ಬ್ರೇಕಿಂಗ್ ನ್ಯೂಸ್
26-10-21 01:06 pm Headline Karnataka News Network ದೇಶ - ವಿದೇಶ
ಲಾಗೋಸ್, ಅ 26: ಉತ್ತರ ನೈಜೀರಿಯಾದ ಮಸೀದಿಯೊಂದರ ಮೇಲೆ ಮುಸುಕುಧಾರಿಗಳು ದಾಳಿ ನಡೆಸಿದ್ದು, 18 ಮಂದಿ ಮೃತಪಟ್ಟಿದ್ದಾರೆ.
ಮುಂಜಾನೆ ಪ್ರಾರ್ಥನಾ ಸಮಯದಲ್ಲಿ ಉತ್ತರ ನೈಜೀರಿಯಾದ ಮಸೀದಿಯೊಂದರ ಮೇಲೆ ದಾಳಿ ನಡೆಸಿರುವ ಬಂದೂಕುಧಾರಿಗಳು ರಕ್ತಪಾತ ನಡೆಸಿದ್ದಾರೆ.
ಇತ್ತೀಚೆಗೆ ನೈಜೀರಿಯಾದ ವಾಯುವ್ಯ ರಾಜ್ಯಗಳಲ್ಲಿ ಹಿಂಸಾಚಾರ ಹೆಚ್ಚಾಗುತ್ತಿದೆ. ರಾಜಧಾನಿಯಿಂದ ಸುಮಾರು 270 ಕಿಲೋ ಮೀಟರ್ ದೂರದಲ್ಲಿರುವ ಮಜಕುಕಾ ಪ್ರದೇಶದಲ್ಲಿ ಭದ್ರತಾ ವ್ಯವಸ್ಥೆ ಕಡಿಮೆಯಿದೆ. ಅಲ್ಲದೇ, ಘಟನಾ ಸ್ಥಳಕ್ಕೆ ತಲುಪಲು ಉತ್ತಮವಾದ ರಸ್ತೆ ಮಾರ್ಗವೂ ಇಲ್ಲ. ಈ ಹಿನ್ನೆಲೆ ಸಂಚು ರೂಪಿಸಿ ಬಂದೂಕುಧಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ದೊರೆತಿದೆ.
ಕಳೆದ ವಾರವಷ್ಟೇ ವಾಯುವ್ಯ ಸುಕೊಟೊ ರಾಜ್ಯದಲ್ಲಿ ದುಷ್ಕರ್ಮಿಗಳು ದಾಳಿ ನಡೆಸಿ, ಕನಿಷ್ಠ 40 ಕ್ಕೂ ಹೆಚ್ಚು ಜನರನ್ನು ಕೊಂದಿದ್ದರು. ಸೂಕ್ತ ಭದ್ರತಾ ವ್ಯವಸ್ಥೆ ಇಲ್ಲದಿರುವ ಪ್ರದೇಶಗಳೇ ದಾಳಿಕೋರರಿಗೆ ಅಡಗುತಾಣಗಳಾಗಿವೆ ಎಂದು ಹೇಳಲಾಗುತ್ತಿದೆ.
ಕಳೆದ ಒಂದು ವಾರದ ಹಿಂದಷ್ಟೇ ಬೈಕ್ಗಳಲ್ಲಿ ಬಂದ ಬಂಡುಕೋರರು ಗುಂಡು ಹಾರಿಸಿ ಸುಮಾರು 43 ಮಂದಿಯನ್ನು ಕೊಂದಿರುವ ಘಟನೆ ನೈಜೀರಿಯಾದ ವಾಯವ್ಯ ರಾಜ್ಯವಾದ ಸೊಕೊಟೊದಲ್ಲಿ ನಡೆದಿತ್ತು.

ಗೊರೊನ್ವೋ ಗ್ರಾಮದಲ್ಲಿ ಭಾನುವಾರ ಬಂಡುಕೋರರು ನಡೆಸಿದ ದಾಳಿಯಲ್ಲಿ ಸುಮಾರು 43 ಮಂದಿ ಮೃತಪಟ್ಟಿರುವುದು ದೃಢವಾಗಿದೆ ಎಂದು ಸೊಕೊಟೊ ಸರ್ಕಾರದ ವಕ್ತಾರ ಮೊಹಮ್ಮದ್ ಬೆಲ್ಲೋ ಹೇಳಿದ್ದಾರೆ ಎಂದು ಏಜೆನ್ಸ್ ಫ್ರಾನ್ಸ್ ಪ್ರೆಸ್ಸೆ ವರದಿ ಮಾಡಿದ್ದು, ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವುದಾಗಿ ಉಲ್ಲೇಖಿಸಿದೆ.
ಸೋಮವಾರ ಬೆಳಗ್ಗೆ ಈ ಬಗ್ಗೆ ವರದಿ ಮಾಡಿರುವ ಸ್ಥಳೀಯ ಪತ್ರಿಕೆ ಪ್ರೀಮಿಯಮ್ ಟೈಮ್ಸ್, ಗ್ರಾಮದಲ್ಲಿ ಮಾರುಕಟ್ಟೆ ನಡೆಯುತ್ತಿದ್ದ ವೇಳೆ ದಾಳಿ ನಡೆದಿದ್ದು, 30 ಮಂದಿ ಸಾವನ್ನಪ್ಪಿ, 20 ಮಂದಿ ಗಾಯಗೊಂಡಿದ್ದಾರೆ. ಸುಮಾರು 200 ಮಂದಿಯ ಗುಂಪು ಬೈಕ್ಗಳಲ್ಲಿ ಬಂದು ದಾಳಿ ನಡೆಸಿದ್ದಾರೆ ಎಂದು ಮಾಹಿತಿ ನೀಡಿದೆ.
ಇದಕ್ಕೂ ಮೊದಲು ಬೇರೊಂದು ಗ್ರಾಮದ ಮಾರುಕಟ್ಟೆಯ ಮೇಲೆ ದಾಳಿ ನಡೆಸಿದ್ದ ಬಂಡುಕೋರರು, 19 ಮಂದಿಯನ್ನು ಕೊಂದಿದ್ದರು. ಸುಮಾರು ವರ್ಷಗಳಲ್ಲಿ ಈ ರಾಷ್ಟ್ರದಲ್ಲಿ ಹಿಂಸಾಚಾರಗಳು ನಡೆಯುತ್ತಿದ್ದು, ಬೋಕೋ ಹರಾಮ್ ಮುಂತಾದ ಬಂಡುಕೋರರು ಇಲ್ಲಿ ಆಗಾಗ ದಾಳಿ ನಡೆಸುತ್ತಿರುತ್ತವೆ.
At least 18 worshippers were killed by gunmen who attacked a mosque in northern Nigeria during early morning prayers Monday
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
19-04-26 10:41 pm
HK News Staffer
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
19-04-26 10:23 pm
HK News Staffer
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm