ಬ್ರೇಕಿಂಗ್ ನ್ಯೂಸ್
08-09-20 12:14 pm Headline Karnataka News Network ದೇಶ - ವಿದೇಶ
ಲಡಾಖ್, ಸೆಪ್ಟೆಂಬರ್ 7: ಪೂರ್ವ ಲಡಾಖ್ನಲ್ಲಿ ಭಾರತ ಮತ್ತು ಚೀನಾ ಗಡಿಯಲ್ಲಿ ನಿನ್ನೆ ಮಧ್ಯರಾತ್ರಿಯಿಂದ ಗುಂಡಿನ ಚಕಮಕಿ ಶುರುವಾಗಿದ್ದು, ಆತಂಕ ಸೃಷ್ಟಿಯಾಗಿದೆ. ಇದರ ಬೆನ್ನಲ್ಲೇ ಕದನದ ಮುನ್ಸೂಚನೆಯೂ ಸಿಗುತ್ತಿದೆ.
ಪ್ಯಾನ್ಗಾಂಗ್ ಸರೋವರ ಪ್ರದೇಶದಲ್ಲಿ ಉಭಯ ದೇಶಗಳ ನಡುವೆ ಗುಂಡಿನ ಸದ್ದು ಕೇಳಿಬಂದಿದೆ. ಪೂರ್ವ ಲಡಾಖ್ನ ವಾಸ್ತವ ನಿಯಂತ್ರಣ ರೇಖೆಯಲ್ಲಿ (ಎಲ್ಎಸಿ) ಭಾರತೀಯ ಸೇನೆ ಮತ್ತು ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ(ಪಿಎಲ್ಎ) ನಡುವೆ ಚಕಮಕಿ ಶುರುವಾಗಿರುವುದಾಗಿ ವರದಿಯಾಗಿದೆ.
1975ರ ಬಳಿಕ ಮೊದಲ ವಾರ್ನಿಂಗ್ ಶಾಟ್ ಅಥವಾ ಗುಂಡಿನ ಚಕಮಕಿ ಇದು ಎಂದು ಹೇಳಲಾಗುತ್ತಿದೆ.
ಎರಡೂ ದೇಶಗಳು ಇದೀಗ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿವೆ. ಪ್ಯಾಂಗಾಂಗ್ ಸರೋವರದ ದಕ್ಷಿಣ ದಂಡೆಯಲ್ಲಿರುವ ಎಲ್ಎಸಿ ದಾಟಿ ತಮ್ಮ ಮೇಲೆ ಭಾರತೀಯರ ಯೋಧರು ಗುಂಡಿನ ದಾಳಿ ನಡೆಸಿದ್ದ ಹಿನ್ನೆಲೆಯಲ್ಲಿ ಪ್ರತಿಯಾಗಿ ನಾವು ಗುಂಡಿನ ದಾಳಿ ನಡೆಸಿರುವುದಾಗಿ ಚೀನಾ ಆರೋಪಿಸುತ್ತಿದೆ.
ಇದಕ್ಕೆ ವ್ಯತಿರಿಕ್ತವಾಗಿ ಭಾರತದ ಮೇಲೆಯೇ ಚೀನಾ ಗಂಭೀರ ಆರೋಪ ಮಾಡಿದೆ. ಭಾರತದ ಸೇನೆ ಶೆನ್ ಪಾವೊ ಪರ್ವತಗಳ ಬಳಿ LOC ಉಲ್ಲಂಘನೆ ಮಾಡಿದೆ. ಪಾಂಗೊಂಗ್ ಸರೋವರದಲ್ಲಿ ಭಾರತೀಯ ಸೇನೆಯಿಂದ ಗುಂಡಿನ ದಾಳಿ ನಡೆದಿದೆ. ಭಾರತದ ಈ 2 ಕ್ರಮಗಳು ಗಡಿಯಲ್ಲಿ ಪ್ರಚೋದನಕಾರಿ ಹೆಜ್ಜೆಗಳಾಗಿವೆ. ಗಡಿ ದಾಟಿ ಬಂದು ಚೀನಾದ ಪ್ರದೇಶವಾದ ಬಾಂಗೋಂಗ್ ಹುನಾನ್ಗೆ ಬಂದಿದ್ದರು ಎಂಬ ಗಂಭೀರ ಆರೋಪ ಹೊರಿಸಿದೆ. ಆದರೆ, ಚೀನಾ ಆರೋಪಗಳನ್ನು ಭಾರತ ಸಾರಾಸಗಟಾಗಿ ತಳ್ಳಿಹಾಕಿದೆ.
ಇನ್ನೊಂದೆಡೆ ಭಾರತ ಮತ್ತು ಚೀನಾ ಗಡಿಯಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿರುವುದರ ನಡುವೆಯೇ ಮತ್ತೊಂದು ಮಹತ್ವದ ಬೆಳವಣಿಗೆ ನಡೆಯುತ್ತಿದೆ. ಇಂದು ಭಾರತ-ಚೀನಾ ವಿದೇಶಾಂಗ ಸಚಿವರ ಭೇಟಿಯಾಗುವ ಸಂಭವ ಇದೆ. ಎರಡೂ ದೇಶಗಳ ವಿದೇಶಾಂಗ ಸಚಿವರು ಮಾಸ್ಕೋದಲ್ಲಿ ಭೇಟಿ ಸಾಧ್ಯತೆಯಿದ್ದು ಈಗಾಗಲೇ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮಾಸ್ಕೋ ತಲುಪಿದ್ದಾರೆ. ಅವರು ಎಸ್ಸಿಒ ಸಭೆಯಲ್ಲಿ ಭಾಗವಹಿಸಲು ಮಾಸ್ಕೋಗೆ ಭೇಟಿ ನೀಡಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm