ನಿಯಂತ್ರಣ ರೇಖೆಯಲ್ಲಿ (ಎಲ್ಎಸಿ) ಭಾರತೀಯ ಸೇನೆ ಮತ್ತು ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ(ಪಿಎಲ್ಎ) ನಡುವೆ ಚಕಮಕಿ ಶುರುವಾಗಿರುವುದಾಗಿ ವರದಿಯಾಗಿದೆ.
1975ರ ಬಳಿಕ ಮೊದಲ ವಾರ್ನಿಂಗ್ ಶಾಟ್ ಅಥವಾ ಗುಂಡಿನ ಚಕಮಕಿ ಇದು ಎಂದು ಹೇಳಲಾಗುತ್ತಿದೆ.
ಎರಡೂ ದೇಶಗಳು ಇದೀಗ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿವೆ. ಪ್ಯಾಂಗಾಂಗ್ ಸರೋವರದ ದಕ್ಷಿಣ ದಂಡೆಯಲ್ಲಿರುವ ಎಲ್ಎಸಿ ದಾಟಿ ತಮ್ಮ ಮೇಲೆ ಭಾರತೀಯರ ಯೋಧರು ಗುಂಡಿನ ದಾಳಿ ನಡೆಸಿದ್ದ ಹಿನ್ನೆಲೆಯಲ್ಲಿ ಪ್ರತಿಯಾಗಿ ನಾವು ಗುಂಡಿನ ದಾಳಿ ನಡೆಸಿರುವುದಾಗಿ ಚೀನಾ ಆರೋಪಿಸುತ್ತಿದೆ.
ಇದಕ್ಕೆ ವ್ಯತಿರಿಕ್ತವಾಗಿ ಭಾರತದ ಮೇಲೆಯೇ ಚೀನಾ ಗಂಭೀರ ಆರೋಪ ಮಾಡಿದೆ. ಭಾರತದ ಸೇನೆ ಶೆನ್ ಪಾವೊ ಪರ್ವತಗಳ ಬಳಿ LOC ಉಲ್ಲಂಘನೆ ಮಾಡಿದೆ. ಪಾಂಗೊಂಗ್ ಸರೋವರದಲ್ಲಿ ಭಾರತೀಯ ಸೇನೆಯಿಂದ ಗುಂಡಿನ ದಾಳಿ ನಡೆದಿದೆ. ಭಾರತದ ಈ 2 ಕ್ರಮಗಳು ಗಡಿಯಲ್ಲಿ ಪ್ರಚೋದನಕಾರಿ ಹೆಜ್ಜೆಗಳಾಗಿವೆ. ಗಡಿ ದಾಟಿ ಬಂದು ಚೀನಾದ ಪ್ರದೇಶವಾದ ಬಾಂಗೋಂಗ್ ಹುನಾನ್ಗೆ ಬಂದಿದ್ದರು ಎಂಬ ಗಂಭೀರ ಆರೋಪ ಹೊರಿಸಿದೆ. ಆದರೆ, ಚೀನಾ ಆರೋಪಗಳನ್ನು ಭಾರತ ಸಾರಾಸಗಟಾಗಿ ತಳ್ಳಿಹಾಕಿದೆ.
ಇನ್ನೊಂದೆಡೆ ಭಾರತ ಮತ್ತು ಚೀನಾ ಗಡಿಯಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿರುವುದರ ನಡುವೆಯೇ ಮತ್ತೊಂದು ಮಹತ್ವದ ಬೆಳವಣಿಗೆ ನಡೆಯುತ್ತಿದೆ. ಇಂದು ಭಾರತ-ಚೀನಾ ವಿದೇಶಾಂಗ ಸಚಿವರ ಭೇಟಿಯಾಗುವ ಸಂಭವ ಇದೆ. ಎರಡೂ ದೇಶಗಳ ವಿದೇಶಾಂಗ ಸಚಿವರು ಮಾಸ್ಕೋದಲ್ಲಿ ಭೇಟಿ ಸಾಧ್ಯತೆಯಿದ್ದು ಈಗಾಗಲೇ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮಾಸ್ಕೋ ತಲುಪಿದ್ದಾರೆ. ಅವರು ಎಸ್ಸಿಒ ಸಭೆಯಲ್ಲಿ ಭಾಗವಹಿಸಲು ಮಾಸ್ಕೋಗೆ ಭೇಟಿ ನೀಡಿದ್ದಾರೆ.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 01:08 pm
HK News Desk
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm