ಬ್ರೇಕಿಂಗ್ ನ್ಯೂಸ್
26-09-21 09:54 pm Headline Karnataka News Network ದೇಶ - ವಿದೇಶ
ಮುಂಬೈ, ಸೆ.26: ಮಾನ್ಯಾವರ್ ಬ್ರಾಂಡ್ ಬಟ್ಟೆಗಳ ಜಾಹೀರಾತಿನಲ್ಲಿ ಹಿಂದುಗಳ ಸಾಂಪ್ರದಾಯಿಕ ಕನ್ಯಾದಾನ ವಿಧಿಯನ್ನು ಬಳಸಿಕೊಂಡಿದ್ದನ್ನು ವಿರೋಧಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಬಟ್ಟೆ ಮಳಿಗೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ವೇದಾಂತ್ ಫ್ಯಾಶನ್ಸ್ ಲಿಮಿಟೆಡ್ ಗೆ ಸೇರಿದ ಮಾನ್ಯಾವರ್ ಬ್ರಾಂಡಿನ ಬಟ್ಟೆಗಳ ಪ್ರಚಾರಕ್ಕೆ ಕನ್ಯಾದಾನ ವಿಧಿಯನ್ನು ಜಾಹೀರಾತು ರೂಪದಲ್ಲಿ ಬಳಕೆ ಮಾಡಲಾಗಿತ್ತು. ನವಿ ಮುಂಬೈನ ವಾಶಿ ಏರಿಯಾದಲ್ಲಿ ಬಟ್ಟೆ ಮಳಿಗೆಯ ಮುಂದೆ ಹಿಂದು ಸಂಘಟನೆಗಳ ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿದ್ದಾರೆ.

ಹಿಂದು ಜನಜಾಗೃತಿ ಸಮಿತಿ ಹೆಸರಲ್ಲಿ ಪ್ಲೇಕಾರ್ಡ್ ಹಿಡಿದು ಘೋಷಣೆ ಕೂಗಿದ ಪ್ರತಿಭಟನಾಕಾರರು ಕೂಡಲೇ ಜಾಹೀರಾತನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಈ ಸಂದರ್ಭ ಮಾತನಾಡಿದ ಡಾ.ಉದಯ್ ಧೂರಿ, ಈ ರೀತಿ ಹಿಂದುಗಳ ಮದುವೆ ಸಂದರ್ಭದಲ್ಲಿ ನಡೆಸುವ ಕನ್ಯಾದಾನ ವಿಧಿಯನ್ನು ಜಾಹೀರಾತು ಪ್ರಚಾರಕ್ಕೆ ಬಳಸಿಕೊಂಡಿದ್ದು ತಪ್ಪು. ಈ ಮೂಲಕ ಕನ್ಯಾದಾನವನ್ನು ಜನರಿಗೆ ತಪ್ಪಾಗಿ ಬಿಂಬಿಸಲಾಗಿದೆ. ಇದರಿಂದ ಹಿಂದುಗಳ ಭಾವನೆಗೆ ಘಾಸಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಬಟ್ಟೆ ಮಳಿಗೆಯ ಕಂಪನಿಯವರು ಬೇಷರತ್ ಕ್ಷಮೆ ಕೇಳಬೇಕು. ಅಲ್ಲದೆ, ಜಾಹೀರಾತನ್ನೂ ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಜನರು ಕೂಡ ಕಂಪನಿಯವರು ಕ್ಷಮೆ ಕೇಳೋ ವರೆಗೂ ಮಾನ್ಯಾವರ್ ಬಟ್ಟೆಗಳನ್ನು ಬಹಿಷ್ಕರಿಸಬೇಕು ಎಂದು ಕರೆ ನೀಡಿದ್ದಾರೆ.
A pro-Hindu outfit staged a protest outside the showroom of a clothing brand in Navi Mumbai against its advertisement featuring the marriage ritual of 'kanyadaan', claiming that it hurt religious sentiments of the community.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm