ಬ್ರೇಕಿಂಗ್ ನ್ಯೂಸ್
07-10-21 02:13 pm Headline Karnataka News Network ದೇಶ - ವಿದೇಶ
ಹೃಷಿಕೇಶ್, ಅ.7: ಸಾರ್ವಜನಿಕ ಜೀವನ ಪ್ರವೇಶಿಸಿ ಹಲವು ದಶಕಗಳಾಗಿವೆ. 2001ರಲ್ಲಿ ಮುಖ್ಯಮಂತ್ರಿಯಾಗುವ ಅವಕಾಶ ಲಭಿಸಿತ್ತು. ಜನರ ಬೆಂಬಲದಿಂದ ಪ್ರಧಾನಿಯೂ ಆಗಿದ್ದೇನೆ. ಆದರೆ, ಮುಂದೊಂದು ದಿನ ಪ್ರಧಾನಿಯಾಗುತ್ತೇನೆಂದು ಯಾವತ್ತೂ ಕನಸಲ್ಲೂ ಅನ್ಕೊಂಡಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮೋದಿ, ಸಾಂವಿಧಾನಿಕ ಹುದ್ದೆ ಸ್ವೀಕರಿಸಿ ಅ.7ಕ್ಕೆ 20 ವರ್ಷ ಪೂರೈಸುತ್ತಿದ್ದು, ದೇಶಾದ್ಯಂತ ಇದೇ ದಿನ ಆಕ್ಸಿಜನ್ ಘಟಕಗಳ ಉದ್ಘಾಟನೆ ನಡೆಸಲಾಗುತ್ತಿದೆ.
ಆಕ್ಸಿಜನ್ ಘಟಕದ ಉದ್ಘಾಟನೆ ನಿಮಿತ್ತ ಉತ್ತರಾಖಂಡ್ ರಾಜ್ಯದ ಹೃಷಿಕೇಶಕ್ಕೆ ತೆರಳಿರುವ ಮೋದಿ, ಏಮ್ಸ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಪ್ಲಾಂಟ್ ಉದ್ಘಾಟಿಸಿ ಮಾತನಾಡಿದರು. ಪಿಎಂ ಕೇರ್ ಫಂಡ್ ಅಡಿ ದೇಶದ 35 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಆಕ್ಸಿಜನ್ ಪ್ಲಾಂಟ್ ಏಕಕಾಲದಲ್ಲಿ ಆಕ್ಸಿಜನ್ ಪ್ಲಾಂಟ್ ಉದ್ಘಾಟನೆ ನೆರವೇರಿಸಲಾಗಿದೆ.
ಕಡಿಮೆ ಅವಧಿಯಲ್ಲಿ ದೇಶದಲ್ಲೀಗ ಆಕ್ಸಿಜನ್ ಪ್ಲಾಂಟ್, ಕೋವಿನ್ ಟೆಸ್ಟಿಂಗ್ ಲ್ಯಾಬ್ ಆಗಿದೆ. ಅಗತ್ಯ ಮೂಲಸೌಲಭ್ಯಗಳನ್ನು ಪೂರೈಸಿಕೊಂಡಿದ್ದು ದೇಶದ ಸಾಮರ್ಥ್ಯವನ್ನು ತೋರಿಸಿದ್ದೇವೆ. ಭಾರತ ಈಗ ಕೋವಿಡ್ ಲಸಿಕೆ, ಕಿಟ್, ಮಾಸ್ಕ್ ಇನ್ನಿತರ ಉತ್ಪನ್ನಗಳನ್ನು ವಿದೇಶಗಳಿಗೆ ಪೂರೆಕೆಯನ್ನೂ ಮಾಡುತ್ತಿದೆ. ದೇಶಾದ್ಯಂತ ಕೋವಿಡ್ ಲಸಿಕೆಯನ್ನೂ ನೀಡಿದ್ದಲ್ಲದೆ, ಸಾಗರ ಮತ್ತು ಕಾಡಿನ ಮಧ್ಯೆ ಇರುವ ಜನರಿಗೂ ಲಸಿಕೆ ತಲುಪಿಸಿದ್ದೇವೆ ಎಂದು ಮೋದಿ ಹೇಳಿದರು.
ಇದೇ ವೇಳೆ, ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮೋದಿಯವರನ್ನು ಶ್ಲಾಘಿಸುತ್ತಾ ಸಾರ್ವಜನಿಕ ಜೀವನದ 20 ವರ್ಷಗಳನ್ನು ಪೂರೈಸಿದ ದಿನವೇ ನಮ್ಮಲ್ಲಿಗೆ ಆಗಮಿಸಿದ್ದು ಹೆಮ್ಮೆಯ ಕ್ಷಣ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಈಗ ಜಗತ್ತಿನ ಅತ್ಯಂತ ಪ್ರಭಾವಿ ನಾಯಕ. ಅವರು ಇಂದು ದೇವಭೂಮಿಗೆ ಬಂದಿದ್ದು ಶುಭದ ಸೂಚನೆ. ಈ ಕ್ಷಣಕ್ಕಾಗಿ ನಾವು ಕಾಯುತ್ತಿದ್ದೆವು ಎಂದು ಧಾಮಿ ಹೇಳಿದರು.
2001ರಲ್ಲಿ ಅಕ್ಟೋಬರ್ 7ರಂದು ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ, ಆ ಹುದ್ದೆಯಲ್ಲಿ 13 ವರ್ಷ ಪೂರೈಸಿದ್ದರು. ಆನಂತರ, ಮುಖ್ಯಮಂತ್ರಿಯಾಗಿದ್ದೇ ಪ್ರಧಾನಿ ಹುದ್ದೆಗೇರಿದ್ದು ಈಗ ಏಳು ವರ್ಷ ಪೂರೈಸಿದ್ದಾರೆ. ಇದೇ ಕಾರಣಕ್ಕೆ, ಮೋದಿ ತಮ್ಮ ಭಾಷಣದ ನಡುವೆ 21ನೇ ವರ್ಷವನ್ನು ನಾನು ಹೃಷಿಕೇಶದಿಂದ ಆರಂಭಿಸುತ್ತೇನೆ ಎಂದು ಹೇಳಿದ್ದು ವಿಶೇಷ.
Prime Minister Narendra Modi completed 20 years of public life and on Thursday he said that he had never thought that he will be the Prime Minister one day. PM Modi was speaking at AIIMS Rishikesh where he dedicated 35 Pressure Swing Adsorption (PSA) oxygen plants that were installed under the PM-CARES fund across 35 States and Union Territories.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:33 pm
HK News Desk
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
09-05-25 06:22 pm
Mangalore Correspondent
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
Satish Kumapla, Mangalore, U T Khader: ಮೂಡಾ ಅ...
08-05-25 09:06 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm