ಬ್ರೇಕಿಂಗ್ ನ್ಯೂಸ್
08-09-20 07:10 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 8: ಪಬ್ ಜಿ ವಿಡಿಯೋ ಗೇಮ್ ಹುಚ್ಚು ಕೆಲವರಿಗೆ ಅದೆಷ್ಟು ಹಚ್ಚಿಕೊಂಡಿತ್ತು ಅಂದ್ರೆ, ಎಷ್ಟು ಹಣ ಖಾಲಿಯಾದ್ರೂ ಹಣದ ಬೆಲೆ ಗೊತ್ತಾಗ್ತಾನೇ ಇರ್ತಿರಲಿಲ್ಲ. ಇಲ್ಲೊಬ್ಬ 15 ವರ್ಷದ ಹುಡುಗ ಪಬ್ ಜಿ ಆಟವಾಡುತ್ತಾ ತನ್ನ ಅಜ್ಜನ ಖಾತೆಯಲ್ಲಿದ್ದ ಎರಡು ಲಕ್ಷ ರೂಪಾಯಿ ಪಿಂಚಣಿ ಹಣವನ್ನೇ ಖಾಲಿ ಮಾಡಿದ್ದಾನೆ.
65 ವರ್ಷದ ವೃದ್ಧ ವ್ಯಕ್ತಿಗೆ ತನ್ನ ಮೊಬೈಲ್ ಬಳಸುವುದು ಅಷ್ಟಾಗಿ ಗೊತ್ತಿರಲಿಲ್ಲ. ಪೇಟಿಎಂ ಇತ್ತಾದರೂ ಅವನ್ನೆಲ್ಲ ಆಪರೇಟ್ ಮಾಡುತ್ತಿದ್ದುದು ಮೊಮ್ಮಕ್ಕಳೇ ಆಗಿದ್ದರು. ಸಣ್ಣ ಪುಟ್ಟ ಏನಾದ್ರೂ ತಗೊಳ್ಳೋದಕ್ಕೆ ಅಜ್ಜನ ಪೇಟಿಎಂ ನಿಂದಲೇ ಮಾಡಿಕೊಳ್ತಿದ್ದರು. ಹಾಗಾಗಿ, ಅಜ್ಜನೂ ತನ್ನ ಖಾತೆಯ ದುಡ್ಡಿನ ಬಗ್ಗೆ ಚಿಂತೆ ಮಾಡಿರಲಿಲ್ಲ. ಮೊನ್ನೆ ಒಂದು ದಿನ ಅಜ್ಜನ ಮೊಬೈಲಿಗೆ ಮೆಸೇಜ್ ಬಂದಿತ್ತು. ನಿಮ್ಮ ಖಾತೆಯಲ್ಲಿ ರೂಪಾಯಿ 275 ಮಾತ್ರ ಇದ್ದು ಬ್ಯಾಲೆನ್ಸ್ ಎಮೌಂಟ್ ಉಳಿಸುವಂತೆ ಸೂಚನೆ ನೀಡಿತ್ತು. ಅಜ್ಜನಿಗೆ ಇದನ್ನು ನೋಡಿ ಶಾಕ್ ಆಗಿತ್ತು. ಎರಡು ಲಕ್ಷಕ್ಕೂ ಹೆಚ್ಚು ಹಣ ಇತ್ತು. ಏನಾಯ್ತು ಅಂತ ಗಾಬರಿಗೊಂಡು ಏನೋ ಕಿತಾಪತಿ ಆಗಿರಬೇಕು ಅಂತ ಪೊಲೀಸ್ ದೂರು ಕೊಟ್ಟರು. ಪೊಲೀಸರು ಅಜ್ಜನ ದೂರನ್ನು ತಗೊಂಡು ಚೆಕ್ ಮಾಡಿದ್ರು. ತಪಾಸಣೆ ಮಾಡಿದಾಗ, ಪೇಟಿಎಂ ಮೂಲಕವೇ ಹಣ ಖಾಲಿಯಾಗಿದ್ದು ಪೊಲೀಸರಿಗೆ ಗೊತ್ತಾಗಿತ್ತು. ಅಲ್ಲದೆ, ಅಜ್ಜನ ಅಕೌಂಟ್ ಬಗ್ಗೆ ತಿಳಿದುಕೊಂಡಿದ್ದ 15 ವರ್ಷದ ಮೊಮ್ಮಗನದ್ದೇ ಕಿತಾಪತಿ ಅನ್ನುವುದೂ ಪೊಲೀಸರಿಗೆ ಗೊತ್ತಾಯ್ತು.

ಅಲ್ಲೀವರೆಗೂ ತನಗೇನು ಗೊತ್ತೇ ಇಲ್ಲ ಎಂದು ನಾಟಕ ಆಡುತ್ತಿದ್ದ ಹುಡುಗನೂ ಪೊಲೀಸರಲ್ಲಿ ಸತ್ಯ ಬಾಯಿಬಿಟ್ಟ. ಕೆಲವು ತಿಂಗಳಿಂದ ಪಬ್ ಜಿ ಆಡುತ್ತಿದ್ದೆ. ಏಪ್ ಡೌನ್ಲೋಡ್ ಮಾಡಿಕೊಳ್ಳಲು ಅಜ್ಜನ ಪೇಟಿಎಂ ಯೂಸ್ ಮಾಡ್ತಿದ್ದೆ. ಆನಂತ್ರ ಗೆಳೆಯನೂ ಇದೇ ಪೇಟಿಎಂ ಬಳಕೆ ಮಾಡುತ್ತಿದ್ದರು. ಹುಡುಗನ ಗೆಳೆಯ 23 ವರ್ಷದ ಪಂಕಜ್ ಕುಮಾರ್ ಎನ್ನುವಾತ ಒಂದಷ್ಟು ಹಣವನ್ನು ಆತನ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದೂ ವಿಚಾರಣೆಯಲ್ಲಿ ತಿಳಿದುಬಂತು. ಅಷ್ಟೇ ಅಲ್ಲ, ಪೇಟಿಎಂ ಯೂಸ್ ಮಾಡಿ, ಬಳಿಕ ಒಟಿಪಿಯನ್ನು ಡಿಲೀಟ್ ಮಾಡ್ತಿದ್ದೆ ಎನ್ನುವುದನ್ನೂ ಒಪ್ಪಿಕೊಂಡಿದ್ದಾನೆ. ಮೊಮ್ಮಗನ ನಂಬಿದ ಅಜ್ಜ ತನ್ನ ತಲೆಗೆ ತಾನೇ ಚಪ್ಪಡಿ ಕಲ್ಲು ಹಾಕ್ಕೊಂಡಿದ್ದ. ಪಬ್ ಜಿ ಲೋಕದಲ್ಲಿ ಮುಳುಗಿದ್ದ ಹುಡುಗ ಹಣದ ಬೆಲೆಯನ್ನೂ ಅರಿಯದೇ ಹೋಗಿದ್ದ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm