ಬ್ರೇಕಿಂಗ್ ನ್ಯೂಸ್
11-10-21 11:43 am Headline Karnataka News Network ದೇಶ - ವಿದೇಶ
ಮಾಸ್ಕೋ, ಅಕ್ಟೋಬರ್ 11: ರಷ್ಯಾದ ವಿಮಾನವೊಂದು ಪತನವಾಗಿದ್ದು ಈ ವಿಮಾನ ಅಪಘಾತದಿಂದ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಸುಮಾರು 23 ಮಂದಿ ಈ ರಷ್ಯಾದ ವಿಮಾನದಲ್ಲಿ ಇದ್ದರು ಎಂದು ಹೇಳಲಾಗಿದೆ. ಈ ಪೈಕಿ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನು ಏಳು ಮಂದಿಗೆ ಗಾಯವಾಗಿದೆ ಎಂದು ಕೂಡಾ ವರದಿಯು ಹೇಳಿದೆ.
ರಷ್ಯಾದ ಮೆನ್ಜೆಲಿನ್ಸ್ಕ್ ನಗರದ ಟಾಟರ್ಜ್ತಾನ್ ಎಂಬಲ್ಲಿ 23 ಮಂದಿ ಪ್ರಯಾಣಿಕರು ಇದ್ದ ಲೆಟ್ ಎಲ್-410 ಟರ್ಬೋಲೆಟ್ ವಿಮಾನ ಪತನಗೊಂಡಿದೆ ಎಂದು ತಿಳಿದು ಬಂದಿದೆ. ಇಂದು ಮುಂಜಾನೆ ಸುಮಾರು 9:11 (ಮಾಸ್ಕೋ ಸಮಯ) ಕ್ಕೆ ಈ ಲೆಟ್ ಎಲ್-410 ಟರ್ಬೋಲೆಟ್ ವಿಮಾನ ಪತನಗೊಂಡಿದೆ ಎಂದು ವರದಿಯು ಮಾಹಿತಿ ನೀಡಿದೆ.

ರಷ್ಯಾದ ಲೆಟ್ ಎಲ್-410 ಟರ್ಬೋಲೆಟ್ ವಿಮಾನದಲ್ಲಿದ್ದ 23 ಮಂದಿ ಪ್ರಯಾಣಿಕರ ಪೈಕಿ 21 ಮಂದಿ ಡೈವರ್ಗಳಾಗಿದ್ದರು ಎಂದು ಹೇಳಲಾಗಿದೆ. ಈ ವಿಮಾನ ದುರಂತದಲ್ಲಿ ಏಳು ಮಂದಿಗೆ ಗಾಯವಾಗಿದೆ.
ಈ ವಿಮಾನ ಪತನಗೊಂಡ ಚಿತ್ರವನ್ನು ರಷ್ಯಾದ ತುರ್ತು ಪರಿಸ್ಥಿತಿ ಸಚಿವಾಲಯವು ಬಿಡುಗಡೆ ಮಾಡಿದ್ದು, ಬದುಕುಳಿದ ಏಳು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವಿವರಿಸಿದೆ.

"ರಷ್ಯಾದ ಮೆನ್ಜೆಲಿನ್ಸ್ಕ್ ನಗರದ ಟಾಟರ್ಜ್ತಾನ್ ಎಂಬಲ್ಲಿ ಪತನಗೊಂಡ ಈ ರಷ್ಯಾದ ವಿಮಾನವು ಸಂಪೂರ್ಣವಾಗಿ ಜಖಂ ಆಗಿದೆ. ಬದುಕುಳಿದ ಏಳು ಮಂದಿಯನ್ನು ಕೂಡಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಪೈಕಿ ಓರ್ವ ಗಾಯಾಳುವಿನ ಸ್ಥಿತಿಯು ಚಿಂತಾಜನಕವಾಗಿದೆ," ಎಂದು ರಷ್ಯಾ ಆರೋಗ್ಯ ಸಚಿವಾಲಯ ತಿಳಿಸಿದೆ.
ಇನ್ನು ಈ ಬಗ್ಗೆ ಅಲ್ಲಿನ ಸ್ಥಳೀಯ ಮಾಧ್ಯಮಗಳು ಮಾಡಿದ ವರದಿಗಳ ಪ್ರಕಾರ ಈ ವಿಡಿಯೋವು ರಷ್ಯಾದ ಸೇನೆ, ನಾಗರಿಕ ಯಾನ ಮತ್ತು ನೌಕಾಪಡೆಗೆ ಸಹಾಯ ಮಾಡಲು ಇರುವ ಒಂದು ಸ್ವಯಂ ಸೇವಕ ಸಂಸ್ಥೆಗೆ ಸೇರಿದ್ದು ಆಗಿದೆ. ಹಾಗೆಯೇ ಇದು ಕ್ರೀಡಾ ಮತ್ತು ರಕ್ಷಣಾ ಸಂಸ್ಥೆಯಾಗಿದೆ ಎಂದು ಕೂಡಾ ರಷ್ಯಾದ ಸ್ಥಳೀಯ ಮಾಧ್ಯಮಗಳು ವಿವರಿಸಿದೆ.
ಈ ವರ್ಷದ ಆರಂಭದಲ್ಲಿ ರಷ್ಯಾದಲ್ಲಿ ಎರಡು ಎಲ್-410 ವಿಮಾನಗಳು ಪತನವಾಗಿದೆ.
Sixteen people were killed after an aircraft carrying parachutists crashed in central Russia on Sunday, the emergencies ministry said. The L-410 plane carrying 22 people crashed around 9:23 a.m. local time (0623 GMT) during a flight over the republic of Tatarstan, the ministry said on its Telegram channel.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm