ಬ್ರೇಕಿಂಗ್ ನ್ಯೂಸ್
11-09-20 08:56 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 11: ಪ್ರಸಿದ್ಧ ಸಾಮಾಜಿಕ ಕಾರ್ಯಕರ್ತ, ಆರ್ಯ ಸಮಾಜದ ನಾಯಕ ಸ್ವಾಮಿ ಅಗ್ನಿವೇಶ್ (80) ಶುಕ್ರವಾರ ನಿಧನರಾದರು. ಯಕೃತ್ತಿನ ಸಿರೋಸಿಸ್ನಿಂದ ಬಳಲುತ್ತಿದ್ದ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿ ನವದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಲಿವರ್ ಆಂಡ್ ಬಿಲಿಯರಿ ಸೈನ್ಸಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರದಿಂದಲೂ ಅವರು ಬಹುಅಂಗಾಂಗ ವೈಫಲ್ಯದ ಕಾರಣ ವೆಂಟಿಲೇಟರ್ ಸಪೋರ್ಟ್ನಲ್ಲಿದ್ದರು.
ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ಸ್ಥಿತಿ ಸೆ. 11ರಂದು ತೀವ್ರ ಹದಗೆಟ್ಟಿತ್ತು. ಸಂಜೆ 6 ಗಂಟೆಯ ವೇಳೆಗೆ ಹೃದಯಾಘಾತಕ್ಕೆ ಒಳಗಾದರು. ಅವರ ಹೃದಯ ಬಡಿತವನ್ನು ಮರುಸ್ಥಾಪಿಸುವ ಪ್ರಯತ್ನಗಳು ನಡೆದರೂ ಸಂಜೆ 6.30ರ ವೇಳೆಗೆ ಅವರು ಕೊನೆಯುಸಿರೆಳೆದರು. ತಮ್ಮ ನೆಚ್ಚಿನ ನಾಯಕ ನಿಧನದಿಂದ ಶೋಕಿಸುತ್ತಿರುವ ದೇಶದ ಜನತೆಯ ಜತೆಗೆ ಐಎಲ್ಬಿಎಸ್ ಕೂಡ ಸೇರಿಕೊಂಡಿದೆ ಎಂದು ಆಸ್ಪತ್ರೆ ಹೇಳಿಕೆ ತಿಳಿಸಿದೆ.
70ರ ದಶಕದಲ್ಲೇ ಅಗ್ನಿವೇಶ್ ಅವರು ಆರ್ಯ ಸಭಾ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದರು. ಇದು ಆರ್ಯ ಸಮಾಜದ ತತ್ವಗಳನ್ನು ಆಧರಿಸಿದ್ದಾಗಿತ್ತು. ಅಲ್ಲದೆ, ಧರ್ಮಗಳ ನಡುವಿನ ವ್ಯಾಜ್ಯಗಳಿಗೆ ವಕೀಲರಾಗಿಯೂ ಇವರು ಹಾಜರಾಗುತ್ತಿದ್ದರು.
ಸ್ತ್ರೀ ಭ್ರೂಣ ಹತ್ಯೆ ಮತ್ತು ಮಹಿಳೆಯರ ವಿಮೋಚನೆಗೆ ಸಂಬಂಧಿಸಿದ ಅಭಿಯಾನಗಳು ಸೇರಿದಂತೆ ಸಾಮಾಜಿಕ ಹೋರಾಟಗಳಲ್ಲಿ ಕ್ರಿಯಾಶೀಲತೆಯಿಂದ ಭಾಗಿಯಾಗುತ್ತಿದ್ದರು. ಇದರಿಂದಾಗಿಯೇ ಹಲವಾರು ಬೆಂಬಲಿಗರು ಹಾಗೂ ಸಮಾನ ಸಂಖ್ಯೆಯ ವಿರೋಧಿಗಳನ್ನೂ ಇವರು ಸಂಪಾದಿಸಿದ್ದರು. ಇದೇ ಕಾರಣಕ್ಕೆ ಇವರ ಮೇಲೆ ಕೆಲವು ಭಾರಿ ಹಲ್ಲೆಗಳಾದದ್ದೂ ಇದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm