ಬ್ರೇಕಿಂಗ್ ನ್ಯೂಸ್
11-09-20 10:41 am Headline Karnataka News Network ದೇಶ - ವಿದೇಶ
ವಾಷಿಂಗ್ಟನ್ ಸೆಪ್ಟೆಂಬರ್ 11: ಒಂದು ಸಾವಿರಕ್ಕೂ ಹೆಚ್ಚು ಚೀನಿ ರಾಷ್ಟ್ರೀಯರ ವೀಸಾಗಳನ್ನು ಅಮೆರಿಕ ರದ್ದು ಪಡಿಸಿದೆ. ಭದ್ರತಾ ಕಾರಣಗಳನ್ನು ಮುಂದೊಡ್ಡಿ ಈ ಕ್ರಮ ಕೈಗೊಂಡಿದೆ. ಈಗಾಗಲೇ ಹಳಸಿರುವ ಅಮೆರಿಕ-ಚೀನಾ ಬಾಂಧವ್ಯ ಇದರಿಂದ ಮತ್ತಷ್ಟು ಹದಗೆಡುವ ಸಂಭವವಿದೆ.
ಭದ್ರತಾ ಅಪಾಯವೊಡ್ಡುವ ಶಂಕೆಯಿರುವ ಚೀನಿ ವಿದ್ಯಾರ್ಥಿಗಳು ಮತ್ತು ಸಂಶೋಧಕರು ಅಮೆರಿಕ ಪ್ರವೇಶಿಸುವ ಮೇಲೆ ನಿರ್ಬಂಧ ಹೇರಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇ 29ರಂದು ಆದೇಶ ಹೊರಡಿಸಿದ್ದರು. ಅದಕ್ಕನುಗುಣವಾಗಿ ವೀಸಾ ರದ್ದು ಪಡಿಸಲಾಗಿದೆ ಎಂದು ಗೃಹ ಇಲಾಖೆಯ ವಕ್ತಾರೆ ಬುಧವಾರ ತಿಳಿಸಿದ್ದಾರೆ.
ಚೀನಾದ ಮಿಲಿಟರಿಯೊಂದಿಗೆ ಸಂಬಧವಿರುವ ಚೀನಿ ಪದವಿ ವಿದ್ಯಾರ್ಥಿಗಳು ಹಾಗೂ ಸಂಶೋಧಕರ ವೀಸಾಗಳನ್ನು ತಡೆ ಹಿಡಿಯುವುದಾಗಿ ಅಮೆರಿಕದ ಆಂತರಿಕ ಭದ್ರತಾ ಇಲಾಖೆಯ ಪ್ರಭಾರ ಮುಖ್ಯಸ್ಥ ಚಾಡ್ ವೂ ಇದಕ್ಕೂ ಮುನ್ನ ಹೇಳಿದ್ದರು. ಸೂಕ್ಷ್ಮ ಸಂಶೋಧನಾ ವಿಚಾರಗಳನ್ನು ಕದ್ದು ದುರುಪಯೋಗ ಮಾಡುವುದನ್ನು ತಡೆಯಲು ಈ ಕ್ರಮ ಎಂದವರು ವಿವರಿಸಿದ್ದರು.
ಕರೊನಾ ವೈರಸ್ ಸಂಶೋಧನೆ ಸಹಿತ ಚೀನಾ ಹಲವು ಕಾನೂನು ಬಾಹಿರ ವ್ಯಾವಹಾರಿಕ ಚಟುವಟಿಕೆ ನಡೆಸುತ್ತಿದೆ ಹಾಗೂ ಕೈಗಾರಿಕಾ ಅಂಶಗಳಿಗೆ ಬೇಹುಗಾರಿಕೆ ನಡೆಸುತ್ತಿದೆ ಎಂದು ಅಮೆರಿಕದ ಆರೋಪವನ್ನು ಪುನರುಚ್ಚರಿಸಿದ್ದಾರೆ. ಅಮೆರಿಕದ ಶೈಕ್ಷಣಿಕ ವಿಚಾರಗಳನ್ನು ಶೋಷಿಸಲು ವಿದ್ಯಾರ್ಥಿ ವೀಸಾಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದಿದ್ದರು. ಗುಲಾಮಿ ಶ್ರಮದಿಂದ ತಯಾರಾಗುವ ಉತ್ಪನ್ನಗಳು ಅಮೆರಿಕದ ಮಾರುಕಟ್ಟೆ ಪ್ರವೇಶಿಸುವುದನ್ನು ತಡೆಯುವ ಉದ್ದೇಶವೂ ಇದೆ ಎನ್ನುವ ಮೂಲಕ ಚೀನಾದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಪರೋಕ್ಷವಾಗಿ ಹೇಳಿದ್ದರು. ‘ಪ್ರತಿಯೊಬ್ಬ ಮನುಷ್ಯರ ಅಂತರ್ಗತ ಮಾನವ ಘನತೆಯನ್ನು ಚೀನಾ ಗೌರವಿಸಬೇಕು’ ಎಂದೂ ತಾಕೀತು ಮಾಡಿದ್ದಾರೆ. ಚೀನಾದ ಕ್ಸಿನ್ಜಿಯಾಂಗ್ ಪ್ರದೇಶದಲ್ಲಿ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದವರ ಮೇಲೆ ದಬ್ಬಾಳಿಕೆ ನಡೆಯುತ್ತಿರುವುದನ್ನು ಉಲ್ಲೇಖಿಸಿ ಅವರು ಈ ಟಿಪ್ಪಣಿ ಮಾಡಿದ್ದಾರೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am