ಬ್ರೇಕಿಂಗ್ ನ್ಯೂಸ್
13-09-20 09:28 am Headline Karnataka News Network ದೇಶ - ವಿದೇಶ
ಮಂಗಳೂರು, ಸೆಪ್ಟೆಂಬರ್.13: ಲಾಕ್ ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ದಕ್ಷಿಣ ಕನ್ನಡ ಹಾಗು ಕಾಸರಗೋಡು ಬಸ್ ಸಂಚಾರಕ್ಕೆ ಈಗ ಮತ್ತೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಕಳೆದ ಸುಮಾರು ಆರು ತಿಂಗಳ ಬಳಿಕ ಕಾಸರಗೋಡು - ಮಂಗಳೂರು ನಡುವೆ ಅಂತಾರಾಜ್ಯ ಬಸ್ ಸಂಚಾರವನ್ನು ಸೆ.21ರಿಂದ ಆರಂಭಿಸಲು ಕಾಸರಗೋಡು ಜಿಲ್ಲಾಡಳಿತ ನಿರ್ಧರಿಸಿದೆ.
ಅಂತಾರಾಜ್ಯ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಎರಡೂ ಜಿಲ್ಲೆಯ ಜನತೆ ನಿಟ್ಟುಸಿರು ಬಿಡುವಂತಾಗಿದೆ.
ಕೇರಳದಿಂದ ಮಂಗಳೂರಿಗೆ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದು ಕಾಸರಗೋಡು ಜಿಲ್ಲಾಡಳಿತ. ಆದರೆ ಇತ್ತ ಕರ್ನಾಟಕ ಕೆ ಎಸ್ ಆರ್ ಟಿ ಸಿ ಈ ಬಗ್ಗೆ ಇನ್ನೂ ನಿರ್ಧಾರ ಪ್ರಕಟಿಸಿಲ್ಲ. ಇನ್ನೂ ಹತ್ತು ದಿನಗಳ ಕಾಲಾವಕಾಶ ಇರುವುದರಿಂದ ಸಂಚಾರಕ್ಕೆ ಅನುಮತಿ ಸಿಗುವ ಸಾಧ್ಯತೆಯೂ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಮಂಗಳೂರಿನಿಂದ ಕಾಸರಗೋಡಿಗೆ ಬಸ್ ಸಂಚಾರ ಆರಂಭಿಸಲು ಇನ್ನೂ ಅನುಮತಿ ಸಿಕ್ಕಿಲ್ಲ. ಈ ಬಗ್ಗೆ ಸೋಮವಾರ ಮೇಲಧಿಕಾರಿಗಳ ಬಳಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಕೆ ಎಸ್ ಆರ್ ಟಿ ಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಸೆ.21ರಂದು ಸಂಚಾರ ಆರಂಭಿಸಲಿರುವ ಕೇರಳ ಬಸ್ನಲ್ಲಿ ತಲಾ 40 ಪ್ರಯಾಣಿಕರಿಗೆ ಮಾತ್ರ ಸಂಚಾರಕ್ಕೆ ಅವಕಾಶ ಸಿಗಲಿದೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಈ ಬಸ್ಗಳು ಸಂಚರಿಸಲಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಮೊದಲ ಹಂತದಲ್ಲಿ ಕಾಸರಗೋಡು - ಮಂಗಳೂರು, ಕಾಸರಗೋಡು - ಪಂಜಿಕಲ್ಲು ರೂಟ್ನಲ್ಲಿ ಮಾತ್ರವೇ ಬಸ್ ಸಂಚಾರ ನಡೆಸಲಿವೆ. ಬಸ್ ಸಂಚಾರದ ಆದೇಶ ಮತ್ತು ಮಾರ್ಗಸೂಚಿಯನ್ನು ಇನ್ನಷ್ಟೇ ಕೇರಳ ಸರಕಾರ ಬಿಡುಗಡೆಗೊಳಿಸಬೇಕಿದೆ.
ಲಾಕ್ಡೌನ್ ಅವಧಿಯಲ್ಲಿ ಉಭಯ ಜಿಲ್ಲೆಗಳು ತಮ್ಮ ಗಡಿಗಳನ್ನು ಬಂದ್ಗೊಳಿಸಿದ್ದವು. ಈ ನಡುವೆ ಎರಡೂ ಜಿಲ್ಲಾಡಳಿತಗಳ ನಡುವೆ ಸಂವಹನ ಕೊರತೆಯಿಂದ ಅನೇಕ ನಿರ್ಧಾರಗಳಲ್ಲಿ ವ್ಯತಿರಿಕ್ತತೆ ಕಂಡುಬಂದಿತ್ತು. ಇತ್ತೀಚೆಗೆ ನಾಲ್ಕು ಗಡಿ ರಸ್ತೆಗಳನ್ನು ತೆರವುಗೊಳಿಸುವಂತೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದ ಬಳಿಕ ಸಂಚಾರ ಸ್ವಲ್ಪ ಮಟ್ಟಿಗೆ ಮುಕ್ತವಾಗಿದೆ. ಆದರೆ ಕೆ ಎಸ್ ಆರ್ ಟಿ ಸಿ ಮಾತ್ರ ಸಂಚಾರ ಆರಂಭಿಸಿರಲಿಲ್ಲ
15-04-26 03:15 pm
HK News Staffer
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
15-04-26 05:29 pm
HK News Staffer
ಚಿಕ್ಕೋಡಿಯಲ್ಲಿ ಮಾನಗೇಡಿ ಹತ್ಯೆ; ಪತಿಯನ್ನು ಬಿಟ್ಟು...
15-04-26 05:03 pm
ಕೌಟುಂಬಿಕ ಕಲಹ ; 14 ವರ್ಷದ ಮಗಳನ್ನು ಉಸಿರುಗಟ್ಟಿಸಿ...
14-04-26 11:16 pm
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am