ಬ್ರೇಕಿಂಗ್ ನ್ಯೂಸ್
09-09-20 03:20 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 9: ಮುಂಬೈನಲ್ಲಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಕಚೇರಿ ತೆರವುಗೊಳಿಸುತ್ತಿರುವುದಕ್ಕೆ ಬಾಂಬೆ ಹೈಕೋರ್ಟ್ ತಡೆ ನೀಡಿದ್ದು, ಮಹಾರಾಷ್ಟ್ರ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ.
ಕಚೇರಿ ತೆರವುಗೊಳಿಸುವ ಕ್ರಮವನ್ನು ಪ್ರಶ್ನಿಸಿ ಕಂಗಾನಾ ಪರ ವಕೀಲ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ತೆರವು ಕಾರ್ಯಾಚರಣೆಗೆ ತಡೆ ನೀಡಿದ್ದು, ಕಂಗನಾ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಸರ್ಕಾರವನ್ನು ಕೇಳಿದೆ. ಈ ಮೂಲಕ ಕಂಗನಾ ಮಹಾ ಸರ್ಕಾರದ ವಿರುದ್ಧ ಬಹುದೊಡ್ಡ ಗೆಲುವು ಸಾಧಿಸಿದಂತಿದೆ.

ಇಂದು ಬೆಳಗ್ಗೆಯಷ್ಟೇ ಹಿಮಾಚಲ ಪ್ರದೇಶದ ಮನಾಲಿಯಲ್ಲಿರುವ ತಮ್ಮ ಮನೆಯಿಂದ ಹೊರಟ ಕಂಗನಾ ಮುಂಬೈಗೆ ಮರಳಿದ್ದಾರೆ. ಅವರು ಮುಂಬೈಗೆ ಆಗಮಿಸುವ ಮುಂಚೆಯೇ ಮಹಾ ಸರ್ಕಾರ ಕಚೇರಿಯ ತೆರವು ಕಾರ್ಯಾಚರಣೆ ನಡೆಸುತ್ತಿತ್ತು.
ಮುಂಬೈ ಅನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಂಗನಾ ತೊಡೆತಟ್ಟಿದ್ದಾರೆ. ಇಂದು ಬೆಳಗ್ಗೆಯಷ್ಟೇ ಟ್ವೀಟ್ ಮಾಡಿದ್ದ ಕಂಗನಾ, ಮಹಾರಾಷ್ಟ್ರ ಸರ್ಕಾರ ಮತ್ತು ಅದರ ಗೂಂಡಾಗಳು ಮುಂಬೈನಲ್ಲಿರುವ ನನ್ನ ಕಚೇರಿಯನ್ನು ಅಕ್ರಮವಾಗಿ ನೆಲಸಮ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದರು.
ಸೋಮವಾರವಷ್ಟೇ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ಬಾಂದ್ರಾದ ಪಾಲಿ ಹಿಲ್ನಲ್ಲಿರುವ ಕಂಗನಾ ಅವರ ಕಚೇರಿಗೆ ಭೇಟಿ ನೀಡಿ, ಕಚೇರಿಯನ್ನು ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಸೀಲ್ ಮಾಡಿದ್ದರು. ಅಲ್ಲದೆ, ಪರಿಶೀಲನೆ ಬಳಿಕ 14 ನಿಯಮ ಉಲ್ಲಂಘನೆಗಳ ಪಟ್ಟಿ ಸಹ ಮಾಡಿದ್ದರು. ನೆಲಸಮ ಮಾಡುವುದಾಗಿಯೂ ನೋಟಿಸ್ ಸಹ ಹೊರಡಿಸಿದ್ದರು.
ಸೋಮವಾರ ನೀಡಿದ್ದ ನೋಟೀಸ್ನಲ್ಲಿ ಹೇಗೆ ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ನಮೂದಿಸಲಾಗಿತ್ತು. ಅಷ್ಟೇ ಅಲ್ಲ, 24 ಗಂಟೆಗಳಲ್ಲಿ ಈ ನೋಟೀಸ್ಗೆ ಉತ್ತರ ಕೊಡದಿದ್ದ ಪಕ್ಷದಲ್ಲಿ, ಅತಿಕ್ರಮವಾಗಿ ನಿರ್ಮಿಸಲಾದ ಭಾಗವನ್ನು ಒಡೆಯುವುದಾಗಿ ಈ ನೋಟೀಸ್ನಲ್ಲಿ ಹೇಳಲಾಗಿತ್ತು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm