ಬ್ರೇಕಿಂಗ್ ನ್ಯೂಸ್
11-09-20 08:56 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 11: ಪ್ರಸಿದ್ಧ ಸಾಮಾಜಿಕ ಕಾರ್ಯಕರ್ತ, ಆರ್ಯ ಸಮಾಜದ ನಾಯಕ ಸ್ವಾಮಿ ಅಗ್ನಿವೇಶ್ (80) ಶುಕ್ರವಾರ ನಿಧನರಾದರು. ಯಕೃತ್ತಿನ ಸಿರೋಸಿಸ್ನಿಂದ ಬಳಲುತ್ತಿದ್ದ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿ ನವದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಲಿವರ್ ಆಂಡ್ ಬಿಲಿಯರಿ ಸೈನ್ಸಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರದಿಂದಲೂ ಅವರು ಬಹುಅಂಗಾಂಗ ವೈಫಲ್ಯದ ಕಾರಣ ವೆಂಟಿಲೇಟರ್ ಸಪೋರ್ಟ್ನಲ್ಲಿದ್ದರು.
ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ಸ್ಥಿತಿ ಸೆ. 11ರಂದು ತೀವ್ರ ಹದಗೆಟ್ಟಿತ್ತು. ಸಂಜೆ 6 ಗಂಟೆಯ ವೇಳೆಗೆ ಹೃದಯಾಘಾತಕ್ಕೆ ಒಳಗಾದರು. ಅವರ ಹೃದಯ ಬಡಿತವನ್ನು ಮರುಸ್ಥಾಪಿಸುವ ಪ್ರಯತ್ನಗಳು ನಡೆದರೂ ಸಂಜೆ 6.30ರ ವೇಳೆಗೆ ಅವರು ಕೊನೆಯುಸಿರೆಳೆದರು. ತಮ್ಮ ನೆಚ್ಚಿನ ನಾಯಕ ನಿಧನದಿಂದ ಶೋಕಿಸುತ್ತಿರುವ ದೇಶದ ಜನತೆಯ ಜತೆಗೆ ಐಎಲ್ಬಿಎಸ್ ಕೂಡ ಸೇರಿಕೊಂಡಿದೆ ಎಂದು ಆಸ್ಪತ್ರೆ ಹೇಳಿಕೆ ತಿಳಿಸಿದೆ.
70ರ ದಶಕದಲ್ಲೇ ಅಗ್ನಿವೇಶ್ ಅವರು ಆರ್ಯ ಸಭಾ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದರು. ಇದು ಆರ್ಯ ಸಮಾಜದ ತತ್ವಗಳನ್ನು ಆಧರಿಸಿದ್ದಾಗಿತ್ತು. ಅಲ್ಲದೆ, ಧರ್ಮಗಳ ನಡುವಿನ ವ್ಯಾಜ್ಯಗಳಿಗೆ ವಕೀಲರಾಗಿಯೂ ಇವರು ಹಾಜರಾಗುತ್ತಿದ್ದರು.
ಸ್ತ್ರೀ ಭ್ರೂಣ ಹತ್ಯೆ ಮತ್ತು ಮಹಿಳೆಯರ ವಿಮೋಚನೆಗೆ ಸಂಬಂಧಿಸಿದ ಅಭಿಯಾನಗಳು ಸೇರಿದಂತೆ ಸಾಮಾಜಿಕ ಹೋರಾಟಗಳಲ್ಲಿ ಕ್ರಿಯಾಶೀಲತೆಯಿಂದ ಭಾಗಿಯಾಗುತ್ತಿದ್ದರು. ಇದರಿಂದಾಗಿಯೇ ಹಲವಾರು ಬೆಂಬಲಿಗರು ಹಾಗೂ ಸಮಾನ ಸಂಖ್ಯೆಯ ವಿರೋಧಿಗಳನ್ನೂ ಇವರು ಸಂಪಾದಿಸಿದ್ದರು. ಇದೇ ಕಾರಣಕ್ಕೆ ಇವರ ಮೇಲೆ ಕೆಲವು ಭಾರಿ ಹಲ್ಲೆಗಳಾದದ್ದೂ ಇದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm