ಬ್ರೇಕಿಂಗ್ ನ್ಯೂಸ್
05-10-21 02:41 pm Headline Karnataka News Network ದೇಶ - ವಿದೇಶ
ಲಕ್ನೋ, ಅ.5: ಉತ್ತರ ಪ್ರದೇಶದ ಲಖೀಮ್ ಪುರ್ ಖೇರಿಯಲ್ಲಿ ನಡೆದಿರುವ ಹಿಂಸಾಚಾರ ಮತ್ತು ರೈತರ ಮೇಲೆ ಜೀಪು ಹರಿಸಿದ ಘಟನೆಯನ್ನು ಖಂಡಿಸಿರುವ ಬಿಜೆಪಿ ಸಂಸದ ವರುಣ್ ಗಾಂಧಿ, ರೈತರು ಪ್ರತಿಭಟನೆ ನಡೆಸುತ್ತಿದ್ದಾಗ ಜೀಪು ಹರಿಸಿದ ವಿಡಿಯೋವನ್ನು ಟ್ವೀಟ್ ಮಾಡಿದ್ದು, ಜೀಪು ಮಾಲೀಕ ಮತ್ತು ಅದರಲ್ಲಿದ್ದ ಎಲ್ಲರನ್ನು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.
ಈ ವಿಡಿಯೋ ನೋಡಿದರೆ, ಜೀಪಿನಲ್ಲಿದ್ದವರು ಉದ್ದೇಶಪೂರ್ವಕವಾಗಿ ರೈತರ ಮೇಲೆ ಹರಿಸಿದ್ದಾರೆ ಎನ್ನುವುದು ಕಂಡುಬರುತ್ತದೆ. ಪೊಲೀಸರು ಈ ವಿಡಿಯೋ ಆಧರಿಸಿ, ಪ್ರಕರಣ ದಾಖಲಿಸಬೇಕು. ಅಲ್ಲದೆ, ಈ ಜೀಪು ಯಾರ ಹೆಸರಲ್ಲಿದೆ, ಅವರನ್ನು ಮತ್ತು ಜೀಪಿನಲ್ಲಿ ಯಾರು ಕುಳಿತಿದ್ದರು ಅವರೆಲ್ಲರನ್ನೂ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ರೈತರ ಮೇಲೆ ಜೀಪು ಹರಿಸಿದ ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು. ಅಲ್ಲದೆ, ಸಂತ್ರಸ್ತ ರೈತರಿಗೆ ತಲಾ ಒಂದು ಕೋಟಿ ಪರಿಹಾರ ನೀಡಬೇಕು. ಈ ಘಟನೆ ಬಗ್ಗೆ ಸಿಬಿಐ ತನಿಖೆ ನಡೆಯಬೇಕು ಎಂದು ವರುಣ್ ಗಾಂಧಿ ಆಗ್ರಹಿಸಿದ್ದಾರೆ.
ಮಗ ಅಲ್ಲಿದ್ದ ಬಗ್ಗೆ ಒಂದೇ ಸಾಕ್ಷ್ಯ ಇದ್ದರೂ ರಾಜಿನಾಮೆ
ಇದೇ ವೇಳೆ, ರೈತರ ಮೇಲೆ ಹರಿಸಿದ ಜೀಪು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಮಗನಿಗೆ ಸೇರಿದ್ದು ಎನ್ನಲಾಗುತ್ತಿದ್ದು, ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂಬ ಆಗ್ರಹ ಕೇಳಿಬಂದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಜಯ್ ಮಿಶ್ರಾ, ತನ್ನ ಮಗ ಆ ಜಾಗದಲ್ಲಿದ್ದ ಎನ್ನುವುದಕ್ಕೆ ಒಂದೇ ಒಂದು ಸಾಕ್ಷ್ಯ ನೀಡಿದರೂ ನಾನು ಸಚಿವ ಸ್ಥಾನಕ್ಕೇ ರಾಜಿನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. ರೈತರ ಪ್ರತಿಭಟನೆ ವೇಳೆ ಜೀಪು ಹರಿಸಿದ ಘಟನೆಯ ಬಳಿಕ ಲಖೀಮ್ ಪುರ್ ಖೇರಿಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ನಾಲ್ಕು ರೈತರು ಸೇರಿ ಎಂಟು ಮಂದಿ ಮೃತಪಟ್ಟಿದ್ದಾರೆ.
ಹಿಂಸಾಚಾರ ಭುಗಿಲೆದ್ದು ಸಚಿವನ ಮಗನ ಕಾರು ರೈತರ ಮೇಲೆ ಹರಿದಿದೆ ಎನ್ನುವ ಸುದ್ದಿ ಹಬ್ಬುತ್ತಲೇ ದೇಶಾದ್ಯಂತ ಆಕ್ರೋಶ ಕೇಳಿಬಂದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಷ್ ಮಿಶ್ರಾ, ನಾನು ಆ ಸ್ಥಳದಲ್ಲಿ ಇರಲೇ ಇಲ್ಲ. ಬನ್ವಿರ್ ಪುರದಲ್ಲಿ ಕುಸ್ತಿ ಪಂದ್ಯ ಆಯೋಜಿಸಿದ್ದು ಇಡೀ ದಿನ ಅಲ್ಲಿಯೇ ಇದ್ದೆ. ಕುಸ್ತಿ ಪಂದ್ಯಾಟಕ್ಕೆ ಡಿಸಿಎಂ ಕೇಶವ ಪ್ರಸಾದ್ ಮೌರ್ಯ ಸೇರಿ ಬಿಜೆಪಿ ನಾಯಕರನ್ನು ಕರೆತರಲು ನನ್ನ ಮಹೀಂದಾ ಥಾರ್ ಕಾರನ್ನೂ ಕಳಿಸಿದ್ದೆ. ಕಾರಿನ ಮೇಲೂ ದಾಳಿಯಾಗಿದೆ ಎಂದು ಹೇಳಿದ್ದಾರೆ.
लखीमपुर खीरी में किसानों को गाड़ियों से जानबूझकर कुचलने का यह वीडियो किसी की भी आत्मा को झखझोर देगा।
— Varun Gandhi (@varungandhi80) October 5, 2021
पुलिस इस वीडियो का संज्ञान लेकर इन गाड़ियों के मालिकों, इनमें बैठे लोगों, और इस प्रकरण में संलिप्त अन्य व्यक्तियों को चिन्हित कर तत्काल गिरफ्तार करे।
#LakhimpurKheri@dgpup pic.twitter.com/YmDZhUZ9xq
Sharing a video on Twitter, BJP MP Varun Gandhi has urged the police to immediately arrest the owners of cars that crushed farmers to death in Lakhimpur Kheri.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm