ಬ್ರೇಕಿಂಗ್ ನ್ಯೂಸ್
08-09-20 01:36 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 8: ಕಾಂಗ್ರೆಸ್ ರಾಷ್ಟ್ರಮಟ್ಟದಲ್ಲಿ ಸತ್ತು ಹೋಗಿದೆ. ಅದಿನ್ನು ಈ ದೇಶಕ್ಕೆ ಪರ್ಯಾಯ ಆಗಲಾರದು ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ , ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಲೇವಡಿ ಮಾಡಿದ್ದಾರೆ.
ಡೆಕ್ಕನ್ ಹೆರಾಲ್ಡ್ ಪತ್ರಿಕೆಗೆ ನೀಡಿರುವ ಸಂದರ್ಶನದಲ್ಲಿ ಅರವಿಂದ್ ಕೇಜ್ರಿವಾಲ್ ಈ ರೀತಿಯ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಅಧಿಕಾರದಲ್ಲಿದ್ದ ರಾಜ್ಯಗಳಲ್ಲಿ ಅದರ ಶಾಸಕರು ಬೇರೆ ಪಕ್ಷಕ್ಕೆ ಮಾರಾಟ ಆಗಿದ್ದಾರೆ. ಅಧಿಕಾರವನ್ನೂ ಕಳಕೊಂಡಿದ್ದಾರೆ. ಗೋವಾ, ಕರ್ನಾಟಕ, ಮಧ್ಯಪ್ರದೇಶ, ಮಣಿಪುರ, ಈಗ ರಾಜಸ್ಥಾನದಲ್ಲಿಯೂ ಅದೇ ಸ್ಥಿತಿ ಇದೆ. ಕಾಂಗ್ರೆಸ್ ಎಂಎಲ್ ಏ ಗಳು ಮಾರಾಟ ಆಗುತ್ತಿದ್ದಾರೆ. ಕಾಂಗ್ರೆಸ್ ರಾಷ್ಟ್ರ ಮಟ್ಟದಲ್ಲಿ ಸತ್ತು ಹೋಗಿದೆ, ಭವಿಷ್ಯದಲ್ಲಿ ಬಿಜೆಪಿಗೆ ಪರ್ಯಾಯ ಆಗಿ ನಿಲ್ಲಲಾರದು ಎಂದು ಕೇಜ್ರಿವಾಲ್ ಹೇಳಿದ್ದಾರೆ.
ರಾಷ್ಟ್ರೀಯ ಪಕ್ಷವೊಂದು ಅಧ್ಯಕ್ಷರಿಲ್ಲದೆ ಹೆಣಗಾಟದಲ್ಲಿದ್ದರೆ, ಅದರ ನಾಯಕರು ಆಂತರಿಕ ಕಚ್ಚಾಟದಲ್ಲಿ ಇದ್ದಾರೆ. ಜನರು ಪಕ್ಷದ ಮೇಲೆ ನಂಬಿಕೆ ಕಳಕೊಳ್ಳುವ ಸ್ಥಿತಿಗೆ ತಲುಪಿದ್ದಾರೆ. ಪಕ್ಷಕ್ಕೆ ಒಬ್ಬರನ್ನು ಅಧ್ಯಕ್ಷರ ಆಯ್ಕೆ ಮಾಡಿಕೊಳ್ಳಲು ಸಾಧ್ಯವಾಗದವರು ದೇಶದ ಬಗ್ಗೆ ಯಾವ ರೀತಿಯ ಕನಸು ಇಟ್ಟುಕೊಳ್ಳಲು ಸಾಧ್ಯ. 2024ರ ಲೋಕಸಭೆ ಚುನಾವಣೆಗೆ ಇನ್ನೂ ಸಮಯ ಇದೆ. ಆ ಸಂದರ್ಭದಲ್ಲಿ ದೇಶದ ಜನರು ಪರ್ಯಾಯ ಒಂದನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂದನಿಸುತ್ತಿದೆ ಎಂದಿದ್ದಾರೆ ಕೇಜ್ರಿವಾಲ್.
ಕಾಂಗ್ರೆಸ್ ಜಾಗವನ್ನು ಆಪ್ ತುಂಬಲಿದೆಯೇ ಎಂಬ ಪ್ರಶ್ನೆಗೆ ಆಪ್ ಬಗ್ಗೆ ದೇಶದ ಜನ ಪ್ರೀತಿ ಹೊಂದಿದ್ದಾರೆ. ಹಾಗಂತ, ಆಪ್ ಪಕ್ಷ ಕಾಂಗ್ರೆಸಿಗೆ ಪರ್ಯಾಯ ಆಗಬಹುದು ಎಂಬುದನ್ನು ಈಗಲೇ ಹೇಳುವುದಕ್ಕೆ ಬರಲ್ಲ. ನಮ್ಮ ಸಂಘಟನೆ ತುಂಬ ಚಿಕ್ಕದು. ಆದರೆ ದೇಶದ ಜನ ಆಪ್ ಪಕ್ಷವನ್ನು ಗೌರವಿಸುತ್ತಾರೆ. ಉತ್ತಮ ಆಡಳಿತದಿಂದಾಗಿ ಜನರ ಮನಗೆಲ್ಲುತ್ತೇವೆ. ಆರೋಗ್ಯ, ಶಿಕ್ಷಣ ಹೀಗೆ ಬೇರೆ ಬೇರೆ ವಿಚಾರದಲ್ಲಿ ಆಪ್ ಪಕ್ಷದ ಸಾಧನೆಯನ್ನು ಜನ ಗಮನಿಸುತ್ತಾರೆ. ಖಾಲಿ ಜಾಗವನ್ನು ಆಪ್ ತುಂಬಬಲ್ಲದೇ ಎಂಬುದಕ್ಕೆ ಕಾಲವೇ ಉತ್ತರಿಸಬೇಕು ಎಂದಿದ್ದಾರೆ.
16-10-25 09:04 pm
Bangalore Correspondent
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
16-10-25 10:52 pm
HK News Desk
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
16-10-25 10:37 pm
Mangalore Correspondent
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm