ಬ್ರೇಕಿಂಗ್ ನ್ಯೂಸ್
30-09-21 03:42 pm Headline Karnataka News Network ದೇಶ - ವಿದೇಶ
ಚಂಡೀಗಢ, ಸೆ.30: ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾದ ಬಳಿಕ ಬಿಜೆಪಿ ಸೇರಲಿದ್ದಾರೆ ಎಂಬ ವದಂತಿ ಹಬ್ಬಿತ್ತು. ಆದರೆ, ಅಮಿತ್ ಷಾ ಭೇಟಿಯ ಮರುದಿನವೇ ಅಮರಿಂದರ್ ಸಿಂಗ್ ಹೇಳಿಕೆ ನೀಡಿದ್ದು, ಬಿಜೆಪಿ ಸೇರುವುದಿಲ್ಲ. ಹಾಗೆಂದು ಕಾಂಗ್ರೆಸ್ ನಲ್ಲಿ ಮುಂದುವರಿಯೋದೂ ಇಲ್ಲ ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ.
ನಾನು ಈವಾಗಲೂ ಕಾಂಗ್ರೆಸಿನಲ್ಲೇ ಇದ್ದೇನೆ. ಹಾಗಂತ, ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯೋದಿಲ್ಲ. ಈ ರೀತಿಯ ವಾತಾವರಣದಲ್ಲಿ ನಾನು ಕಾಂಗ್ರೆಸಿನಲ್ಲಿ ಇರಲಾರೆ ಎಂದು ಅಮರಿಂದರ್ ಸಿಂಗ್ ಎನ್ ಡಿಟಿವಿಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ. ವಾರದ ಹಿಂದೆ ಸಿಎಂ ಸ್ಥಾನದಿಂದ ಇಳಿದಿದ್ದ ಅಮರಿಂದರ್ ಸಿಂಗ್, ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿದ್ದು ನಾನಾ ಊಹೋಪೋಹಗಳಿಗೆ ಕಾರಣವಾಗಿತ್ತು.


ಇದರ ಬೆನ್ನಲ್ಲೇ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರನ್ನು ಅಮರಿಂದರ್ ಸಿಂಗ್ ಭೇಟಿಯಾಗಿದ್ದರು. ಅಮಿತ್ ಷಾ ಭೇಟಿಯ ಬಳಿಕ ಟ್ವೀಟ್ ಮಾಡಿದ್ದ ಅಮರಿಂದರ್ ಸಿಂಗ್, ಕೇಂದ್ರ ಸಚಿವರನ್ನು ಭೇಟಿಯಾಗಿ ಕೃಷಿ ಮಸೂದೆಯ ಕುರಿತ ಜಟಾಪಟಿಗೆ ಕೊನೆ ಹಾಡುವಂತೆ ಕೇಳಿಕೊಂಡಿದ್ದೇನೆ. ಪಂಜಾಬ್ ನಲ್ಲಿ ಈ ಮಸೂದೆಯ ಕಾರಣದಿಂದ ರೈತರು ಸಂಕಷ್ಟಕ್ಕೀಡಾಗಿರುವುದನ್ನು ಸಚಿವರ ಗಮನಕ್ಕೆ ತಂದಿದ್ದೇನೆ ಎಂದು ತಿಳಿಸಿದ್ದರು.
ಇದರ ನಡುವಲ್ಲೇ ಪಂಜಾಬ್ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿದ್ದ ನವಜೋತ್ ಸಿಂಗ್ ಸಿಧು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಪಂಜಾಬ್ ಕಾಂಗ್ರೆಸ್ ನಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿದ್ದರು. ಇವೆಲ್ಲ ಬೆಳವಣಿಗೆಯ ಮಧ್ಯೆ ಅಮರಿಂದ್ ಸಿಂಗ್ ತಾನೂ ಕಾಂಗ್ರೆಸಿನಲ್ಲಿ ಉಳಿಯಲ್ಲ, ಬಿಜೆಪಿ ಸೇರಲ್ಲ ಎನ್ನುವ ಮೂಲಕ ಅಚ್ಚರಿಗೆ ಕಾರಣವಾಗಿದ್ದಾರೆ. ಕಾಂಗ್ರೆಸಿನಲ್ಲೇ ಮಹತ್ವದ ಸ್ಥಾನ ಸಿಕ್ಕರೆ ಉಳಿಯುತ್ತಾರೆಯೇ ಅಥವಾ ಆಪ್ ಪಕ್ಷದತ್ತ ಮುಖ ಮಾಡಿದ್ದಾರೆಯೇ ಎನ್ನುವ ಕುತೂಹಲಕ್ಕೆ ಕಾರಣವಾಗಿದೆ. ಪಂಜಾಬ್ ನಲ್ಲಿ ಮುಂದಿನ ವರ್ಷದಲ್ಲೇ ಅಸೆಂಬ್ಲಿ ಚುನಾವಣೆ ನಡೆಯಲಿದ್ದು, ಬಿಜೆಪಿ ಮತ್ತು ಆಪ್ ಪಕ್ಷಗಳು ಭಾರೀ ಕಸರತ್ತಿನಲ್ಲಿ ತೊಡಗಿವೆ.
A day after meeting Union Home Minister Amit Shah at his residence in Delhi, former Punjab CM Capt Amarinder Singh has said that he is not joining the Bharatiya Janata Party (BJP).
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 02:58 pm
HK News Staffer
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm