ಬ್ರೇಕಿಂಗ್ ನ್ಯೂಸ್
01-08-20 04:18 pm Special Correspondant ದೇಶ - ವಿದೇಶ
ರಾಂಚಿ, ಆಗಸ್ಟ್ 1: ಮಧ್ಯಪ್ರದೇಶ, ರಾಜಸ್ಥಾನದ ಬಳಿಕ ಜಾರ್ಖಂಡಿನಲ್ಲಿಯೂ ರಾಜಕೀಯ ಹೈಡ್ರಾಮಾ ಶುರುವಾಗಿದೆ. ಜೆಎಂಎಂ ಮುಖ್ಯಮಂತ್ರಿ ಹೇಮಂತ್ ಸೊರೇನ್ ಬಗ್ಗೆ ಅಸಮಾಧಾನಗೊಂಡಿರುವ 15 ಕಾಂಗ್ರೆಸ್ ಶಾಸಕರು ಬಿಜೆಪಿ ಜೊತೆ ಸಂಪರ್ಕದಲ್ಲಿದ್ದಾರೆ ಎನ್ನಲಾಗುತ್ತಿದ್ದು ಸೊರೇನ್ ಸರಕಾರದ ಮೇಲೆ ತೂಗುಗತ್ತಿ ಶುರುವಾಗಿದೆ.
ಜಾರ್ಖಂಡಿನಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ ಮತ್ತು ಕಾಂಗ್ರೆಸ್ ಮೈತ್ರಿಯ ಸರಕಾರ ಆಡಳಿತದಲ್ಲಿದೆ. ಜೆಎಂಎಂ ಪಕ್ಷದ ಸಿಎಂ ಹೇಮಂತ್ ಸೊರೇನ್, ಸಿಎಂ ಸೇರಿ 11 ಮಂದಿ ಸಚಿವ ಸ್ಥಾನಗಳನ್ನು ಮಾತ್ರ ತುಂಬಿದ್ದು, ಇನ್ನೊಂದು ಸ್ಥಾನವನ್ನು ಖಾಲಿ ಇಟ್ಟಿದ್ದಾರೆ. ಈ ಸ್ಥಾನದ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸಿನ ಕೆಲವು ಶಾಸಕರು ಲಾಬಿ ನಡೆಸುತ್ತಿದ್ದಾರೆ. ಇದೇ ವೇಳೆ, ಕಾಂಗ್ರೆಸಿನ ಹಿರಿಯ ಶಾಸಕರಾದ ಇರ್ಫಾನ್ ಅನ್ಸಾರಿ, ಉಮಾಶಂಕರ್ ಅಲೇಖ ಮತ್ತು ರಾಜೇಶ್ ಕಶ್ಯಪ್ ದೆಹಲಿಗೆ ತೆರಳಿದ್ದು, ಹಿರಿಯ ನಾಯಕರಿಗೆ ದೂರು ನೀಡಿದ್ದಾರೆ. ಅಲ್ಲದೆ, ಟ್ರಬಲ್ ಶೂಟರ್ ಅಹ್ಮದ್ ಪಟೇಲ್ ಅವರನ್ನು ಭೇಟಿಯಾಗಿ ಸಿಎಂ ಸೊರೇನ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ, ದೆಹಲಿ ನಾಯಕರು ತಮ್ಮ ಅಹವಾಲಿಗೆ ಸ್ಪಂದಿಸಿಲ್ಲ ಎನ್ನುತ್ತಿರುವ ಅಸಮಾಧಾನಿತ ಕಾಂಗ್ರೆಸ್ ಗುಂಪು, ಗೃಹ ಸಚಿವರೂ ಆಗಿರುವ ಜಾರ್ಖಂಡ್ ಕಾಂಗ್ರೆಸ್ ಅಧ್ಯಕ್ಷ ರಾಮೇಶ್ವರ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ, ರಾಂಚಿಯಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಶಾಸಕರನ್ನು ಸೆಳೆಯುತ್ತಿದ್ದಾರೆ ಅನ್ನುವ ಮಾತು ಕೇಳಿಬರುತ್ತಿದೆ. ಇತ್ತೀಚೆಗೆ ಬಿಜೆಪಿ ಸೇರ್ಪಡೆಯಾಗಿದ್ದ ಜೆವಿಎಂ ಪಕ್ಷದ ಮಾಜಿ ಮುಖ್ಯಮಂತ್ರಿ ಬಾಬುಲಾಲ್ ಮರಾಂಡಿ, ಮತ್ತೆ ಸರಕಾರ ರಚನೆಗೆ ಕಸರತ್ತು ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಆದರೆ, ಒಂದಷ್ಟು ಕಾಂಗ್ರೆಸ್ ಶಾಸಕರು ಬಿಜೆಪಿಯತ್ತ ವಾಲಿದರೂ ಸದ್ಯಕ್ಕೆ ಜೆಎಂಎಂ ಮತ್ತು ಕಾಂಗ್ರೆಸ್ ಮೈತ್ರಿ ಸರಕಾರ ಪತನವಾಗಲಾರದು. ಯಾಕಂದ್ರೆ, 81 ಸದಸ್ಯಬಲದ ಜಾರ್ಖಂಡಿನಲ್ಲಿ ಜೆಎಂಎಂ 29, ಕಾಂಗ್ರೆಸ್ 15, ಬಿಜೆಪಿ 26 ಸ್ಥಾನಗಳನ್ನು ಹೊಂದಿದ್ದರೆ, ಆರ್ ಜೆಡಿ, ಎನ್ ಸಿಪಿ ಮತ್ತು ಸಿಪಿಐಎಂ ತಲಾ ಒಂದೊಂದು ಸ್ಥಾನಗಳನ್ನು ಹೊಂದಿದೆ. ಕಾಂಗ್ರೆಸಿನ 15 ಶಾಸಕರೂ ಬಿಜೆಪಿಯತ್ತ ಬಂದರೆ ಮಾತ್ರ ಸರಕಾರ ಬೀಳುವ ಸಾಧ್ಯತೆಯಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm