ಬ್ರೇಕಿಂಗ್ ನ್ಯೂಸ್
23-10-21 03:59 pm Headline Karnataka News Network ದೇಶ - ವಿದೇಶ
ಶ್ರೀನಗರ, ಅ.22: ಒಂದೆಡೆ ಸಾಮಾನ್ಯ ಜನರನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸುತ್ತಿರುವ ಮಧ್ಯೆಯೇ ಕೇಂದ್ರ ಗೃಹ ಸಚಿವ ಅಮಿತ್ ಷಾ ಅಲ್ಲಿನ ವಸ್ತುಸ್ಥಿತಿಯನ್ನು ತಿಳಿದುಕೊಳ್ಳಲು ಜಮ್ಮು ಕಾಶ್ಮೀರಕ್ಕೆ ಆಗಮಿಸಿದ್ದಾರೆ. ಮೂರು ದಿನಗಳ ಭೇಟಿಗಾಗಿ ಆಗಮಿಸಿರುವ ಸಚಿವ ಅಮಿತ್ ಷಾ, ಭದ್ರತೆಯ ವಿಚಾರದಲ್ಲಿ ವಿವಿಧ ಇಲಾಖೆಗಳ ಪ್ರಮುಖರ ಜೊತೆ ಸಭೆ ನಡೆಸಿದ್ದಾರೆ.
ಜಮ್ಮು ಕಾಶ್ಮೀರದ 370ನೇ ವಿಧಿಯನ್ನು ರದ್ದುಗೊಳಿಸಿ ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಿದ ಬಳಿಕ ಮೊದಲ ಬಾರಿಗೆ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವ ಗೃಹ ಸಚಿವ ಅಮಿತ್ ಷಾ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇದರ ಜೊತೆಗೆ, ಅಲ್ಲಿನ ಭದ್ರತೆ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಗುಪ್ತಚರ ವಿಭಾಗ, ಸಿಆರ್ ಪಿಎಫ್ ವಿಭಾಗ, ಗಡಿಭದ್ರತಾ ಪಡೆ ಮತ್ತು ಜಮ್ಮು ಕಾಶ್ಮೀರ ಪೊಲೀಸ್ ಮುಖ್ಯಸ್ಥರ ಜೊತೆ ಅಮಿತ್ ಷಾ ಶ್ರೀನಗರದಲ್ಲಿಯೇ ಮಧ್ಯಾಹ್ನ ಸಭೆ ನಡೆಸಿದ್ದಾರೆ.
ಇತ್ತೀಚೆಗೆ ಉಗ್ರರ ಗುಂಡೇಟಿಗೆ ಹತರಾಗಿರುವ ಮಖಾನ್ ಲಾಲ್ ಬಿಂದ್ರೂ, ಸುಪೀಂದರ್ ಕೌರ್ ಮತ್ತು 25 ವರ್ಷದ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಅರ್ಷದ್ ಅಹ್ಮದ್ ಮೀರ್ ಅವರ ಕುಟುಂಬಸ್ಥರನ್ನು ಗೃಹ ಸಚಿವರು ಭೇಟಿಯಾಗಲಿದ್ದಾರೆ. ಇದೇ ವೇಳೆ, ಶ್ರೀನಗರದಿಂದ ಶಾರ್ಜಾಗೆ ಮೊದಲ ಬಾರಿಗೆ ಆರಂಭಗೊಳ್ಳುತ್ತಿರುವ ನೇರ ವಿಮಾನ ಸಂಚಾರ ಕಾರ್ಯಕ್ಕೆ ಅಮಿತ್ ಷಾ ವಿಡಿಯೋ ಕಾನ್ಫೆರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ. ಅಮಿತ್ ಷಾ ಭೇಟಿ ಹಿನ್ನೆಲೆಯಲ್ಲಿ ಕಣಿವೆ ರಾಜ್ಯದಾದ್ಯಂತ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜನೆ ಮಾಡಲಾಗಿದೆ.
ಅ.24ರಂದು ಅಮಿತ್ ಷಾ ಜಮ್ಮುವಿಗೆ ಭೇಟಿ ನೀಡಲಿದ್ದು, ಅಲ್ಲಿನ ಭಗ್ವತಿ ನಗರದ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಪುಲ್ವಾಮಾ ಜಿಲ್ಲೆಯ ಸಿಆರ್ ಪಿಎಫ್ ಗ್ರೂಪ್ ಸೆಂಟರಿಗೆ ಭೇಟಿ ನೀಡಿ, ಅಲ್ಲಿ ಪುಲ್ವಾಮಾ ದಾಳಿಯಿಂದ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಲಿದ್ದಾರೆ. 25ರಂದು ಶ್ರೀನಗರದ ಶೇರ್ ಇ ಕಾಶ್ಮೀರಿ ಅಂತಾರಾಷ್ಟ್ರೀಯ ಕನ್ವೆನ್ಶನ್ ಸೆಂಟರಿನಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿ ವಿವಿಧ ನಾಗರಿಕ ಪ್ರತಿನಿಧಿಗಳ ನಿಯೋಗದ ಜೊತೆಗೆ ಮಾತುಕತೆ ನಡೆಸಲಿದ್ದಾರೆ.
Prolonged encounters with terrorists, the growing threat of radicalisation, the killing of civilians, and an increase in cross-border infiltration - these were the key issues discussed at a high-level meeting chaired by Home Minister Amit Shah in Jammu and Kashmir's Srinagar today.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 02:58 pm
HK News Staffer
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm