ಬ್ರೇಕಿಂಗ್ ನ್ಯೂಸ್
12-09-20 02:43 pm Headline Karnataka News Network ದೇಶ - ವಿದೇಶ
ಮಂಡ್ಯ, ಸೆಪ್ಟೆಂಬರ್ 12: ಡ್ರಗ್ಸ್ ದಂಧೆಯಲ್ಲಿ ಜಮೀರ್ 100% ಇದ್ದಾರೆ, ಅದರಲ್ಲಿ ಸಂಶಯವಿಲ್ಲ. ರಾಜಕಾರಣದಲ್ಲಿ ಇಂಟರ್ನಲ್ ವ್ಯವಹಾರ ಇಟ್ಟುಕೊಂಡಿರೋದರಿಂದ ಜಮೀರನನ್ನು ಅರೆಸ್ಟ್ ಮಾಡ್ತಿಲ್ಲ. ಹೀಗೆಂದು ಸರಕಾರವನ್ನು ಜರೆದವರು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್.
ಮಂಡ್ಯದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಮುತಾಲಿಕ್, ಈ ಡ್ರಗ್ಸ್ ದಂಧೆಯಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎಲ್ಲ ಪಕ್ಷಗಳವರೂ ಇದ್ದಾರೆ. ಇವ್ರೀಗ ಧಮ್ ತೋರಿಸಬೇಕು. ಜಮೀರ ಆಗಿರಲಿ, ಯಾರೇ ಇದ್ದರೂ ಒದ್ದು ಒಳಗೆ ಹಾಕಬೇಕು ಎಂದು ಆಗ್ರಹಿಸಿದ್ದಾರೆ.
ನಟಿ ಸಂಜನಾ ಜೊತೆಗೆ ಆಕೆಯ ಗಂಡ ಅಜೀದ್ ಕೂಡ ಡ್ರಗ್ ದಂಧೆಯಲ್ಲಿ ಇದ್ದಾನೆ. ಇನ್ನು ಲವ್ ಜಿಹಾದ್ ಮತ್ತು ಡ್ರಗ್ಸ್ ದಂಧೆ ಇವೆರಡಕ್ಕೂ ನೇರ ಕನೆಕ್ಟ್ ಇದೆ. ಇವೆಲ್ಲ ಪಾತಕಗಳಿಗೆ ಪಾಕಿಸ್ತಾನದಲ್ಲಿ ಕುಳಿತ ದಾವೂದ್ ಇಬ್ರಾಹಿಮನೇ ಮೂಲ ಪುರುಷ. ಹಿಂದೆ ಅಜೀಮ್ ಅಸ್ತಾನ ಎಂಬ ದೇಶದ್ರೋಹಿ ಇದ್ದ. ಇವರೆಲ್ಲರೂ ಇಡೀ ಚಿತ್ರರಂಗವನ್ನು ಆವರಿಸಿದ್ದಾರೆ. ಬಾಲಿವುಡ್ ಸೇರಿ ಎಲ್ಲ ಕಡೆಯೂ ಇವರ ಕಬಂಧ ಬಾಹು ಇದೆ ಎಂದಿದ್ದಾರೆ ಮುತಾಲಿಕ್.

ಈ ಜಮೀರ ತನ್ನ ಚುನಾವಣಾ ಪ್ರಚಾರಕ್ಕೆ ಮುಂಬೈನಿಂದ ಚಿತ್ರ ನಟ- ನಟಿಯರನ್ನು ಕರೆಸುತ್ತಾರೆ. ಏನ್ ಸುಮ್ನೆ ಬರ್ತಾರಾ ಅವ್ರೆಲ್ಲ.. ವ್ಯವಸ್ಥಿತ ಜಾಲದಲ್ಲಿ ಜಮೀರ್ ಇರೋದು ನಿಶ್ಚಿತವಾಗಿದೆ. ಈಗ ಬಿಜೆಪಿ ಸರಕಾರ ಧಮ್ ತೋರಿಸಬೇಕು. ಜಮೀರ್ ನನ್ನು ಒದ್ದು ಒಳಗೆ ಹಾಕಬೇಕು, ಪಾದರಾಯನಪುರ, ಡಿಜೆ ಹಳ್ಳಿ ಗಲಾಟೆಗೂ ಡ್ರಗ್ಸ್ ಕಾರಣ ಆಗಿತ್ತು. ಆಗೆಲ್ಲ ಜಮೀರ್ ಹೆಸರು ಕೂಡ ಕೇಳಿಬಂದಿತ್ತು. ಈಗ ಅವಕಾಶ ಬಂದಿದೆ, ಈತನನ್ನು ಜೈಲಿಗೆ ತಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಡ್ರಗ್ಸ್ ಪ್ರಕರಣವನ್ನು ಸಿಬಿಐಗೆ ವಹಿಸಬಾರದು. ಸಿಬಿಐ ಬಗ್ಗೆ ವಿಶ್ವಾಸವಿಲ್ಲ. ಎಲ್ಲ ಸೇರಿ ಮುಚ್ಚಿ ಹಾಕುತ್ತಾರೆ ಎಂದು ಹೇಳಿದರು.
Join our WhatsApp group for latest news updates
14-01-26 02:54 pm
Bangalore Correspondent
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm