ಬ್ರೇಕಿಂಗ್ ನ್ಯೂಸ್
21-09-21 05:28 pm Headline Karnataka News Network ದೇಶ - ವಿದೇಶ
ಶ್ರೀನಗರ, ಸೆ. 21: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಮಂಗಳವಾರ ಹೆಲಿಕಾಪ್ಟರ್ ಒಂದು ಪತನವಾಗಿದ್ದು, ಇಬ್ಬರು ಸೇನಾ ಪೈಲಟ್ಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಈ ಹಿಂದೆ ಮಾಹಿತಿ ನೀಡಿದ್ದರು. ಈ ಘಟನೆಯಲ್ಲಿ ಇಬ್ಬರು ಸೇನಾ ಪೈಲಟ್ಗಳು ಗಾಯಗೊಂಡಿದ್ದಾರೆ ಎಂದು ಕೂಡಾ ವರದಿಯಾಗಿತ್ತು. ಈಗ ಆ ಸೇನಾ ಪೈಲಟ್ಗಳು ಸಾವನ್ನಪ್ಪಿದ್ದಾರೆ ಎಂದು ವರದಿಯು ತಿಳಿಸಿದೆ.
"ಸೇನಾ ಹೆಲಿಕಾಪ್ಟರ್ ಪತನವಾದ ಸಂದರ್ಭದಲ್ಲಿ ಇಬ್ಬರು ಪೈಲಟ್ಗಳು ತೀವ್ರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಈ ಇಬ್ಬರು ಪೈಲಟ್ಗಳನ್ನು ರಕ್ಷಣೆ ಮಾಡಿದರು. ಇಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಈ ಸಂದರ್ಭದಲ್ಲಿ ವೈದ್ಯರು ಪೈಲಟ್ಗಳಿಬ್ಬರು ಸಾವನ್ನಪ್ಪಿದ್ದಾರೆ ಎಂದು ಘೋಷಣೆ ಮಾಡಿದ್ದಾರೆ," ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.



ಪತನವಾಗಿ ಧ್ವಂಸವಾಗಿರುವ ಹೆಲಿಕಾಪ್ಟರ್ ಕಣಿವೆ ಬದಿ ಬಿದ್ದಿರುವ ಹಾಗೂ ಸ್ಥಳೀಯರು ಪೈಲಟ್ಗಳನ್ನು ಹೊರಗೆ ಎಳೆಯುವ ಪ್ರಯತ್ನವನ್ನು ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಂಡು ಬಂದಿದೆ. ಈ ಘಟನೆಯು ಇಂದು ಬೆಳಿಗ್ಗೆ ಸುಮಾರು 10:30 ಗಂಟೆಗೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಟ್ವಿಟ್ಟರ್ ಮೂಲಕ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್, "ಹೆಲಿಕಾಪ್ಟರ್ ಪತನದ ಸುದ್ದಿ ಕೇಳಿ ಆಘಾತ ಉಂಟಾಗಿದೆ," ಎಂದು ಹೇಳಿದ್ದಾರೆ.
ಇನ್ನು ಹೆಲಿಕಾಪ್ಟರ್ ಅನ್ನು ಗುಡ್ಡದ ಮೇಲೆ ಇಳಿಸುವಾಗ ತೊಂದರೆ ಉಂಟಾಗಿದೆ ಎಂದು ಕೂಡಾ ಹೇಳಲಾಗುತ್ತಿದೆ. ಕಳೆದ ತಿಂಗಳು ಜಮ್ಮು ಮತ್ತು ಕಾಶ್ಮೀರದ ಕತುವಾದ ರಂಜಿತ್ ಸಾಗರ್ ಡ್ಯಾಮ್ ಸಹೋವರದಲ್ಲಿ ಹೆಲಿಕಾಪ್ಟರ್ ಪತನವಾಗಿತ್ತು. ಪೈಲಟ್ ನಾಪತ್ತೆಯಾಗಿದ್ದರು. ಈ ಹಿನ್ನೆಲೆ ಪತ್ತೆ ಕಾರ್ಯಾಚರಣೆ ನಡೆಸಲಾಗಿತ್ತು.
Two pilots succumbed to their injuries after a helicopter of the Indian Army force-landed near Patnitop in Udhampur of Jammu and Kashmir on Tuesday. The pilots had been evacuated and rushed to a treatment facility, an army spokesperson said, adding further details were being ascertained.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 02:58 pm
HK News Staffer
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm