ಬ್ರೇಕಿಂಗ್ ನ್ಯೂಸ್
11-09-20 08:56 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 11: ಪ್ರಸಿದ್ಧ ಸಾಮಾಜಿಕ ಕಾರ್ಯಕರ್ತ, ಆರ್ಯ ಸಮಾಜದ ನಾಯಕ ಸ್ವಾಮಿ ಅಗ್ನಿವೇಶ್ (80) ಶುಕ್ರವಾರ ನಿಧನರಾದರು. ಯಕೃತ್ತಿನ ಸಿರೋಸಿಸ್ನಿಂದ ಬಳಲುತ್ತಿದ್ದ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿ ನವದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಲಿವರ್ ಆಂಡ್ ಬಿಲಿಯರಿ ಸೈನ್ಸಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರದಿಂದಲೂ ಅವರು ಬಹುಅಂಗಾಂಗ ವೈಫಲ್ಯದ ಕಾರಣ ವೆಂಟಿಲೇಟರ್ ಸಪೋರ್ಟ್ನಲ್ಲಿದ್ದರು.
ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ಸ್ಥಿತಿ ಸೆ. 11ರಂದು ತೀವ್ರ ಹದಗೆಟ್ಟಿತ್ತು. ಸಂಜೆ 6 ಗಂಟೆಯ ವೇಳೆಗೆ ಹೃದಯಾಘಾತಕ್ಕೆ ಒಳಗಾದರು. ಅವರ ಹೃದಯ ಬಡಿತವನ್ನು ಮರುಸ್ಥಾಪಿಸುವ ಪ್ರಯತ್ನಗಳು ನಡೆದರೂ ಸಂಜೆ 6.30ರ ವೇಳೆಗೆ ಅವರು ಕೊನೆಯುಸಿರೆಳೆದರು. ತಮ್ಮ ನೆಚ್ಚಿನ ನಾಯಕ ನಿಧನದಿಂದ ಶೋಕಿಸುತ್ತಿರುವ ದೇಶದ ಜನತೆಯ ಜತೆಗೆ ಐಎಲ್ಬಿಎಸ್ ಕೂಡ ಸೇರಿಕೊಂಡಿದೆ ಎಂದು ಆಸ್ಪತ್ರೆ ಹೇಳಿಕೆ ತಿಳಿಸಿದೆ.
70ರ ದಶಕದಲ್ಲೇ ಅಗ್ನಿವೇಶ್ ಅವರು ಆರ್ಯ ಸಭಾ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದರು. ಇದು ಆರ್ಯ ಸಮಾಜದ ತತ್ವಗಳನ್ನು ಆಧರಿಸಿದ್ದಾಗಿತ್ತು. ಅಲ್ಲದೆ, ಧರ್ಮಗಳ ನಡುವಿನ ವ್ಯಾಜ್ಯಗಳಿಗೆ ವಕೀಲರಾಗಿಯೂ ಇವರು ಹಾಜರಾಗುತ್ತಿದ್ದರು.
ಸ್ತ್ರೀ ಭ್ರೂಣ ಹತ್ಯೆ ಮತ್ತು ಮಹಿಳೆಯರ ವಿಮೋಚನೆಗೆ ಸಂಬಂಧಿಸಿದ ಅಭಿಯಾನಗಳು ಸೇರಿದಂತೆ ಸಾಮಾಜಿಕ ಹೋರಾಟಗಳಲ್ಲಿ ಕ್ರಿಯಾಶೀಲತೆಯಿಂದ ಭಾಗಿಯಾಗುತ್ತಿದ್ದರು. ಇದರಿಂದಾಗಿಯೇ ಹಲವಾರು ಬೆಂಬಲಿಗರು ಹಾಗೂ ಸಮಾನ ಸಂಖ್ಯೆಯ ವಿರೋಧಿಗಳನ್ನೂ ಇವರು ಸಂಪಾದಿಸಿದ್ದರು. ಇದೇ ಕಾರಣಕ್ಕೆ ಇವರ ಮೇಲೆ ಕೆಲವು ಭಾರಿ ಹಲ್ಲೆಗಳಾದದ್ದೂ ಇದೆ.
14-01-26 01:34 pm
Bangalore Correspondent
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm