ಬ್ರೇಕಿಂಗ್ ನ್ಯೂಸ್
21-10-21 02:58 pm Headline Karnataka News Network ದೇಶ - ವಿದೇಶ
ಮುಂಬೈ, ಅ 21: ಆರ್ಯನ್ ಖಾನ್ ಮಾದಕ ದ್ರವ್ಯ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ)ನ ತನಿಖಾ ಅಧಿಕಾರಿಗಳ ತಂಡ ಮುಂಬೈನಲ್ಲಿ ಬಾಲಿವುಡ್ ನಟ, ನಟಿಯರ ಮನೆಗಳ ಮೇಲೆ ಎನ್ಸಿಬಿ ದಿಢೀರ್ ದಾಳಿ ನಡೆಸಿದೆ. ಬಾಲಿವುಡ್ ನಟ ಶಾರುಖ್ ಖಾನ್ ಮನೆ ಮನ್ನತ್ ಮೇಲೆ ದಾಳಿ ನಡೆಸಿದೆ.

ಮುಂಬೈನ ಬಾಂದ್ರಾದಲ್ಲಿರುವ ನಟ ಶಾರುಖ್ ಖಾನ್ ನಿವಾಸ 'ಮನ್ನತ್'ಗೆ ತೆರಳಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಆರ್ಯನ್ ಖಾನ್ರನ್ನು ಬಂಧಿಸಲಾಗಿರುವ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣಕ್ಕೆ ಅಥವಾ ಸಂಬಂಧಪಟ್ಟಂತೆ ಎನ್ಸಿಬಿ ಅಧಿಕಾರಿಗಳು ತನಿಖೆಗಾಗಿ ಶೋಧ ನಡೆಸಲು ಶಾರುಖ್ ನಿವಾಸಕ್ಕೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಎನ್ಸಿಬಿಯ ಮತ್ತೊಂದು ತಂಡ ಬಾಲಿವುಡ್ ನಟಿ ಅನನ್ಯಾ ಪಾಂಡೆ ಮನೆಯಲ್ಲಿ ಶೋಧ ಕಾರ್ಯ ಆರಂಭಿಸಿದೆ. ಇದೇ ವೇಳೆ ಎನ್ಸಿಬಿ ಅನನ್ಯಾ ಪಾಂಡೆಗೆ ಸಮನ್ಸ್ ಜಾರಿ ಮಾಡಿದೆ.

ಇಂದು ಮುಂಜಾನೆ ನಟ ಶಾರುಖ್ ಖಾನ್ ಆರ್ಥರ್ ರೋಡ್ ಜೈಲಿಗೆ ತೆರಳಿ ಪುತ್ರ ಆರ್ಯನ್ರನ್ನು ಭೇಟಿಯಾಗಿದ್ದರು. ಇದಾದ ಕೆಲವು ಸಮಯದ ನಂತರ ಎನ್ಸಿಬಿ ಶೋಧಕ್ಕಾಗಿ ದಾಳಿ ನಡೆಸಿದೆ. ಪ್ರಸ್ತುತ ಆರ್ಯನ್ ಖಾನ್ ನ್ಯಾಯಾಂಗ ಬಂಧನದಲ್ಲಿದ್ದು, ಹೈಕೋರ್ಟ್ನಲ್ಲಿ ಅಕ್ಟೋಬರ್ 26ರಂದು ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.

ಸಹ ಆರೋಪಿ ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಜೊತೆಗೆ ಬಾಲಿವುಡ್ ಸ್ಟಾರ್ ಪುತ್ರನಿಗೆ ಜಾಮೀನು ನೀಡಲು ವಿಶೇಷ ನ್ಯಾಯಾಲಯ ಬುಧವಾರ ನಿರಾಕರಿಸಿದೆ. ಆರ್ಯನ್ ಖಾನ್ ಇನ್ನೂ ಐದು ದಿನಗಳ ಕಾಲ ಕಸ್ಟಡಿಯಲ್ಲಿರಬೇಕಾಗಿದೆ.
Teams of Narcotics Control Bureau (NCB) are paying a 'visit' to the residences of Bollywood megastar Shah Rukh Khan in Bandra West, actress Ananya Pande in Khar west, and raided a location in Andheri on Thursday as part of the ongoing probe into the October 2 luxury cruiser rave party.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm