ಬ್ರೇಕಿಂಗ್ ನ್ಯೂಸ್
11-11-21 04:58 pm HK News Desk ದೇಶ - ವಿದೇಶ
ಮುಂಬೈ, ನ.11: ಮುಂಬೈ, ಪುಣೆ ಸೇರಿ ಮಹಾರಾಷ್ಟ್ರದಲ್ಲಿ ನೆಲೆಸಿರುವ ಕರ್ನಾಟಕದ ಕರಾವಳಿಯ ತುಳುವರು ಮತ್ತು ಕನ್ನಡಿಗರಿಗೆ ತಾಯ್ನಾಡಿಗೆ ಬರಲು ಆರ್ ಟಿಪಿಸಿಆರ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ ನೀತಿಯನ್ನು ಕರ್ನಾಟಕ ಸರಕಾರ ಹಿಂಪಡೆಯಬೇಕೆಂದು ಮುಂಬೈ ಕನ್ನಡಿಗರು ಆಗ್ರಹಿಸಿದ್ದಾರೆ.
ಈ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಪತ್ರ ಬರೆದಿರುವ ಮುಂಬೈ ಬಿಜೆಪಿ ಕಾನೂನು ಪ್ರಕೋಷ್ಠದ ಅಧ್ಯಕ್ಷ ಮೋರ್ಲ ರತ್ನಾಕರ ಶೆಟ್ಟಿ , ರಸ್ತೆ ಪ್ರಯಾಣ, ವಿಮಾನ, ರೈಲು ಮೂಲಕ ತಾಯ್ನಾಡಿಗೆ ಆಗಮಿಸುವ ಕನ್ನಡಿಗರಿಗೆ ಕೋವಿಡ್ ನೆಗೆಟಿವ್ ಪ್ರಮಾಣಪತ್ರದಿಂದ ವಿನಾಯ್ತಿ ನೀಡಬೇಕು. ಹಲವು ತಿಂಗಳಿಂದ 72 ಗಂಟೆಗಳ ಒಳಗೆ ಟೆಸ್ಟ್ ಮಾಡಿರುವ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ನೀತಿ ಜಾರಿಯಲ್ಲಿದೆ. ಆದರೆ ಈಗ ಮಹಾರಾಷ್ಟ್ರದಲ್ಲಿ ಕೋವಿಡ್ ಪರಿಸ್ಥಿತಿ ಬದಲಾಗಿದ್ದು 90 ಶೇ. ಸೋಂಕು ಇಳಿಕೆಯಾಗಿದೆ.
ಕೇಂದ್ರ ಸರಕಾರವೂ ಕೋವಿಡ್ ಲಸಿಕೆ ಪಡೆದಿರುವ ಮಂದಿಗೆ ದೇಶೀಯ ವಿಮಾನ ಪ್ರಯಾಣಕ್ಕೆ ಹೊಸ ಮಾರ್ಗಸೂಚಿಯಲ್ಲಿ ವಿನಾಯ್ತಿ ನೀಡಿದ್ದಾರೆ. ಆದರೆ ಕರ್ನಾಟಕ ಸರಕಾರ ಮಾತ್ರ ರೈಲು ಮತ್ತು ವಿಮಾನದಲ್ಲಿ ಹೊರ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕೇಳುತ್ತಿದೆ. ಇದರಿಂದ ಕನ್ನಡಿಗರು ತಮ್ಮ ಊರಿಗೆ ತೆರಳುವ ಸಂದರ್ಭದಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಕರ್ನಾಟಕ ಸರಕಾರ ಕೋವಿಡ್ ನೆಗೆಟಿವ್ ಕಡ್ಡಾಯ ನೀತಿಯಿಂದ ವಿನಾಯ್ತಿ ನೀಡಬೇಕು. ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿರುವ ಮತ್ತು ಯಾವುದೇ ಸೋಂಕಿನ ಲಕ್ಷಣ ಇಲ್ಲದಿರುವ ಜನರಿಗೆ ಕರ್ನಾಟಕ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಮುಂಬೈ ಬಿಜೆಪಿ ಘಟಕದ ಮುಖಂಡ ಮೋರ್ಲ ರತ್ನಾಕರ ಶೆಟ್ಟಿ ಕರ್ನಾಟಕದ ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.
Mumbai BJP leader writes a letter to govt of Karnataka to stop asking for a Negative Covid certificate to people travelling via train, bus and flight.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm