ಬ್ರೇಕಿಂಗ್ ನ್ಯೂಸ್
22-11-21 06:20 pm Headline Karnataka News Network ದೇಶ - ವಿದೇಶ
ನವದೆಹಲಿ, ನ.22: ಭಾರತೀಯ ವಾಯುಪಡೆಯ ಗ್ರೂಪ್ ಕ್ಟಾಪ್ಟನ್ ಆಗಿ ಇತ್ತೀಚೆಗೆ ಭಡ್ತಿ ಪಡೆದಿರುವ, ಬಾಲಾಕೋಟ್ ವೈಮಾನಿಕ ದಾಳಿಯ ಹೀರೋ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ವೀರಚಕ್ರ ಪ್ರಶಸ್ತಿಯಿಂದ ಪುರಸ್ಕೃತರಾಗಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವರ್ಧಮಾನ್ ಅವರಿಗೆ ವೀರಚಕ್ರ ಪುರಸ್ಕಾರ ಪ್ರದಾನ ಮಾಡಿದರು.
ಕಳೆದ 2019ರ ಫೆಬ್ರವರಿಯಲ್ಲಿ ಭಾರತ ಸರಕಾರ ಪಾಕಿಸ್ಥಾನ ಆಕ್ರಮಿತ ಕಾಶ್ಮೀರದ ಉಗ್ರರ ಶಿಬಿರಗಳಿಗೆ ಏರ್ ಸ್ಟ್ರೈಕ್ ಮಾಡಿತ್ತು. ಆ ಸಂದರ್ಭದಲ್ಲಿ ಪಾಕಿಸ್ಥಾನದ ಫೈಟರ್ ಜೆಟ್ ಅನ್ನು ತಮ್ಮ ಮಿಗ್ -21 ವಿಮಾನದಲ್ಲಿ ಬೆನ್ನಟ್ಟಿ ಹೋಗಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್, ಫೈಟರ್ ಜೆಟ್ಟನ್ನು ಹೊಡೆದುರುಳಿಸಿದ್ದರು. ಅಲ್ಲದೆ, ಪಾಕಿಸ್ಥಾನದ ವಾಯುಗಡಿ ದಾಟಿ ಹೋಗಿದ್ದರಿಂದ ಸೇನೆಯ ಪ್ರತಿದಾಳಿಗೆ ಸಿಲುಕಿ ಮಿಗ್ ವಿಮಾನ ನೆಲಕ್ಕುರುಳುತ್ತಿದ್ದಂತೆ ಪ್ಯಾರಾಚೂಟ್ ನಲ್ಲಿ ಹಾರಿದ್ದ ಅಭಿನಂದನ್ ಪಾಕಿಸ್ಥಾನ ಸೇನೆಗೆ ಸೆರೆಸಿಕ್ಕಿದ್ದರು.


ಆಬಳಿಕ ಭಾರತ ಸರಕಾರ ಮತ್ತು ಅಂತಾರಾಷ್ಟ್ರೀಯ ಸಮುದಾಯದ ತೀವ್ರ ಒತ್ತಡದ ಹಿನ್ನೆಲೆಯಲ್ಲಿ ಪಾಕ್ ಸರಕಾರ ಅಭಿನಂದನ್ ವರ್ಧಮಾನ್ ಅವರನ್ನು ಮಾರ್ಚ್ 1ರಂದು ಸುರಕ್ಷಿತವಾಗಿ ಬಿಟ್ಟುಕಳಿಸಿತ್ತು. ದಾಳಿಯ ಸಂದರ್ಭದಲ್ಲಿ ತನ್ನ ಪ್ರಾಣ ಲೆಕ್ಕಿಸದೆ ವೀರೋಚಿತ ಪ್ರದರ್ಶನ ನೀಡಿದ್ದ ವರ್ಧಮಾನ್, ಭಾರತ ಮಾತ್ರವಲ್ಲದೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಪ್ರಶಂಸೆಗೆ ಪಾತ್ರರಾಗಿದ್ದರು. ಅಲ್ಲದೆ, ಅಮೆರಿಕ ಮೂಲದ ಎಫ್-16 ಫೈಟರ್ ಜೆಟ್ಟನ್ನು ಸಾಮಾನ್ಯ ಮಿಗ್ ವಿಮಾನದಲ್ಲಿ ಹಾರಿ, ಹೊಡೆದುರುಳಿಸಿದ್ದು ಹುಬ್ಬೇರುವಂತೆ ಮಾಡಿತ್ತು.
ಸಾಹಸದ ಕಾರ್ಯಕ್ಕಾಗಿ ಅಭಿನಂದನ್ ಅವರಿಗೆ ಭಾರತ ಸರಕಾರ ಇತ್ತೀಚೆಗೆ ವೀರಚಕ್ರ ಪ್ರಶಸ್ತಿ ಘೋಷಣೆ ಮಾಡಿತ್ತು. ಇದೀಗ ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ರಾಷ್ಟ್ರಪತಿ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ವಿಂಗ್ ಕಮಾಂಡರ್ ಆಗಿದ್ದ ಅಭಿನಂದನ್ ಅವರಿಗೆ ತಮ್ಮ ಸಾಹಸದ ಪ್ರದರ್ಶನಕ್ಕಾಗಿ ನ.3ರಂದು ಗ್ರೂಪ್ ಕ್ಯಾಪ್ಟನ್ ಆಗಿ ಭಡ್ತಿ ನೀಡಲಾಗಿತ್ತು. ಗ್ರೂಪ್ ಕ್ಯಾಪ್ಟನ್ ಹುದ್ದೆ ಭಾರತೀಯ ಸೇನೆಯಲ್ಲಿ ಕರ್ನಲ್ ಹುದ್ದೆಗೆ ಸಮನಾಗಿದೆ.
Indian Air Force ace pilot Group Captain Abhinandan Varthaman was awarded the Vir Chakra by President Ram Nath Kovind in an investiture ceremony today. Abhinandan Varthaman was recently promoted to the rank of Group Captain. Abhinandan Varthaman shot down a Pakistani F-16 fighter aircraft during aerial combat on February 27 a day after the Balakot airstrike.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm