ಬ್ರೇಕಿಂಗ್ ನ್ಯೂಸ್
09-09-20 05:57 pm Headline Karnataka News Network ದೇಶ - ವಿದೇಶ
ನ್ಯೂಯಾರ್ಕ್, ಸೆಪ್ಟೆಂಬರ್ 9: ದ್ವೇಷವನ್ನು ಬಳಸಿ ಅಮೆರಿಕಾದಲ್ಲಿ ಮತ್ತು ಜಾಗತಿಕವಾಗಿ ಲಾಭಗಳಿಸುತ್ತಿರುವ ಸಂಸ್ಥೆಯೊಂದಕ್ಕಾಗಿ ಕೆಲಸ ಮಾಡುವುದು ಇನ್ನು ಸಾಧ್ಯವಿಲ್ಲದೇ ಇರುವುದರಿಂದ ಕೆಲಸ ತೊರೆಯುತ್ತಿದ್ದೇನೆ'' ಎಂದು ಫೇಸ್ ಬುಕ್ ನ ಸಾಪ್ಟ್ವೇರ್ ಇಂಜಿನಿಯರ್ ಅಶೋಕ್ ಚಂದ್ವಾನೆ ಸಂಸ್ಥೆಯ ಉದ್ಯೋಗಿಗಳ ಆಂತರಿಕ ನೆಟ್ ವರ್ಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ತಮ್ಮ ಈ 1,300 ಪದಗಳ ಪೋಸ್ಟ್ ನಲ್ಲಿ ಸಿಯಾಟಲ್ ನಲ್ಲಿ ನೆಲೆ ನಿಂತಿರುವ 28 ವರ್ಷದ ಅಶೋಕ್ ಅವರು ಫೇಸ್ ಬುಕ್ ಒಂದು ಉತ್ತಮ ಉದ್ಯೋಗ ಸ್ಥಳವಾಗಿದ್ದರೂ ಸಮಯ ಕಳೆದಂತೆ ಸಂಸ್ಥೆಯ ನಾಯಕತ್ವ ಸಮಾಜಕ್ಕೆ ಒಳಿತು ಮಾಡುವುದಕ್ಕಿಂತ ಹೆಚ್ಚಾಗಿ ಲಾಭದತ್ತ ಗಮನ ಹರಿಸಿದೆ ಎಂದು ತಿಳಿದು ಬಂತು. ಫೇಸ್ ಬುಕ್ ವೇದಿಕೆಯನ್ನು ಬಳಸಿ ನಡೆಯುವ ಜನಾಂಗೀಯ ನಿಂದನೆ, ಸುಳ್ಳು ಸುದ್ದಿ ಹಾಗೂ ಹಿಂಸೆಗೆ ಪ್ರಚೋದನೆಯನ್ನು ತಡೆಯಲು ಸಂಸ್ಥೆ ಹೆಚ್ಚೇನೂ ಮಾಡಿಲ್ಲ'' ಎಂದು ಅವರು ತಮ್ಮ ಪತ್ರದಲ್ಲಿ ಬರೆದಿದ್ದಾರೆ.

“ಲೂಟಿ ಆರಂಭಗೊಂಡಾಗ ಶೂಟಿಂಗ್ ಆರಂಭಗೊಳ್ಳುತ್ತದೆ'' ಎಂಬ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪೋಸ್ಟ್ ತೆಗೆಯಲು ಫೇಸ್ ಬುಕ್ ನಿರಾಕರಿಸಿರುವುದನ್ನೂ ಅವರು ತಮ್ಮ ಪೋಸ್ಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಕಳೆದ ತಿಂಗಳು ಕೆನೋಶಾದಲ್ಲಿ ನಡೆದ ಹಿಂಸೆಗೆ ಪೂರ್ವಭಾವಿಯಾಗಿ ತೀವ್ರಗಾಮಿ ಗುಂಪೊಂದು ಜನರಿಗೆ ಬಂದೂಕುಗಳನ್ನು ತರಲು ಉತ್ತೇಜಿಸಿ ಹಾಕಿದ್ದ ಪೋಸ್ಟ್ ಕೂಡ ಫೇಸ್ ಬುಕ್ ತೆಗೆದು ಹಾಕಲು ವಿಫಲವಾಗಿದ್ದು, ಹಾಗೂ ಇದು ಕಳೆದ ತಿಂಗಳು ಗಂಭೀರ ಗುಂಡು ದಾಳಿ ಪ್ರಕರಣಕ್ಕೆ ಕಾರಣವಾಗಿದ್ದನ್ನೂ ಅಶೋಕ್ ತಮ್ಮ ಪೋಸ್ಟ್ ನಲ್ಲಿ ಬರೆದಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm