ಬ್ರೇಕಿಂಗ್ ನ್ಯೂಸ್
21-09-21 05:28 pm Headline Karnataka News Network ದೇಶ - ವಿದೇಶ
ಶ್ರೀನಗರ, ಸೆ. 21: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಮಂಗಳವಾರ ಹೆಲಿಕಾಪ್ಟರ್ ಒಂದು ಪತನವಾಗಿದ್ದು, ಇಬ್ಬರು ಸೇನಾ ಪೈಲಟ್ಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಈ ಹಿಂದೆ ಮಾಹಿತಿ ನೀಡಿದ್ದರು. ಈ ಘಟನೆಯಲ್ಲಿ ಇಬ್ಬರು ಸೇನಾ ಪೈಲಟ್ಗಳು ಗಾಯಗೊಂಡಿದ್ದಾರೆ ಎಂದು ಕೂಡಾ ವರದಿಯಾಗಿತ್ತು. ಈಗ ಆ ಸೇನಾ ಪೈಲಟ್ಗಳು ಸಾವನ್ನಪ್ಪಿದ್ದಾರೆ ಎಂದು ವರದಿಯು ತಿಳಿಸಿದೆ.
"ಸೇನಾ ಹೆಲಿಕಾಪ್ಟರ್ ಪತನವಾದ ಸಂದರ್ಭದಲ್ಲಿ ಇಬ್ಬರು ಪೈಲಟ್ಗಳು ತೀವ್ರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಈ ಇಬ್ಬರು ಪೈಲಟ್ಗಳನ್ನು ರಕ್ಷಣೆ ಮಾಡಿದರು. ಇಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಈ ಸಂದರ್ಭದಲ್ಲಿ ವೈದ್ಯರು ಪೈಲಟ್ಗಳಿಬ್ಬರು ಸಾವನ್ನಪ್ಪಿದ್ದಾರೆ ಎಂದು ಘೋಷಣೆ ಮಾಡಿದ್ದಾರೆ," ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪತನವಾಗಿ ಧ್ವಂಸವಾಗಿರುವ ಹೆಲಿಕಾಪ್ಟರ್ ಕಣಿವೆ ಬದಿ ಬಿದ್ದಿರುವ ಹಾಗೂ ಸ್ಥಳೀಯರು ಪೈಲಟ್ಗಳನ್ನು ಹೊರಗೆ ಎಳೆಯುವ ಪ್ರಯತ್ನವನ್ನು ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಂಡು ಬಂದಿದೆ. ಈ ಘಟನೆಯು ಇಂದು ಬೆಳಿಗ್ಗೆ ಸುಮಾರು 10:30 ಗಂಟೆಗೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಟ್ವಿಟ್ಟರ್ ಮೂಲಕ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್, "ಹೆಲಿಕಾಪ್ಟರ್ ಪತನದ ಸುದ್ದಿ ಕೇಳಿ ಆಘಾತ ಉಂಟಾಗಿದೆ," ಎಂದು ಹೇಳಿದ್ದಾರೆ.
ಇನ್ನು ಹೆಲಿಕಾಪ್ಟರ್ ಅನ್ನು ಗುಡ್ಡದ ಮೇಲೆ ಇಳಿಸುವಾಗ ತೊಂದರೆ ಉಂಟಾಗಿದೆ ಎಂದು ಕೂಡಾ ಹೇಳಲಾಗುತ್ತಿದೆ. ಕಳೆದ ತಿಂಗಳು ಜಮ್ಮು ಮತ್ತು ಕಾಶ್ಮೀರದ ಕತುವಾದ ರಂಜಿತ್ ಸಾಗರ್ ಡ್ಯಾಮ್ ಸಹೋವರದಲ್ಲಿ ಹೆಲಿಕಾಪ್ಟರ್ ಪತನವಾಗಿತ್ತು. ಪೈಲಟ್ ನಾಪತ್ತೆಯಾಗಿದ್ದರು. ಈ ಹಿನ್ನೆಲೆ ಪತ್ತೆ ಕಾರ್ಯಾಚರಣೆ ನಡೆಸಲಾಗಿತ್ತು.
Two pilots succumbed to their injuries after a helicopter of the Indian Army force-landed near Patnitop in Udhampur of Jammu and Kashmir on Tuesday. The pilots had been evacuated and rushed to a treatment facility, an army spokesperson said, adding further details were being ascertained.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm