ಬ್ರೇಕಿಂಗ್ ನ್ಯೂಸ್
30-07-20 12:13 pm Correspondent ದೇಶ - ವಿದೇಶ
ನವದೆಹಲಿ(ಜುಲೈ 30): ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಆರ್ಥಿಕ ಹೊರೆ ತಗ್ಗಿಸುವ ಉದ್ದೇಶದಿಂದ ಡೀಸೆಲ್ ಮೇಲೆ ಶೇ. 30ರಷ್ಟು ವ್ಯಾಟ್ ತೆರಿಗೆ ವಿಧಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈಗ ಅರ್ಧದಷ್ಟು ತಗ್ಗಿಸಿದ್ಧಾರೆ. ದೆಹಲಿಯಲ್ಲಿ ಈಗ ವ್ಯಾಟ್ ತೆರಿಗೆಯನ್ನು ಶೇ. 16.75ಕ್ಕೆ ಇಳಿಸಲಾಗಿದೆ. ಇದರಿಂದ ಡೀಸೆಲ್ ಬೆಲೆ ದೆಹಲಿಯಲ್ಲಿ ಲೀಟರ್ಗೆ 8.36 ರೂಪಾಯಿಯಷ್ಟು ಕಡಿಮೆ ಆಗಲಿದೆ.
ಲೀಟರ್ಗೆ 82 ರೂ ಇರುವ ಡೀಸೆಲ್ ಬೆಲೆ ಈಗ 73.64ಕ್ಕೆ ಇಳಿಕೆಯಾಗಲಿದೆ. ರಾಜಧಾನಿ ನಗರದ ಉದ್ಯಮಿಗಳು ಮತ್ತು ವರ್ತಕರ ಬೇಡಿಕೆ ಮೇರೆಗೆ ವ್ಯಾಟ್ ಇಳಿಕೆಯ ಈ ಕ್ರಮ ಕೈಗೊಳ್ಳಲಾಗಿದೆ. ಡೀಸೆಲ್ ಬೆಲೆ ಇಳಿಕೆಯಿಂದ ದೆಹಲಿಯ ಆರ್ಥಿಕತೆಗೆ ಪುಷ್ಟಿ ಸಿಗುತ್ತದೆ ಎಂದು ಕೇಜ್ರಿವಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಡೀಸೆಲ್ಗೆ ನಮ್ಮ ದೇಶದಲ್ಲಿ ಮೊದಲಿಂದಲೂ ಕಡಿಮೆ ಸುಂಕ ವಿಧಿಸಲಾಗುತ್ತಿದೆ. ಇದರಿಂದಾಗಿ ಪೆಟ್ರೋಲ್ಗಿಂತ ಡೀಸೆಲ್ ಯಾವಾಗಲೂ ಬೆಲೆ ಕಡಿಮೆಯೇ. ಆದರೆ, ಕೊರೋನಾ ಸಂಕಷ್ಟದ ಪರಿಸ್ಥಿತಿಯಲ್ಲಿ ಆರ್ಥಿಕತೆ ಸುಧಾರಿಸಲು ಮತ್ತು ಮಾಲಿನ್ಯಕಾರಕ ಡಿಸೆಲ್ಗೆ ಕಡಿವಾಣ ಹಾಕುವ ಉದ್ದೇಶದಿಂದ ದೆಹಲಿ ಸರ್ಕಾರ ಡೀಸೆಲ್ ಮೇಲೆ ವ್ಯಾಟ್ ತೆರಿಗೆಯನ್ನು ಶೇ. 30ರಷ್ಟು ಹೇರಲು ನಿರ್ಧರಿಸಿತ್ತು. ಇದರಿಂದ ಪೆಟ್ರೋಲ್ಗಿಂತ ಇಲ್ಲಿ ಡೀಸೆಲ್ ದುಬಾರಿಯಾಗಿತ್ತು. ಕಳೆದ ತಿಂಗಳು 18 ದಿನಗಳಲ್ಲಿ ಪೆಟ್ರೋಲ್ ಬೆಲೆ 8.50 ರೂ ಏರಿಕೆಯಾದರೆ, ಡೀಸೆಲ್ 10.48 ರೂ ಬೆಲೆ ಹೆಚ್ಚಳ ಕಂಡಿತ್ತು. ಇದರಿಂದ ಹಲವು ಕಡೆಗಳಿಂದ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಸೇರಲಾಗಿದ್ದ ಸಂಪುಟ ಸಭೆಯಲ್ಲಿ ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಯನ್ನು ಇಳಿಕೆ ಮಾಡುವ ನಿರ್ಧಾರಕ್ಕೆ ಬರಲಾಗಿದೆ.
ಡೀಸೆಲ್ ಮತ್ತು ಪೆಟ್ರೋಲ್ಗೆ ಕೇಂದ್ರ ಸರ್ಕಾರ ಈಗ ಸರಿಸುಮಾರು ಒಂದೇ ಮೊತ್ತದ ತೆರಿಗೆ ವಿಧಿಸುತ್ತದೆ. ಪೆಟ್ರೋಲ್ ಮೇಲೆ ಕೇಂದ್ರ ಸುಂಕ 32.98 ರೂ ಇದೆ. ಡೀಸೆಲ್ ಮೇಲೆ 31.83 ಇದೆ. ರಾಜ್ಯ ಸರ್ಕಾರಗಳೂ ಕೂಡ ವ್ಯಾಟ್ನಂಥ ತೆರಿಗೆಯನ್ನು ಹೆಚ್ಚುವರಿಯಾಗಿ ವಿಧಿಸುತ್ತವೆ. ಹೀಗಾಗಿ, ರಾಜ್ಯದಿಂದ ರಾಜ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ವ್ಯತ್ಯಾಸ ಇರುತ್ತದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm