ಬ್ರೇಕಿಂಗ್ ನ್ಯೂಸ್
08-09-20 01:36 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 8: ಕಾಂಗ್ರೆಸ್ ರಾಷ್ಟ್ರಮಟ್ಟದಲ್ಲಿ ಸತ್ತು ಹೋಗಿದೆ. ಅದಿನ್ನು ಈ ದೇಶಕ್ಕೆ ಪರ್ಯಾಯ ಆಗಲಾರದು ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ , ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಲೇವಡಿ ಮಾಡಿದ್ದಾರೆ.
ಡೆಕ್ಕನ್ ಹೆರಾಲ್ಡ್ ಪತ್ರಿಕೆಗೆ ನೀಡಿರುವ ಸಂದರ್ಶನದಲ್ಲಿ ಅರವಿಂದ್ ಕೇಜ್ರಿವಾಲ್ ಈ ರೀತಿಯ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಅಧಿಕಾರದಲ್ಲಿದ್ದ ರಾಜ್ಯಗಳಲ್ಲಿ ಅದರ ಶಾಸಕರು ಬೇರೆ ಪಕ್ಷಕ್ಕೆ ಮಾರಾಟ ಆಗಿದ್ದಾರೆ. ಅಧಿಕಾರವನ್ನೂ ಕಳಕೊಂಡಿದ್ದಾರೆ. ಗೋವಾ, ಕರ್ನಾಟಕ, ಮಧ್ಯಪ್ರದೇಶ, ಮಣಿಪುರ, ಈಗ ರಾಜಸ್ಥಾನದಲ್ಲಿಯೂ ಅದೇ ಸ್ಥಿತಿ ಇದೆ. ಕಾಂಗ್ರೆಸ್ ಎಂಎಲ್ ಏ ಗಳು ಮಾರಾಟ ಆಗುತ್ತಿದ್ದಾರೆ. ಕಾಂಗ್ರೆಸ್ ರಾಷ್ಟ್ರ ಮಟ್ಟದಲ್ಲಿ ಸತ್ತು ಹೋಗಿದೆ, ಭವಿಷ್ಯದಲ್ಲಿ ಬಿಜೆಪಿಗೆ ಪರ್ಯಾಯ ಆಗಿ ನಿಲ್ಲಲಾರದು ಎಂದು ಕೇಜ್ರಿವಾಲ್ ಹೇಳಿದ್ದಾರೆ.
ರಾಷ್ಟ್ರೀಯ ಪಕ್ಷವೊಂದು ಅಧ್ಯಕ್ಷರಿಲ್ಲದೆ ಹೆಣಗಾಟದಲ್ಲಿದ್ದರೆ, ಅದರ ನಾಯಕರು ಆಂತರಿಕ ಕಚ್ಚಾಟದಲ್ಲಿ ಇದ್ದಾರೆ. ಜನರು ಪಕ್ಷದ ಮೇಲೆ ನಂಬಿಕೆ ಕಳಕೊಳ್ಳುವ ಸ್ಥಿತಿಗೆ ತಲುಪಿದ್ದಾರೆ. ಪಕ್ಷಕ್ಕೆ ಒಬ್ಬರನ್ನು ಅಧ್ಯಕ್ಷರ ಆಯ್ಕೆ ಮಾಡಿಕೊಳ್ಳಲು ಸಾಧ್ಯವಾಗದವರು ದೇಶದ ಬಗ್ಗೆ ಯಾವ ರೀತಿಯ ಕನಸು ಇಟ್ಟುಕೊಳ್ಳಲು ಸಾಧ್ಯ. 2024ರ ಲೋಕಸಭೆ ಚುನಾವಣೆಗೆ ಇನ್ನೂ ಸಮಯ ಇದೆ. ಆ ಸಂದರ್ಭದಲ್ಲಿ ದೇಶದ ಜನರು ಪರ್ಯಾಯ ಒಂದನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂದನಿಸುತ್ತಿದೆ ಎಂದಿದ್ದಾರೆ ಕೇಜ್ರಿವಾಲ್.
ಕಾಂಗ್ರೆಸ್ ಜಾಗವನ್ನು ಆಪ್ ತುಂಬಲಿದೆಯೇ ಎಂಬ ಪ್ರಶ್ನೆಗೆ ಆಪ್ ಬಗ್ಗೆ ದೇಶದ ಜನ ಪ್ರೀತಿ ಹೊಂದಿದ್ದಾರೆ. ಹಾಗಂತ, ಆಪ್ ಪಕ್ಷ ಕಾಂಗ್ರೆಸಿಗೆ ಪರ್ಯಾಯ ಆಗಬಹುದು ಎಂಬುದನ್ನು ಈಗಲೇ ಹೇಳುವುದಕ್ಕೆ ಬರಲ್ಲ. ನಮ್ಮ ಸಂಘಟನೆ ತುಂಬ ಚಿಕ್ಕದು. ಆದರೆ ದೇಶದ ಜನ ಆಪ್ ಪಕ್ಷವನ್ನು ಗೌರವಿಸುತ್ತಾರೆ. ಉತ್ತಮ ಆಡಳಿತದಿಂದಾಗಿ ಜನರ ಮನಗೆಲ್ಲುತ್ತೇವೆ. ಆರೋಗ್ಯ, ಶಿಕ್ಷಣ ಹೀಗೆ ಬೇರೆ ಬೇರೆ ವಿಚಾರದಲ್ಲಿ ಆಪ್ ಪಕ್ಷದ ಸಾಧನೆಯನ್ನು ಜನ ಗಮನಿಸುತ್ತಾರೆ. ಖಾಲಿ ಜಾಗವನ್ನು ಆಪ್ ತುಂಬಬಲ್ಲದೇ ಎಂಬುದಕ್ಕೆ ಕಾಲವೇ ಉತ್ತರಿಸಬೇಕು ಎಂದಿದ್ದಾರೆ.
15-04-26 03:15 pm
HK News Staffer
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm