ಬ್ರೇಕಿಂಗ್ ನ್ಯೂಸ್
22-09-21 10:51 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆ.22: ಕೋವಿಡ್ ಸೋಂಕಿನಿಂದ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಕೇಂದ್ರ ಸರಕಾರ ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಿದೆ. ಈ ಬಗ್ಗೆ ಕೇಂದ್ರ ವಿಪತ್ತು ನಿರ್ವಹಣಾ ಪ್ರಾಧಿಕಾರವು ಕೋರ್ಟಿಗೆ ವರದಿ ನೀಡಿದ್ದು, ರಾಜ್ಯ ಸರಕಾರಗಳ ಮೂಲಕ ಸೋಂಕು ಪೀಡಿತರಾಗಿ ಮೃತಪಟ್ಟ ಪ್ರತಿ ಕುಟುಂಬಕ್ಕೂ ತಲಾ 50 ಸಾವಿರ ಪರಿಹರಾ ನೀಡುವುದಾಗಿ ಹೇಳಿದೆ.
ಅಲ್ಲದೆ, ಕೋವಿಡ್ ಸಂಬಂಧಪಟ್ಟ ಕಾರ್ಯಾಚರಣೆ, ಇನ್ನಿತರ ನೆರವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರಿಗೂ ಹೆಚ್ಚುವರಿ ಪರಿಹಾರ ನೀಡುವುದಾಗಿ ಕೋರ್ಟಿಗೆ ಹೇಳಿದೆ. ಆದರೆ, ಹೀಗೆ ಪರಿಹಾರ ಪಡೆಯುವ ಮಂದಿ ಆರೋಗ್ಯ ಇಲಾಖೆಯಿಂದ ನೀಡಿರುವ ಮಾರ್ಗಸೂಚಿ ಪ್ರಕಾರ ಕೋವಿಡ್ ಕಾರಣದಿಂದಾಗಿಯೇ ಸಾವನ್ನಪ್ಪಿದ್ದಾಗಿ ಸಾಬೀತು ಮಾಡಬೇಕಿದೆ. ಪರಿಹಾರ ಮೊತ್ತವನ್ನು ರಾಜ್ಯಗಳ ವಿಪತ್ತು ಪರಿಹಾರ ನಿಧಿಯಿಂದ ನೀಡುವುದಾಗಿ ಹೇಳಿಕೆ ನೀಡಿದೆ.
ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಸ್ಥರು ಸೂಕ್ತ ದಾಖಲೆ, ಕೋವಿಡ್ ಸಾವಿನ ಬಗ್ಗೆ ದಾಖಲಾತಿಗಳೊಂದಿಗೆ ಆಯಾ ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಬೇಕಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಒಂದು ತಿಂಗಳ ಒಳಗೆ ಪರಿಹಾರ ಮೊತ್ತವನ್ನು ಕುಟುಂಬಸ್ಥರಿಗೆ ನೀಡಬೇಕು. ಆಧಾರ್ ಲಿಂಕ್ ಆಧರಿಸಿ, ಪರಿಹಾರ ಮೊತ್ತವನ್ನು ನೇರವಾಗಿ ಜಮೆ ಮಾಡಬೇಕು ಎಂದು ಕೇಂದ್ರ ಸರಕಾರ ಅಫಿಡವಿಟ್ ನಲ್ಲಿ ಹೇಳಿದೆ.
ಕೋವಿಡ್ ಸೋಂಕಿನಿಂದ ಮೃತರಿಗೆ ಮರಣ ಪ್ರಮಾಣಪತ್ರ ಕೊಡುವುದಕ್ಕೆ ವಿಳಂಬಿಸಿದ ಬಗ್ಗೆ ಇತ್ತೀಚೆಗೆ ಸುಪ್ರೀಂ ಕೋರ್ಟ್ ಕೇಂದ್ರ ಸರಕಾರವನ್ನು ತರಾಟೆಗೆತ್ತಿಕೊಂಡಿತ್ತು.
The families of those who die of Covid will receive Rs 50,000 ex gratia from the state governments, the Centre informed the Supreme Court today. Significantly, compensation will be paid against not only for deaths that have already occurred but for future ones, too, the court was told.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm