ಬ್ರೇಕಿಂಗ್ ನ್ಯೂಸ್
18-09-21 05:25 pm Headline Karnataka News Network ದೇಶ - ವಿದೇಶ
ಚಂಡೀಗಢ, ಸೆ.18 : ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಕಡೆಗೂ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಜೊತೆಗಿನ ವೈಮನಸ್ಸು, ಗುದ್ದಾಟದ ಬಳಿಕ ಅಮರಿಂದರ್ ಸಿಂಗ್ ಇಂದು ರಾಜ್ಯಪಾಲ ಭನ್ವಾರಿಲಾಲ್ ಪುರೋಹಿತ್ ಅವರನ್ನು ಭೇಟಿಯಾಗಿ ರಾಜಿನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ಇದಕ್ಕೂ ಮುನ್ನ ಅಮರಿಂದರ್ ಸಿಂಗ್ ಪುತ್ರ ರಣೀಂದರ್ ಸಿಂಗ್, ತಂದೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡುವ ಬಗ್ಗೆ ಸುಳಿವು ನೀಡಿದ್ದರು. ಅದರ ಬೆನ್ನಲ್ಲೇ ಅಮರಿಂದರ್ ಸಿಂಗ್ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ಎರಡು ದಿನಗಳ ಹಿಂದಷ್ಟೇ ಈ ರೀತಿಯ ಕಿರುಕುಳ, ಜಂಜಾಟದ ಮಧ್ಯೆ ಅಧಿಕಾರದಲ್ಲಿ ಮುಂದುವರಿಯಲು ಸಾಧ್ಯವಿಲ್ಲ. ಕಾಂಗ್ರೆಸ್ ಉತ್ತಮ ವ್ಯಕ್ತಿಯನ್ನು ಆಯ್ದುಕೊಳ್ಳಲಿ ಎನ್ನುವ ಮೂಲಕ ತಮ್ಮ ಸ್ಥಾನ ಬಿಟ್ಟು ಕೊಡುವ ಬಗ್ಗೆ ಅಮರಿಂದರ್ ಸಿಂಗ್ ಸುಳಿವು ನೀಡಿದ್ದರು. ಕಾಂಗ್ರೆಸ್ ಕೇಂದ್ರೀಯ ಘಟದ ಮನೀಶ್ ತಿವಾರಿ, ಕಮಲನಾಥ್ ಮತ್ತಿತರ ನಾಯಕರಿಗೂ ಈ ಬಗ್ಗೆ ಹೇಳಿದ್ದರು.
ಇದೇ ವೇಳೆ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಪಕ್ಷದ ಕೇಂದ್ರೀಯ ನಾಯಕರನ್ನು ಭೇಟಿಯಾಗಿದ್ದು, ಸಿಎಂ ಬದಲಾವಣೆಗಾಗಿ ಒತ್ತಡ ಹೇರಿದ್ದರು. ಇದೇ ವೇಳೆ, ಪಂಜಾಜ್ ಘಟಕದ ಬಿಜೆಪಿ ನಾಯಕರು ಅಮರಿಂದರ್ ಸಿಂಗ್ ಅವರನ್ನು ಸಂಪರ್ಕಿಸಿದ್ದು, ಬಿಜೆಪಿಗೆ ಬರುವಂತೆ ಆಹ್ವಾನ ನೀಡಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕಾಂಗ್ರೆಸ್ ಬಳಿಕ ಬಿಜೆಪಿಯಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ.
Hours after he was asked to step down as the Chief Minister of Punjab, Captain Amarinder Singh on Saturday resigned from the post. He met the Governor at Raj Bhavan and handed him his resignation letter, Amarinder’s son Ravinder Singh tweeted.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 02:58 pm
HK News Staffer
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm