ಬ್ರೇಕಿಂಗ್ ನ್ಯೂಸ್
13-09-20 09:28 am Headline Karnataka News Network ದೇಶ - ವಿದೇಶ
ಮಂಗಳೂರು, ಸೆಪ್ಟೆಂಬರ್.13: ಲಾಕ್ ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ದಕ್ಷಿಣ ಕನ್ನಡ ಹಾಗು ಕಾಸರಗೋಡು ಬಸ್ ಸಂಚಾರಕ್ಕೆ ಈಗ ಮತ್ತೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಕಳೆದ ಸುಮಾರು ಆರು ತಿಂಗಳ ಬಳಿಕ ಕಾಸರಗೋಡು - ಮಂಗಳೂರು ನಡುವೆ ಅಂತಾರಾಜ್ಯ ಬಸ್ ಸಂಚಾರವನ್ನು ಸೆ.21ರಿಂದ ಆರಂಭಿಸಲು ಕಾಸರಗೋಡು ಜಿಲ್ಲಾಡಳಿತ ನಿರ್ಧರಿಸಿದೆ.
ಅಂತಾರಾಜ್ಯ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಎರಡೂ ಜಿಲ್ಲೆಯ ಜನತೆ ನಿಟ್ಟುಸಿರು ಬಿಡುವಂತಾಗಿದೆ.
ಕೇರಳದಿಂದ ಮಂಗಳೂರಿಗೆ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದು ಕಾಸರಗೋಡು ಜಿಲ್ಲಾಡಳಿತ. ಆದರೆ ಇತ್ತ ಕರ್ನಾಟಕ ಕೆ ಎಸ್ ಆರ್ ಟಿ ಸಿ ಈ ಬಗ್ಗೆ ಇನ್ನೂ ನಿರ್ಧಾರ ಪ್ರಕಟಿಸಿಲ್ಲ. ಇನ್ನೂ ಹತ್ತು ದಿನಗಳ ಕಾಲಾವಕಾಶ ಇರುವುದರಿಂದ ಸಂಚಾರಕ್ಕೆ ಅನುಮತಿ ಸಿಗುವ ಸಾಧ್ಯತೆಯೂ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಮಂಗಳೂರಿನಿಂದ ಕಾಸರಗೋಡಿಗೆ ಬಸ್ ಸಂಚಾರ ಆರಂಭಿಸಲು ಇನ್ನೂ ಅನುಮತಿ ಸಿಕ್ಕಿಲ್ಲ. ಈ ಬಗ್ಗೆ ಸೋಮವಾರ ಮೇಲಧಿಕಾರಿಗಳ ಬಳಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಕೆ ಎಸ್ ಆರ್ ಟಿ ಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಸೆ.21ರಂದು ಸಂಚಾರ ಆರಂಭಿಸಲಿರುವ ಕೇರಳ ಬಸ್ನಲ್ಲಿ ತಲಾ 40 ಪ್ರಯಾಣಿಕರಿಗೆ ಮಾತ್ರ ಸಂಚಾರಕ್ಕೆ ಅವಕಾಶ ಸಿಗಲಿದೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಈ ಬಸ್ಗಳು ಸಂಚರಿಸಲಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಮೊದಲ ಹಂತದಲ್ಲಿ ಕಾಸರಗೋಡು - ಮಂಗಳೂರು, ಕಾಸರಗೋಡು - ಪಂಜಿಕಲ್ಲು ರೂಟ್ನಲ್ಲಿ ಮಾತ್ರವೇ ಬಸ್ ಸಂಚಾರ ನಡೆಸಲಿವೆ. ಬಸ್ ಸಂಚಾರದ ಆದೇಶ ಮತ್ತು ಮಾರ್ಗಸೂಚಿಯನ್ನು ಇನ್ನಷ್ಟೇ ಕೇರಳ ಸರಕಾರ ಬಿಡುಗಡೆಗೊಳಿಸಬೇಕಿದೆ.
ಲಾಕ್ಡೌನ್ ಅವಧಿಯಲ್ಲಿ ಉಭಯ ಜಿಲ್ಲೆಗಳು ತಮ್ಮ ಗಡಿಗಳನ್ನು ಬಂದ್ಗೊಳಿಸಿದ್ದವು. ಈ ನಡುವೆ ಎರಡೂ ಜಿಲ್ಲಾಡಳಿತಗಳ ನಡುವೆ ಸಂವಹನ ಕೊರತೆಯಿಂದ ಅನೇಕ ನಿರ್ಧಾರಗಳಲ್ಲಿ ವ್ಯತಿರಿಕ್ತತೆ ಕಂಡುಬಂದಿತ್ತು. ಇತ್ತೀಚೆಗೆ ನಾಲ್ಕು ಗಡಿ ರಸ್ತೆಗಳನ್ನು ತೆರವುಗೊಳಿಸುವಂತೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದ ಬಳಿಕ ಸಂಚಾರ ಸ್ವಲ್ಪ ಮಟ್ಟಿಗೆ ಮುಕ್ತವಾಗಿದೆ. ಆದರೆ ಕೆ ಎಸ್ ಆರ್ ಟಿ ಸಿ ಮಾತ್ರ ಸಂಚಾರ ಆರಂಭಿಸಿರಲಿಲ್ಲ
17-10-25 08:39 pm
HK News Desk
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
17-10-25 05:25 pm
HK News Desk
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
17-10-25 09:36 pm
Mangalore Correspondent
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
18-10-25 03:48 pm
Mangalore Correspondent
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm
ಪ್ರೀತಿ ನಿರಾಕರಿಸಿದ ಕಾಲೇಜು ಯುವತಿಯನ್ನು ನಡುರಸ್ತೆಯ...
17-10-25 03:27 pm
Vitla Honeytrap case, Police, Mangalore: ಬಶೀರ...
17-10-25 03:23 pm