ಬ್ರೇಕಿಂಗ್ ನ್ಯೂಸ್
11-09-20 11:35 am Headline Karnataka News Network ದೇಶ - ವಿದೇಶ
ಮುಂಬೈ, ಸೆಪ್ಟೆಂಬರ್ 11: ತನ್ನ ಮನೆಯನ್ನು ಕೆಡವಿದ ಸಿಟ್ಟಿನಲ್ಲಿರುವ ನಟಿ ಕಂಗನಾ ರನೌತ್ ಮತ್ತೆ ಶಿವಸೇನೆಯ ವಿರುದ್ಧ ಹರಿಹಾಯ್ದಿದ್ದಾರೆ. ಉದ್ಧವ್ ಠಾಕ್ರೆ ಹೆಸರೆತ್ತದೆ ಟ್ವೀಟ್ ವಾರ್ ನಡೆಸಿರುವ ಕಂಗನಾ, ಅಧಿಕಾರಕ್ಕಾಗಿ ತಮ್ಮ ಸಿದ್ಧಾಂತವನ್ನು ಮಾರಿಕೊಂಡಿರುವ ಶಿವಸೇನೆ ಈಗ ಸೋನಿಯಾ ಸೇನೆ ಆಗಿಹೋಗಿದೆ ಎಂದು ಮೂದಲಿಸಿದ್ದಾರೆ.
ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳಬೇಕಿತ್ತು. ಆದರೆ ಚುನಾವಣೆಯಲ್ಲಿ ಸೋತ ಶಿವಸೇನೆ ಅಧಿಕಾರಕ್ಕಾಗಿ ನಾಚಿಕೆ ಇಲ್ಲದೆ ಹಿಂಬಾಗಿಲ ಮೂಲಕ ಮೈತ್ರಿ ಸರಕಾರ ಮಾಡಿಕೊಂಡಿದೆ. ಆಮೂಲಕ ಶಿವಸೇನೆ ಸೋನಿಯಾ ಸೇನೆ ಆಗಿ ಪರಿವರ್ತನೆ ಆಗುವಂತಾಗಿದೆ ಎಂದು ಹೇಳಿದ್ದಾರೆ. ಬಾಳಾ ಸಾಹೇಬ್ ಠಾಕ್ರೆ ಒಂದು ಸಿದ್ಧಾಂತ ಇಟ್ಟುಕೊಂಡು ಶಿವಸೇನೆಯನ್ನು ಕಟ್ಟಿ ಬೆಳೆಸಿದ್ದರು. ಆದರೆ ಇಂದಿನವರು ಆ ಸಿದ್ಧಾಂತವನ್ನೇ ಮಾರಿಕೊಂಡಿದ್ದಾರೆ. ನಾನು ಇಲ್ಲದಿರುವ ವೇಳೆಯಲ್ಲಿ ನನ್ನ ಮನೆಯನ್ನು ಕೆಡವಿದ ಗೂಂಡಾಗಳನ್ನು ಆಡಳಿತದ ಒಂದು ಅಂಗ ಎನ್ನುವುದಿಲ್ಲ. ಹಾಗೆ ಹೇಳಿ ಸಂವಿಧಾನವನ್ನು ಅಪಮಾನಿಸಲು ಬಯಸುವುದಿಲ್ಲ ಎಂದಿದ್ದಾರೆ.

"ನಿಮ್ಮ ತಂದೆಯ ಒಳ್ಳೆತನದಿಂದ ನೀವು ಸಂಪತ್ತು ಪಡೆದಿರಬಹುದು. ಆದರೆ ನೀವು ಗೌರವ ಬೇಕಿದ್ದರೆ ಅದನ್ನು ಸ್ವತಃ ಗಳಿಸಬೇಕು. ನನ್ನ ಧ್ವನಿಯನ್ನು ನೀವು ಚಿವುಟಬಹುದು. ಆದರೆ ನನ್ನ ಧ್ವನಿ ಸಾವಿರ, ಲಕ್ಷಗಳ ಸಂಖ್ಯೆಯಲ್ಲಿ ಪರಿವರ್ತನೆ ಆಗಿ ನಿಮ್ಮತ್ತ ತೂರಿ ಬರಲಿದೆ. ಹಾಗಾದಾಗ, ನೀವು ಎಷ್ಟು ಮಂದಿಯ ಧ್ವನಿಯನ್ನು ಹತ್ತಿಕ್ಕಬಹುದು. ಸತ್ಯ ಮುಚ್ಚಿಟ್ಟು ಎಷ್ಟು ದಿನ ಓಡಾಡಬಹುದು. ನಿಮ್ಮ ಆಡಳಿತ ಸರ್ವಾಧಿಕಾರಿಯ ರಾಜಪ್ರಭುತ್ವ ಅಷ್ಟೇ ವಿನಾ ಬೇರೇನೂ ಅಲ್ಲ " ಎಂದು ಕಂಗನಾ ಕಟು ಮಾತುಗಳಿಂದ ತಿವಿದಿದ್ದಾರೆ.
ಶಿವಸೇನೆ ಆಗಲೀ, ಮಹಾರಾಷ್ಟ್ರ ಸರಕಾರದಿಂದ ಆಗಲೀ ಕಂಗನಾ ಟ್ವೀಟ್ ಬಗ್ಗೆ ಉತ್ತರ ನೀಡಲು ಮುಂದಾಗಿಲ್ಲ. ಶಿವಸೇನೆಯ ಯಾರು ಕೂಡ ತುಟಿ ಬಿಚ್ಚಬಾರದು ಎಂದು ಹುಕುಂ ಜಾರಿ ಮಾಡಲಾಗಿದೆ. ಅಗತ್ಯ ಬಿದ್ದರೆ ಪಕ್ಷದ ವಕ್ತಾರ ಸಂಜಯ್ ರಾವತ್ ಮಾತಾಡುತ್ತಾರೆ ಎನ್ನುವ ಸೂಚನೆ ನೀಡಲಾಗಿದೆ. ಆದರೆ ಚಿತ್ರನಟಿಯ ತಿವಿಯುವ ಬಾಣಗಳಿಗೆ ಉತ್ತರ ನೀಡಲು ರಾವುತ್ ಕೂಡ ಮುಂದೆ ಬಂದಿಲ್ಲ.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 02:58 pm
HK News Staffer
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm