ಬ್ರೇಕಿಂಗ್ ನ್ಯೂಸ್
16-09-21 05:21 pm Headline Karnataka News Network ದೇಶ - ವಿದೇಶ
ಅಹ್ಮದಾಬಾದ್, ಸೆ.16: ಗುಜರಾತ್ ನಲ್ಲಿ ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ವಿಜಯ್ ರೂಪಾನಿಯನ್ನು ಅಧಿಕಾರದಿಂದ ಕೆಳಗಿಳಿಸಿದ್ದ ಬಿಜೆಪಿ, ಇದೀಗ ಅಲ್ಲಿ ಈ ಹಿಂದೆ ಇದ್ದ ಸಚಿವರಿಗೂ ಶಾಕ್ ನೀಡಿದೆ. ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸಂಪುಟದಲ್ಲಿ ಪೂರ್ತಿಯಾಗಿ ಹೊಸಬರನ್ನೇ ಸಚಿವರನ್ನಾಗಿ ಮಾಡಲಾಗಿದೆ.
ಈ ಹಿಂದೆ ವಿಧಾನಸಭೆ ಸ್ಪೀಕರ್ ಆಗಿದ್ದ ರಾಜೇಂದ್ರ ತ್ರಿವೇದಿ, ಗುಜರಾತ್ ಘಟಕದ ಮಾಜಿ ಅಧ್ಯಕ್ಷ ಜಿತು ವಘಾನಿ ಸೇರಿದಂತೆ 24 ಶಾಸಕರು ನೂತನ ಮಂತ್ರಿಮಂಡಲದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹಿಂದಿನ ವಿಜಯ್ ರೂಪಾನಿ ಸಚಿವ ಸಂಪುಟದಲ್ಲಿದ್ದ ಯಾರಿಗೂ ಸಚಿವ ಸ್ಥಾನ ದೊರೆತಿಲ್ಲ.



ರಾಜ್ಯಪಾಲ ದೇವವ್ರತ್ ಆಚಾರ್ಯ ಅವರು ಹತ್ತು ಸಂಪುಟ ದರ್ಜೆ ಸಚಿವರಿಗೆ ಮತ್ತು 14 ಮಂದಿ ಸಹಾಯಕ ಖಾತೆ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಗುಜರಾತ್ ನ 17ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಭೂಪೇಂದ್ರ ಪಟೇಲ್ ಮತ್ತು ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸಮಾರಂಭದಲ್ಲಿ ಭಾಗವಹಿಸಿದ್ದರು. ಕಳೆದ ಬಾರಿ ಡಿಸಿಎಂ ಆಗಿದ್ದ ಮತ್ತು ಸಿಎಂ ಆಗುತ್ತಾರೆಂದು ಹೆಸರು ಕೇಳಿಬಂದಿದ್ದ ನಿತಿನ್ ಪಟೇಲ್ ಸಚಿವ ಸ್ಥಾನವನ್ನೇ ಪಡೆದಿಲ್ಲ.
ಕಳೆದ ಬಾರಿಯ ಅಷ್ಟೂ ಸಚಿವರು ಮತ್ತು ಇಡೀ ಬಿಜೆಪಿ ರಾಜ್ಯ ಘಟಕಕ್ಕೆ ಶಾಕ್ ನೀಡಿದ ರೀತಿಯಲ್ಲಿ ಹೊಸ ಸರಕಾರವನ್ನೇ ಬಿಜೆಪಿ ಅಸ್ತಿತ್ವಕ್ಕೆ ತಂದಿದ್ದು, ಗುಜರಾತ್ ಪಾಲಿಗೆ ದೊಡ್ಡ ಬೆಳವಣಿಗೆಯೇ ಸರಿ.
The new cabinet of Gujarat's Chief Minister Bhupendra Patel was sworn in on Thursday. Over 20 MLAs including Nareshbhai Patel, Manisha Vakil and Kiritsinh Jitubha Rana took oath as ministers.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 09:44 pm
Mangalore Correspondent
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm