ಬ್ರೇಕಿಂಗ್ ನ್ಯೂಸ್
11-09-20 11:36 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 11: ಕಾಂಗ್ರೆಸ್ ಪಕ್ಷಕ್ಕೆ ಪೂರ್ಣಾವಧಿ ಅಧ್ಯಕ್ಷರ ನೇಮಕ ವಿಚಾರದಲ್ಲಿ ಹಿರಿಯ ನಾಯಕರ ಅಸಮಾಧಾನ ಭುಗಿಲೆದ್ದಿರುವ ಹೊತ್ತಲ್ಲೇ ದಿಢೀರ್ ಆಗಿ ಎಐಸಿಸಿ ಉಸ್ತುವಾರಿಗಳ ಪುನಾರಚನೆ ಮಾಡಲಾಗಿದೆ. ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಚುನಾವಣಾ ಸಮಿತಿ ಸ್ಥಾನದಿಂದ ಹಿರಿಯ ಮುಖಂಡ ವೀರಪ್ಪ ಮೊಯ್ಲಿಯನ್ನು ಕಿತ್ತು ಹಾಕಲಾಗಿದೆ. ಮೊಯ್ಲಿ ಜಾಗಕ್ಕೆ ಕರ್ನಾಟಕದವರೇ ಆದ ಮಾಜಿ ಸಚಿವ ಕೃಷ್ಣಭೈರೇ ಗೌಡರನ್ನು ನೇಮಕ ಮಾಡಲಾಗಿದೆ. ಅಲ್ಲದೆ, ಕರ್ನಾಟಕದ ದಿನೇಶ್ ಗುಂಡೂರಾವ್, ಎಚ್.ಕೆ ಪಾಟೀಲ್ ಅವರಿಗೆ ಇತರೇ ರಾಜ್ಯಗಳ ಉಸ್ತುವಾರಿ ಹೊಣೆ ನೀಡಲಾಗಿದೆ. ದಿನೇಶ್ ಗುಂಡೂರಾವ್ ಗೆ ತಮಿಳುನಾಡು ಜೊತೆಗೆ ಪಾಂಡಿಚೇರಿ, ಗೋವಾ ರಾಜ್ಯಗಳ ಹೆಚ್ಚುವರಿ ಹೊಣೆ ವಹಿಸಲಾಗಿದೆ. ಉತ್ತರ ಕರ್ನಾಟಕದ ಹಿರಿಯ ಮುಖಂಡ ಎಚ್.ಕೆ ಪಾಟೀಲ್ ಗೆ ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ನೀಡಲಾಗಿದೆ.

ಹಾಗೆಯೇ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಆಗಿದ್ದ ಕೆ.ಸಿ. ವೇಣುಗೋಪಾಲ್ ಸ್ಥಾನಕ್ಕೆ ರಣದೀಪ್ ಸಿಂಗ್ ಸುರ್ಜೇವಾಲಾರನ್ನು ತರಲಾಗಿದೆ. ಅಲ್ಲದೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮಲ್ಲಿಕಾರ್ಜುನ ಖರ್ಗೆ ಮತ್ತು ಗುಲಾಂ ನಬಿ ಆಜಾದ್ ಅವರನ್ನೂ ತೆಗೆದು ಹಾಕಲಾಗಿದೆ. ಯುವ ಘಟಕದ ರಾಷ್ಟ್ರೀಯ ಅಧ್ಯಕ್ಷ ಎ.ವಿ. ಶ್ರೀನಿವಾಸ್ ಅವರನ್ನು ಎಐಸಿಸಿ ವಿಶೇಷ ಆಹ್ವಾನಿತರಾಗಿ ನೇಮಕ ಮಾಡಲಾಗಿದೆ.
ಇತ್ತೀಚೆಗೆ ವೀರಪ್ಪ ಮೊಯ್ಲಿ , ಗುಲಾಂ ನಬಿ ಆಜಾದ್, ಕಪಿಲ್ ಸಿಬಲ್, ಶಶಿ ತರೂರ್ ಸೇರಿದಂತೆ 23 ಮಂದಿ ಹಿರಿಯ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಪೂರ್ಣಾವಧಿ ಅಧ್ಯಕ್ಷರ ಅಗತ್ಯದ ಬಗ್ಗೆ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದರು. ಪತ್ರ ಮಾಧ್ಯಮಕ್ಕೆ ಬಹಿರಂಗ ಆಗಿದ್ದು ಗಾಂಧಿ ಕುಟುಂಬ ಮತ್ತು ಎಐಸಿಸಿ ಪ್ರಮುಖರ ಅಸಮಾಧಾನಕ್ಕೆ ಕಾರಣವಾಗಿತ್ತು. ಆನಂತರ ಗುಲಾಂ ನಬಿ ಆಜಾದ್ ಮತ್ತು ವೀರಪ್ಪ ಮೊಯ್ಲಿ ತಾವು ಪತ್ರಕ್ಕೆ ಸಹಿ ಹಾಕಿದ್ದನ್ನು ಒಪ್ಪಿಕೊಂಡಿದ್ದರಲ್ಲದೆ, ಪಕ್ಷದ ಒಳಿತಿಗಾಗಿ ಪತ್ರ ಬರೆದಿದ್ದು ಸತ್ಯ ಎಂದಿದ್ದರು. ಇದೀಗ ವೀರಪ್ಪ ಮೊಯ್ಲಿಯನ್ನು ಕೇಂದ್ರ ಚುನಾವಣಾ ಸಮಿತಿಯಿಂದ ಹೊರಗಿಡಲಾಗಿದೆ. ಗುಲಾಂ ನಬಿ ಆಜಾದನ್ನು ರಾಷ್ಟ್ರೀಯ ಕಾರ್ಯದರ್ಶಿ ಹುದ್ದೆಯಿಂದ ತೆಗೆದು ಹಾಕಲಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm