ಬ್ರೇಕಿಂಗ್ ನ್ಯೂಸ್
08-09-20 07:10 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 8: ಪಬ್ ಜಿ ವಿಡಿಯೋ ಗೇಮ್ ಹುಚ್ಚು ಕೆಲವರಿಗೆ ಅದೆಷ್ಟು ಹಚ್ಚಿಕೊಂಡಿತ್ತು ಅಂದ್ರೆ, ಎಷ್ಟು ಹಣ ಖಾಲಿಯಾದ್ರೂ ಹಣದ ಬೆಲೆ ಗೊತ್ತಾಗ್ತಾನೇ ಇರ್ತಿರಲಿಲ್ಲ. ಇಲ್ಲೊಬ್ಬ 15 ವರ್ಷದ ಹುಡುಗ ಪಬ್ ಜಿ ಆಟವಾಡುತ್ತಾ ತನ್ನ ಅಜ್ಜನ ಖಾತೆಯಲ್ಲಿದ್ದ ಎರಡು ಲಕ್ಷ ರೂಪಾಯಿ ಪಿಂಚಣಿ ಹಣವನ್ನೇ ಖಾಲಿ ಮಾಡಿದ್ದಾನೆ.
65 ವರ್ಷದ ವೃದ್ಧ ವ್ಯಕ್ತಿಗೆ ತನ್ನ ಮೊಬೈಲ್ ಬಳಸುವುದು ಅಷ್ಟಾಗಿ ಗೊತ್ತಿರಲಿಲ್ಲ. ಪೇಟಿಎಂ ಇತ್ತಾದರೂ ಅವನ್ನೆಲ್ಲ ಆಪರೇಟ್ ಮಾಡುತ್ತಿದ್ದುದು ಮೊಮ್ಮಕ್ಕಳೇ ಆಗಿದ್ದರು. ಸಣ್ಣ ಪುಟ್ಟ ಏನಾದ್ರೂ ತಗೊಳ್ಳೋದಕ್ಕೆ ಅಜ್ಜನ ಪೇಟಿಎಂ ನಿಂದಲೇ ಮಾಡಿಕೊಳ್ತಿದ್ದರು. ಹಾಗಾಗಿ, ಅಜ್ಜನೂ ತನ್ನ ಖಾತೆಯ ದುಡ್ಡಿನ ಬಗ್ಗೆ ಚಿಂತೆ ಮಾಡಿರಲಿಲ್ಲ. ಮೊನ್ನೆ ಒಂದು ದಿನ ಅಜ್ಜನ ಮೊಬೈಲಿಗೆ ಮೆಸೇಜ್ ಬಂದಿತ್ತು. ನಿಮ್ಮ ಖಾತೆಯಲ್ಲಿ ರೂಪಾಯಿ 275 ಮಾತ್ರ ಇದ್ದು ಬ್ಯಾಲೆನ್ಸ್ ಎಮೌಂಟ್ ಉಳಿಸುವಂತೆ ಸೂಚನೆ ನೀಡಿತ್ತು. ಅಜ್ಜನಿಗೆ ಇದನ್ನು ನೋಡಿ ಶಾಕ್ ಆಗಿತ್ತು. ಎರಡು ಲಕ್ಷಕ್ಕೂ ಹೆಚ್ಚು ಹಣ ಇತ್ತು. ಏನಾಯ್ತು ಅಂತ ಗಾಬರಿಗೊಂಡು ಏನೋ ಕಿತಾಪತಿ ಆಗಿರಬೇಕು ಅಂತ ಪೊಲೀಸ್ ದೂರು ಕೊಟ್ಟರು. ಪೊಲೀಸರು ಅಜ್ಜನ ದೂರನ್ನು ತಗೊಂಡು ಚೆಕ್ ಮಾಡಿದ್ರು. ತಪಾಸಣೆ ಮಾಡಿದಾಗ, ಪೇಟಿಎಂ ಮೂಲಕವೇ ಹಣ ಖಾಲಿಯಾಗಿದ್ದು ಪೊಲೀಸರಿಗೆ ಗೊತ್ತಾಗಿತ್ತು. ಅಲ್ಲದೆ, ಅಜ್ಜನ ಅಕೌಂಟ್ ಬಗ್ಗೆ ತಿಳಿದುಕೊಂಡಿದ್ದ 15 ವರ್ಷದ ಮೊಮ್ಮಗನದ್ದೇ ಕಿತಾಪತಿ ಅನ್ನುವುದೂ ಪೊಲೀಸರಿಗೆ ಗೊತ್ತಾಯ್ತು.

ಅಲ್ಲೀವರೆಗೂ ತನಗೇನು ಗೊತ್ತೇ ಇಲ್ಲ ಎಂದು ನಾಟಕ ಆಡುತ್ತಿದ್ದ ಹುಡುಗನೂ ಪೊಲೀಸರಲ್ಲಿ ಸತ್ಯ ಬಾಯಿಬಿಟ್ಟ. ಕೆಲವು ತಿಂಗಳಿಂದ ಪಬ್ ಜಿ ಆಡುತ್ತಿದ್ದೆ. ಏಪ್ ಡೌನ್ಲೋಡ್ ಮಾಡಿಕೊಳ್ಳಲು ಅಜ್ಜನ ಪೇಟಿಎಂ ಯೂಸ್ ಮಾಡ್ತಿದ್ದೆ. ಆನಂತ್ರ ಗೆಳೆಯನೂ ಇದೇ ಪೇಟಿಎಂ ಬಳಕೆ ಮಾಡುತ್ತಿದ್ದರು. ಹುಡುಗನ ಗೆಳೆಯ 23 ವರ್ಷದ ಪಂಕಜ್ ಕುಮಾರ್ ಎನ್ನುವಾತ ಒಂದಷ್ಟು ಹಣವನ್ನು ಆತನ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದೂ ವಿಚಾರಣೆಯಲ್ಲಿ ತಿಳಿದುಬಂತು. ಅಷ್ಟೇ ಅಲ್ಲ, ಪೇಟಿಎಂ ಯೂಸ್ ಮಾಡಿ, ಬಳಿಕ ಒಟಿಪಿಯನ್ನು ಡಿಲೀಟ್ ಮಾಡ್ತಿದ್ದೆ ಎನ್ನುವುದನ್ನೂ ಒಪ್ಪಿಕೊಂಡಿದ್ದಾನೆ. ಮೊಮ್ಮಗನ ನಂಬಿದ ಅಜ್ಜ ತನ್ನ ತಲೆಗೆ ತಾನೇ ಚಪ್ಪಡಿ ಕಲ್ಲು ಹಾಕ್ಕೊಂಡಿದ್ದ. ಪಬ್ ಜಿ ಲೋಕದಲ್ಲಿ ಮುಳುಗಿದ್ದ ಹುಡುಗ ಹಣದ ಬೆಲೆಯನ್ನೂ ಅರಿಯದೇ ಹೋಗಿದ್ದ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am