ಬ್ರೇಕಿಂಗ್ ನ್ಯೂಸ್
09-09-20 11:05 pm Headline Karnataka News Network ದೇಶ - ವಿದೇಶ
ಜೆರುಸಲೆಂ, ಸೆಪ್ಟೆಂಬರ್ 9: ಇಸ್ರೇಲ್ ಮತ್ತು ಯುನೈಟೆಡ್ ಅರಬ್ ಎಮಿರೈಟ್ಸ್ ನಡುವೆ ಒಪ್ಪಂದ ಏರ್ಪಡಲು ನಡೆಸಿದ ಪ್ರಯತ್ನಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ನೊಬೆಲ್ ಶಾಂತಿ ಪುರಸ್ಕಾರಕ್ಕಾಗಿ ನಾಮನಿರ್ದೇಶನ ಮಾಡಲಾಗಿದೆ.
ನಾರ್ವೆ ಸಂಸತ್ನ ಸದಸ್ಯ ಮತ್ತು ನ್ಯಾಟೋ ಸಂಸದೀಯ ಸಭೆಯ ಅಧ್ಯಕ್ಷ ಕ್ರಿಸ್ಟಿಯನ್ ಟೈಬ್ರಿಂಗ್-ಜೆಡ್ಡೆ ಈ ನಾಮನಿರ್ದೇಶನ ಸಲ್ಲಿಸಿದ್ದಾರೆ ಎಂದು ಫಾಕ್ಸ್ ನ್ಯೂಸ್ ವರದಿ ಮಾಡಿದೆ.
ಮ್ ಜಾಂಗ್ ಉನ್ ಅವರಿಗಾಗಿ ಸಿಂಗಪುರದಲ್ಲಿ ಆಯೋಜಿಸಿದ್ದ ಸಮಾವೇಶದ ಸಲುವಾಗಿ ಟ್ರಂಪ್ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡುವಂತೆ ಟೈಬ್ರಿಂಗ್ 2018ರಲ್ಲಿ ಕೂಡ ನಾಮನಿರ್ದೇಶನ ಸಲ್ಲಿಸಿದ್ದರು.
ಇತರೆ ನೊಬೆಲ್ ಶಾಂತಿ ಪುರಸ್ಕಾರ ನಾಮನಿರ್ದೇಶಿತ ವ್ಯಕ್ತಿಗಳಿಗಿಂತಲೂ ಹೆಚ್ಚು ದೇಶಗಳ ಮಧ್ಯೆ ಶಾಂತಿ ಸ್ಥಾಪಿಸುವ ಪ್ರಯತ್ನದಲ್ಲಿ ಡೊನಾಲ್ಡ್ ಟ್ರಂಪ್ ಕೆಲಸ ಮಾಡುವ ಮೂಲಕ ಅರ್ಹತೆ ಗಳಿಸಿದ್ದಾರೆ ಎಂದು ಟೈಬ್ರಿಂಗ್ ಹೇಳಿದ್ದಾರೆ. ಭಾರತ-ಪಾಕಿಸ್ತಾನ ನಡುವಿನ ಕಾಶ್ಮೀರ ಗಡಿ ವಿವಾದ, ಉತ್ತರ ಮತ್ತು ದಕ್ಷಿಣ ಕೊರಿಯಾ ಸಂಘರ್ಷದಂತಹ ದೇಶಗಳ ಮಧ್ಯೆ ಇರುವ ಸಂಘರ್ಷಗಳನ್ನು ಪರಿಹರಿಸಲು ಸಂಪರ್ಕ ಮೂಡಿಸುವ ಪ್ರಯತ್ನದಲ್ಲಿ ಡೊನಾಲ್ಡ್ ಟ್ರಂಪ್ ಪ್ರಮುಖ ಪಾತ್ರವಹಿಸಿದ್ದಾರೆ ಎಂದು ಇಸ್ರೇಲ್-ಯುಎಇ ಒಪ್ಪಂದವನ್ನು ಉಲ್ಲೇಖಿಸಿ ನೊಬೆಲ್ ಸಮಿತಿಗೆ ಪತ್ರ ಬರೆದಿದ್ದಾರೆ.
ಸಮಿತಿಯು ವಾಸ್ತವಗಳನ್ನು ಗಮನಿಸಬೇಕು ಮತ್ತು ವಾಸ್ತವಗಳ ಆಧಾರದಲ್ಲಿ ಅವರನ್ನು ನಿರ್ಧರಿಸಬೇಕೇ ಹೊರತು ಅವರ ವರ್ತನೆಯ ಆಧಾರದ ಮೇಲೆ ಅಲ್ಲ. ಇತ್ತೀಚಿನ ವರ್ಷಗಳಲ್ಲಿ ಶಾಂತಿ ಪುರಸ್ಕಾರಗಳನ್ನು ಪಡೆದಿರುವ ಜನರು ಡೊನಾಲ್ಡ್ ಟ್ರಂಪ್ ಅವರಿಗಿಂತಲೂ ಕಡಿಮೆ ಕೆಲಸ ಮಾಡಿದ್ದಾರೆ ಎಂದಿರುವ ಅವರು, ತಾವು ಡೊನಾಲ್ಡ್ ಟ್ರಂಪ್ ಅಭಿಮಾನಿಯಲ್ಲ ಎಂದು ತಿಳಿಸಿದ್ದಾರೆ. ಉದಾಹರಣೆಗೆ, ಬರಾಕ್ ಒಬಾಮಾ ಯಾವ ಕೆಲಸವನ್ನೂ ಮಾಡಿರಲಿಲ್ಲ ಎಂದು 2009ರಲ್ಲಿ ಅಮೆರಿಕಾ ಅಧ್ಯಕ್ಷರಾಗಿದ್ದಾಗ ನೊಬೆಲ್ ಶಾಂತಿ ಪುರಸ್ಕಾರ ಪಡೆದಿದ್ದ ಒಬಾಮಾ ಹೆಸರು ಪ್ರಸ್ತಾಪಿಸಿದ್ದಾರೆ. ಅಂತಾರಾಷ್ಟ್ರೀಯ ರಾಜತಾಂತ್ರಿಕತೆ ಮತ್ತು ಜನರ ನಡುವೆ ಸಹಕಾರ ಬಲಪಡಿಸುವಲ್ಲಿ ಬರಾಕ್ ಒಬಾಮಾ ಅಭೂತಪೂರ್ವ ಪ್ರಯತ್ನಗಳನ್ನು ನಡೆಸಿದ್ದಾರೆ ಎಂದು ನೊಬೆಲ್ ಸಮಿತಿ ಹೇಳಿತ್ತು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm