ಬ್ರೇಕಿಂಗ್ ನ್ಯೂಸ್
11-09-20 10:41 am Headline Karnataka News Network ದೇಶ - ವಿದೇಶ
ವಾಷಿಂಗ್ಟನ್ ಸೆಪ್ಟೆಂಬರ್ 11: ಒಂದು ಸಾವಿರಕ್ಕೂ ಹೆಚ್ಚು ಚೀನಿ ರಾಷ್ಟ್ರೀಯರ ವೀಸಾಗಳನ್ನು ಅಮೆರಿಕ ರದ್ದು ಪಡಿಸಿದೆ. ಭದ್ರತಾ ಕಾರಣಗಳನ್ನು ಮುಂದೊಡ್ಡಿ ಈ ಕ್ರಮ ಕೈಗೊಂಡಿದೆ. ಈಗಾಗಲೇ ಹಳಸಿರುವ ಅಮೆರಿಕ-ಚೀನಾ ಬಾಂಧವ್ಯ ಇದರಿಂದ ಮತ್ತಷ್ಟು ಹದಗೆಡುವ ಸಂಭವವಿದೆ.
ಭದ್ರತಾ ಅಪಾಯವೊಡ್ಡುವ ಶಂಕೆಯಿರುವ ಚೀನಿ ವಿದ್ಯಾರ್ಥಿಗಳು ಮತ್ತು ಸಂಶೋಧಕರು ಅಮೆರಿಕ ಪ್ರವೇಶಿಸುವ ಮೇಲೆ ನಿರ್ಬಂಧ ಹೇರಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇ 29ರಂದು ಆದೇಶ ಹೊರಡಿಸಿದ್ದರು. ಅದಕ್ಕನುಗುಣವಾಗಿ ವೀಸಾ ರದ್ದು ಪಡಿಸಲಾಗಿದೆ ಎಂದು ಗೃಹ ಇಲಾಖೆಯ ವಕ್ತಾರೆ ಬುಧವಾರ ತಿಳಿಸಿದ್ದಾರೆ.
ಚೀನಾದ ಮಿಲಿಟರಿಯೊಂದಿಗೆ ಸಂಬಧವಿರುವ ಚೀನಿ ಪದವಿ ವಿದ್ಯಾರ್ಥಿಗಳು ಹಾಗೂ ಸಂಶೋಧಕರ ವೀಸಾಗಳನ್ನು ತಡೆ ಹಿಡಿಯುವುದಾಗಿ ಅಮೆರಿಕದ ಆಂತರಿಕ ಭದ್ರತಾ ಇಲಾಖೆಯ ಪ್ರಭಾರ ಮುಖ್ಯಸ್ಥ ಚಾಡ್ ವೂ ಇದಕ್ಕೂ ಮುನ್ನ ಹೇಳಿದ್ದರು. ಸೂಕ್ಷ್ಮ ಸಂಶೋಧನಾ ವಿಚಾರಗಳನ್ನು ಕದ್ದು ದುರುಪಯೋಗ ಮಾಡುವುದನ್ನು ತಡೆಯಲು ಈ ಕ್ರಮ ಎಂದವರು ವಿವರಿಸಿದ್ದರು.
ಕರೊನಾ ವೈರಸ್ ಸಂಶೋಧನೆ ಸಹಿತ ಚೀನಾ ಹಲವು ಕಾನೂನು ಬಾಹಿರ ವ್ಯಾವಹಾರಿಕ ಚಟುವಟಿಕೆ ನಡೆಸುತ್ತಿದೆ ಹಾಗೂ ಕೈಗಾರಿಕಾ ಅಂಶಗಳಿಗೆ ಬೇಹುಗಾರಿಕೆ ನಡೆಸುತ್ತಿದೆ ಎಂದು ಅಮೆರಿಕದ ಆರೋಪವನ್ನು ಪುನರುಚ್ಚರಿಸಿದ್ದಾರೆ. ಅಮೆರಿಕದ ಶೈಕ್ಷಣಿಕ ವಿಚಾರಗಳನ್ನು ಶೋಷಿಸಲು ವಿದ್ಯಾರ್ಥಿ ವೀಸಾಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದಿದ್ದರು. ಗುಲಾಮಿ ಶ್ರಮದಿಂದ ತಯಾರಾಗುವ ಉತ್ಪನ್ನಗಳು ಅಮೆರಿಕದ ಮಾರುಕಟ್ಟೆ ಪ್ರವೇಶಿಸುವುದನ್ನು ತಡೆಯುವ ಉದ್ದೇಶವೂ ಇದೆ ಎನ್ನುವ ಮೂಲಕ ಚೀನಾದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಪರೋಕ್ಷವಾಗಿ ಹೇಳಿದ್ದರು. ‘ಪ್ರತಿಯೊಬ್ಬ ಮನುಷ್ಯರ ಅಂತರ್ಗತ ಮಾನವ ಘನತೆಯನ್ನು ಚೀನಾ ಗೌರವಿಸಬೇಕು’ ಎಂದೂ ತಾಕೀತು ಮಾಡಿದ್ದಾರೆ. ಚೀನಾದ ಕ್ಸಿನ್ಜಿಯಾಂಗ್ ಪ್ರದೇಶದಲ್ಲಿ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದವರ ಮೇಲೆ ದಬ್ಬಾಳಿಕೆ ನಡೆಯುತ್ತಿರುವುದನ್ನು ಉಲ್ಲೇಖಿಸಿ ಅವರು ಈ ಟಿಪ್ಪಣಿ ಮಾಡಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm