ಬ್ರೇಕಿಂಗ್ ನ್ಯೂಸ್
10-09-21 04:54 pm Headline Karnataka News Network ದೇಶ - ವಿದೇಶ
ದೆಹಲಿ, ಸೆ.10: ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದಿಂದ ನಾಯಕರು ತೊರೆದು ಬೇರೆ ಪಕ್ಷಗಳಿಗೆ ಸೇರುತ್ತಿರುವುದು ಹೆಚ್ಚುತ್ತಿದೆ. ಕಳೆದ ಏಳು ವರ್ಷಗಳಲ್ಲಿ ಕಾಂಗ್ರೆಸ್ ತೊರೆಯುವವರ ಸಂಖ್ಯೆ ಹೆಚ್ಚಿದ್ದು, ಗಣನೀಯ ಪ್ರಮಾಣದಲ್ಲಿ ಅಭ್ಯರ್ಥಿಗಳು, ಸಂಸದರು, ಶಾಸಕರು ಪಕ್ಷ ಬಿಟ್ಟು ಹೋಗಿರುವುದು ಅಧ್ಯಯನದಲ್ಲಿ ಕಂಡುಬಂದಿದೆ.
ಗುರುವಾರ ಬಿಡುಗಡೆಯಾದ ವರದಿಯ ಪ್ರಕಾರ 2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸಿನ ಅತಿ ಹೆಚ್ಚು ನಾಯಕರು ಬಿಜೆಪಿ ಸೇರ್ಪಡೆಯಾಗಿದ್ದಾರೆ.

2014 - 21ರ ನಡುವೆ ನಡೆದ ವಿವಿಧ ಚುನಾವಣೆಗಳ ಸಂದರ್ಭದಲ್ಲಿ ಒಟ್ಟು 222 ಅಭ್ಯರ್ಥಿಗಳು ಕಾಂಗ್ರೆಸ್ ತೊರೆದು ಇತರ ಪಕ್ಷಗಳನ್ನು ಸೇರಿದ್ದಾರೆ. ಇದೇ ಅವಧಿಯಲ್ಲಿ 177 ಸಂಸದರು ಮತ್ತು ಹಲವು ಶಾಸಕರು ಪಕ್ಷವನ್ನು ತೊರೆದಿದ್ದಾರೆ ಎಂದು ರಾಷ್ಟ್ರೀಯ ಚುನಾವಣೆ ಮತ್ತು ರಾಜಕೀಯ ಅಧ್ಯಯನ ಸಂಸ್ಥೆ ‘ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ - ಎಡಿಆರ್’ ತಿಳಿಸಿದೆ.

2014ರಿಂದ ಈವರೆಗಿನ ಚುನಾವಣೆಗಳಲ್ಲಿ 111 ಅಭ್ಯರ್ಥಿಗಳು ಬಿಜೆಪಿ ತೊರೆದಿದ್ದಾರೆ. 33 ಸಂಸದರು ಮತ್ತು ಶಾಸಕರನ್ನು ಬಿಜೆಪಿ ಕಳೆದುಕೊಂಡಿದೆ. ಆದರೂ, 253 ವಿವಿಧ ಪಕ್ಷಗಳ ಅಭ್ಯರ್ಥಿಗಳು ಮತ್ತು 173 ಸಂಸದರು ಮತ್ತು ಶಾಸಕರು ಬಿಜೆಪಿಯನ್ನು ಸೇರಿದ್ದಾರೆ ಎಂದು ಎಡಿಆರ್ ವರದಿಯಲ್ಲಿ ಹೇಳಲಾಗಿದೆ. ಈ ಮೂಲಕ ಏಳು ವರ್ಷಗಳಲ್ಲಿ ಬಿಜೆಪಿ ಅತಿ ಹೆಚ್ಚು ನಾಯಕರನ್ನು ತನ್ನ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಸಫಲವಾಗಿದೆ.
ಕಳೆದ ಏಳು ವರ್ಷಗಳಲ್ಲಿ 399 ನಾಯಕರು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದರೂ, 115 ಅಭ್ಯರ್ಥಿಗಳು, 61 ಸಂಸದರು ಮತ್ತು ಶಾಸಕರು ಇತರ ಪಕ್ಷಗಳಿಂದ ಕಾಂಗ್ರೆಸ್ಗೆ ಬಂದಿದ್ದಾರೆ. ಎಡಿಆರ್ ವರದಿಯು 1,133 ಅಭ್ಯರ್ಥಿಗಳು ಮತ್ತು 500 ಸಂಸದರು–ಶಾಸಕರ ಚುನಾವಣಾ ಅಫಿಡವಿಟ್ಗಳ ವಿಶ್ಲೇಷಣೆಯನ್ನು ಆಧರಿಸಿದೆ. 2014ರಿಂದ ಈ ವರೆಗೆ ಲೋಕಸಭೆ ಮತ್ತು ವಿಧಾನಸಭೆಗಳಿಗೆ ನಡೆದ ಚುನಾವಣೆಗಳನ್ನು ಆಧರಿಸಿ ಅಧ್ಯಯನ ಮಾಡಲಾಗಿದೆ.

ಕಾಂಗ್ರೆಸ್ ನಂತರ, ಉತ್ತರ ಪ್ರದೇಶದ ಮಾಯಾವತಿಯ ಬಹುಜನ ಸಮಾಜ ಪಕ್ಷವನ್ನು (ಬಿಎಸ್ಪಿ) ಗಣನೀಯ ಸಂಖ್ಯೆಯ ನಾಯಕರು ತೊರೆದಿದ್ದಾರೆ.
2014ರಿಂದ ಈ ವರೆಗೆ 153 ಅಭ್ಯರ್ಥಿಗಳು ಮತ್ತು 20 ಸಂಸದ–ಶಾಸಕರು ಇತರೆ ಪಕ್ಷ ಸೇರಲು ಬಿಎಸ್ಪಿ ತೊರೆದಿದ್ದಾರೆ. ಆದಾಗ್ಯೂ, ಬಿಎಸ್ಪಿ 65 ಅಭ್ಯರ್ಥಿಗಳು ಮತ್ತು 12 ಸಂಸದ– ಶಾಸಕರನ್ನು ತನ್ನ ತೆಕ್ಕೆ ತೆಗೆದುಕೊಂಡಿದ್ದಾರೆ. ಇನ್ನು ತೃಣಮೂಲ ಕಾಂಗ್ರೆಸ್ನ (ಟಿಎಂಸಿ) 31 ಅಭ್ಯರ್ಥಿಗಳು, 26 ಸಂಸದ– ಶಾಸಕರು ಕಳೆದ ಏಳು ವರ್ಷಗಳಲ್ಲಿ ಬೇರೆ ಪಕ್ಷವನ್ನು ಸೇರಿದ್ದಾರೆ. ಒಟ್ಟು 23 ಅಭ್ಯರ್ಥಿಗಳು ಮತ್ತು 31 ಸಂಸದ–ಶಾಸಕರು ಈ ಅವಧಿಯಲ್ಲಿ ಪಕ್ಷ ಸೇರಿದ್ದಾರೆ.
Congress lost Highest number of Leaders to other Parties Since 2014 BJP Big Gainer Report.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm