ಬ್ರೇಕಿಂಗ್ ನ್ಯೂಸ್
11-09-20 11:36 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 11: ಕಾಂಗ್ರೆಸ್ ಪಕ್ಷಕ್ಕೆ ಪೂರ್ಣಾವಧಿ ಅಧ್ಯಕ್ಷರ ನೇಮಕ ವಿಚಾರದಲ್ಲಿ ಹಿರಿಯ ನಾಯಕರ ಅಸಮಾಧಾನ ಭುಗಿಲೆದ್ದಿರುವ ಹೊತ್ತಲ್ಲೇ ದಿಢೀರ್ ಆಗಿ ಎಐಸಿಸಿ ಉಸ್ತುವಾರಿಗಳ ಪುನಾರಚನೆ ಮಾಡಲಾಗಿದೆ. ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಚುನಾವಣಾ ಸಮಿತಿ ಸ್ಥಾನದಿಂದ ಹಿರಿಯ ಮುಖಂಡ ವೀರಪ್ಪ ಮೊಯ್ಲಿಯನ್ನು ಕಿತ್ತು ಹಾಕಲಾಗಿದೆ. ಮೊಯ್ಲಿ ಜಾಗಕ್ಕೆ ಕರ್ನಾಟಕದವರೇ ಆದ ಮಾಜಿ ಸಚಿವ ಕೃಷ್ಣಭೈರೇ ಗೌಡರನ್ನು ನೇಮಕ ಮಾಡಲಾಗಿದೆ. ಅಲ್ಲದೆ, ಕರ್ನಾಟಕದ ದಿನೇಶ್ ಗುಂಡೂರಾವ್, ಎಚ್.ಕೆ ಪಾಟೀಲ್ ಅವರಿಗೆ ಇತರೇ ರಾಜ್ಯಗಳ ಉಸ್ತುವಾರಿ ಹೊಣೆ ನೀಡಲಾಗಿದೆ. ದಿನೇಶ್ ಗುಂಡೂರಾವ್ ಗೆ ತಮಿಳುನಾಡು ಜೊತೆಗೆ ಪಾಂಡಿಚೇರಿ, ಗೋವಾ ರಾಜ್ಯಗಳ ಹೆಚ್ಚುವರಿ ಹೊಣೆ ವಹಿಸಲಾಗಿದೆ. ಉತ್ತರ ಕರ್ನಾಟಕದ ಹಿರಿಯ ಮುಖಂಡ ಎಚ್.ಕೆ ಪಾಟೀಲ್ ಗೆ ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ನೀಡಲಾಗಿದೆ.

ಹಾಗೆಯೇ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಆಗಿದ್ದ ಕೆ.ಸಿ. ವೇಣುಗೋಪಾಲ್ ಸ್ಥಾನಕ್ಕೆ ರಣದೀಪ್ ಸಿಂಗ್ ಸುರ್ಜೇವಾಲಾರನ್ನು ತರಲಾಗಿದೆ. ಅಲ್ಲದೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮಲ್ಲಿಕಾರ್ಜುನ ಖರ್ಗೆ ಮತ್ತು ಗುಲಾಂ ನಬಿ ಆಜಾದ್ ಅವರನ್ನೂ ತೆಗೆದು ಹಾಕಲಾಗಿದೆ. ಯುವ ಘಟಕದ ರಾಷ್ಟ್ರೀಯ ಅಧ್ಯಕ್ಷ ಎ.ವಿ. ಶ್ರೀನಿವಾಸ್ ಅವರನ್ನು ಎಐಸಿಸಿ ವಿಶೇಷ ಆಹ್ವಾನಿತರಾಗಿ ನೇಮಕ ಮಾಡಲಾಗಿದೆ.
ಇತ್ತೀಚೆಗೆ ವೀರಪ್ಪ ಮೊಯ್ಲಿ , ಗುಲಾಂ ನಬಿ ಆಜಾದ್, ಕಪಿಲ್ ಸಿಬಲ್, ಶಶಿ ತರೂರ್ ಸೇರಿದಂತೆ 23 ಮಂದಿ ಹಿರಿಯ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಪೂರ್ಣಾವಧಿ ಅಧ್ಯಕ್ಷರ ಅಗತ್ಯದ ಬಗ್ಗೆ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದರು. ಪತ್ರ ಮಾಧ್ಯಮಕ್ಕೆ ಬಹಿರಂಗ ಆಗಿದ್ದು ಗಾಂಧಿ ಕುಟುಂಬ ಮತ್ತು ಎಐಸಿಸಿ ಪ್ರಮುಖರ ಅಸಮಾಧಾನಕ್ಕೆ ಕಾರಣವಾಗಿತ್ತು. ಆನಂತರ ಗುಲಾಂ ನಬಿ ಆಜಾದ್ ಮತ್ತು ವೀರಪ್ಪ ಮೊಯ್ಲಿ ತಾವು ಪತ್ರಕ್ಕೆ ಸಹಿ ಹಾಕಿದ್ದನ್ನು ಒಪ್ಪಿಕೊಂಡಿದ್ದರಲ್ಲದೆ, ಪಕ್ಷದ ಒಳಿತಿಗಾಗಿ ಪತ್ರ ಬರೆದಿದ್ದು ಸತ್ಯ ಎಂದಿದ್ದರು. ಇದೀಗ ವೀರಪ್ಪ ಮೊಯ್ಲಿಯನ್ನು ಕೇಂದ್ರ ಚುನಾವಣಾ ಸಮಿತಿಯಿಂದ ಹೊರಗಿಡಲಾಗಿದೆ. ಗುಲಾಂ ನಬಿ ಆಜಾದನ್ನು ರಾಷ್ಟ್ರೀಯ ಕಾರ್ಯದರ್ಶಿ ಹುದ್ದೆಯಿಂದ ತೆಗೆದು ಹಾಕಲಾಗಿದೆ.
14-01-26 01:34 pm
Bangalore Correspondent
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm