ಬ್ರೇಕಿಂಗ್ ನ್ಯೂಸ್
13-09-20 09:28 am Headline Karnataka News Network ದೇಶ - ವಿದೇಶ
ಮಂಗಳೂರು, ಸೆಪ್ಟೆಂಬರ್.13: ಲಾಕ್ ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ದಕ್ಷಿಣ ಕನ್ನಡ ಹಾಗು ಕಾಸರಗೋಡು ಬಸ್ ಸಂಚಾರಕ್ಕೆ ಈಗ ಮತ್ತೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಕಳೆದ ಸುಮಾರು ಆರು ತಿಂಗಳ ಬಳಿಕ ಕಾಸರಗೋಡು - ಮಂಗಳೂರು ನಡುವೆ ಅಂತಾರಾಜ್ಯ ಬಸ್ ಸಂಚಾರವನ್ನು ಸೆ.21ರಿಂದ ಆರಂಭಿಸಲು ಕಾಸರಗೋಡು ಜಿಲ್ಲಾಡಳಿತ ನಿರ್ಧರಿಸಿದೆ.
ಅಂತಾರಾಜ್ಯ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಎರಡೂ ಜಿಲ್ಲೆಯ ಜನತೆ ನಿಟ್ಟುಸಿರು ಬಿಡುವಂತಾಗಿದೆ.
ಕೇರಳದಿಂದ ಮಂಗಳೂರಿಗೆ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದು ಕಾಸರಗೋಡು ಜಿಲ್ಲಾಡಳಿತ. ಆದರೆ ಇತ್ತ ಕರ್ನಾಟಕ ಕೆ ಎಸ್ ಆರ್ ಟಿ ಸಿ ಈ ಬಗ್ಗೆ ಇನ್ನೂ ನಿರ್ಧಾರ ಪ್ರಕಟಿಸಿಲ್ಲ. ಇನ್ನೂ ಹತ್ತು ದಿನಗಳ ಕಾಲಾವಕಾಶ ಇರುವುದರಿಂದ ಸಂಚಾರಕ್ಕೆ ಅನುಮತಿ ಸಿಗುವ ಸಾಧ್ಯತೆಯೂ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಮಂಗಳೂರಿನಿಂದ ಕಾಸರಗೋಡಿಗೆ ಬಸ್ ಸಂಚಾರ ಆರಂಭಿಸಲು ಇನ್ನೂ ಅನುಮತಿ ಸಿಕ್ಕಿಲ್ಲ. ಈ ಬಗ್ಗೆ ಸೋಮವಾರ ಮೇಲಧಿಕಾರಿಗಳ ಬಳಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಕೆ ಎಸ್ ಆರ್ ಟಿ ಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಸೆ.21ರಂದು ಸಂಚಾರ ಆರಂಭಿಸಲಿರುವ ಕೇರಳ ಬಸ್ನಲ್ಲಿ ತಲಾ 40 ಪ್ರಯಾಣಿಕರಿಗೆ ಮಾತ್ರ ಸಂಚಾರಕ್ಕೆ ಅವಕಾಶ ಸಿಗಲಿದೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಈ ಬಸ್ಗಳು ಸಂಚರಿಸಲಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಮೊದಲ ಹಂತದಲ್ಲಿ ಕಾಸರಗೋಡು - ಮಂಗಳೂರು, ಕಾಸರಗೋಡು - ಪಂಜಿಕಲ್ಲು ರೂಟ್ನಲ್ಲಿ ಮಾತ್ರವೇ ಬಸ್ ಸಂಚಾರ ನಡೆಸಲಿವೆ. ಬಸ್ ಸಂಚಾರದ ಆದೇಶ ಮತ್ತು ಮಾರ್ಗಸೂಚಿಯನ್ನು ಇನ್ನಷ್ಟೇ ಕೇರಳ ಸರಕಾರ ಬಿಡುಗಡೆಗೊಳಿಸಬೇಕಿದೆ.
ಲಾಕ್ಡೌನ್ ಅವಧಿಯಲ್ಲಿ ಉಭಯ ಜಿಲ್ಲೆಗಳು ತಮ್ಮ ಗಡಿಗಳನ್ನು ಬಂದ್ಗೊಳಿಸಿದ್ದವು. ಈ ನಡುವೆ ಎರಡೂ ಜಿಲ್ಲಾಡಳಿತಗಳ ನಡುವೆ ಸಂವಹನ ಕೊರತೆಯಿಂದ ಅನೇಕ ನಿರ್ಧಾರಗಳಲ್ಲಿ ವ್ಯತಿರಿಕ್ತತೆ ಕಂಡುಬಂದಿತ್ತು. ಇತ್ತೀಚೆಗೆ ನಾಲ್ಕು ಗಡಿ ರಸ್ತೆಗಳನ್ನು ತೆರವುಗೊಳಿಸುವಂತೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದ ಬಳಿಕ ಸಂಚಾರ ಸ್ವಲ್ಪ ಮಟ್ಟಿಗೆ ಮುಕ್ತವಾಗಿದೆ. ಆದರೆ ಕೆ ಎಸ್ ಆರ್ ಟಿ ಸಿ ಮಾತ್ರ ಸಂಚಾರ ಆರಂಭಿಸಿರಲಿಲ್ಲ
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm